Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ಉಪನಗರ ರೈಲು ಯೋಜನೆ, ರಸ್ತೆ, ಮೂಲ ಸೌಕರ್ಯಕ್ಕಾಗಿ ಮರಗಳಿಗೆ ಕೊಡಲಿ ಪೆಟ್ಟು; ನಮ್ಮ ಮೆಟ್ರೋ ಯೋಜನೆಗೆ 4078 ಮರ ಕಡಿತ

Team Udayavani, Sep 20, 2024, 11:05 AM IST

3-bng

ಬೆಂಗಳೂರು: ಉಪನಗರ ರೈಲು, ಮೆಟ್ರೋ ಸೇರಿದಂತೆ ಉದ್ಯಾನನಗರಿಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳಲ್ಲಿ 9 ಸಾವಿರಕ್ಕೂ ಅಧಿಕ ಮರಗಿಡಗಳಿಗೆ ಕೊಡಲಿ ಪೆಟ್ಟು ಬಿದ್ದಿದ್ದು, ಸಿಲಿಕಾನ್‌ ಸಿಟಿಯ ಹಸಿರು ಹೊದಿಕೆಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಪರಿಸರಪ್ರೇಮಿಗಳು ಆತಂಕ ಹೊರಹಾಕಿದ್ದಾರೆ.

ಬಿಬಿಎಂಪಿಯ ಅಂಕಿ-ಅಂಶದ ಪ್ರಕಾರ, ಬೆಂಗಳೂರು ಉಪನಗರಗಳನ್ನು ಸಂಪರ್ಕಿಸುವ ರೈಲ್ವೆ ಯೋಜನೆ, ರಸ್ತೆ, ನಮ್ಮ ಮೆಟ್ರೋ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಲುವಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳಿಂದ ಸುಮಾರು 9,703 ಕ್ಕೂ ಅಧಿಕ ಮರಗಳಿಗೆ ಕೊಡಲಿ ಪೆಟ್ಟು ನೀಡಲಾಗಿದೆ.

ನಮ್ಮ ಮೆಟ್ರೋ ಯೋಜನೆಯೊಂದರಿಂದಲೇ ಸುಮಾರು 4,078 ಮರಗಳ ಮಾರಣ ಹೋಮ ಆಗಿದ್ದು, ರೈಲ್ವೆ ಸವಲತ್ತು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ದಿ ಸಂಸ್ಥೆ (ಕೆಆರ್‌ಐಡಿಇ) ಸುಮಾರು 4,926 ಮರಗಳನ್ನು ಕಡಿದು ಹಾಕಿದೆ.

ಬಿಬಿಎಂಪಿಯಿಂದ 699 ಮರಗಳಿಗೆ ಕೊಡಲಿ: ಬಿಬಿಎಂಪಿ ಕೂಡ ಕಳೆದ 3 ವರ್ಷಗಳಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳ ಕಾರ್ಯಗತದ ಉದ್ದೇಶ ದಿಂದ ಸುಮಾರು 699 ಮರಗಳನ್ನು ಬುಡ ಸಮೇತ ತೆಗೆದಿದೆ. ಇದರ ಹೊರತಾಗಿ ಎಚ್‌ಎಎಲ್‌, ಜಲ ಮಂಡಳಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ ಸೇರಿದಂತೆ ಮತ್ತತಿರರ ಅಭಿವೃದ್ಧಿ ಕಾರ್ಯಗಳಿಗಾಗಿ ಮರಗಳನ್ನು ಕಡಿದು ಹಾಕಲಾಗಿದೆ ಎಂದು ಪಾಲಿಕೆ ಅರಣ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಡಿದ ಮರಗಳ ಬದಲಿಗೆ ಹೆಚ್ಚುವರಿ ಗಿಡ: ಈಗಾಗಲೇ ಬೆಂಗಳೂರಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳು ನಡೆದಿವೆ. ಅವುಗಳಿಗಾಗಿ ಕೆಲವು ಕಡೆಗಳಲ್ಲಿ ಮರವನ್ನು ಕಡಿಯಲಾಗಿದೆ. ಆ ಮರಗಳಿಗೆ ಬದಲಾಗಿ ಹೆಚ್ಚುವರಿ ಗಿಡಗಳನ್ನು ನಡೆಯುವ ಪ್ರಕ್ರಿಯೆ ಕೂಡ ನಡೆದಿದೆ. ವಿವಿಧ ಸಂಸ್ಥೆಗಳು ಮರಗಿಡಗಳನ್ನು ನೆಟ್ಟಿರುವ ಬಗ್ಗೆ ಖಾತರಿ ದೊರೆತ ನಂತರ ಮರಗಿಡಗಳಿಗೆ ಕತ್ತರಿ ಹಾಕಲು ಅನುವು ಮಾಡಿ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

“ಬಿಬಿಎಂಪಿಗೆ ಮರ ಸಂರಕ್ಷಣೆ ಬಗ್ಗೆ ಕಾಳಜಿಯಿಲ್ಲ

ಹವಾಮಾನ ವೈಪರೀತ್ಯವನ್ನು ತಡೆಯುವ ನಿಟ್ಟಿನಲ್ಲಿ ಮರಗಿಡಗಳು ಪ್ರಮುಖ ಪಾತ್ರ ವಹಿಸುತ್ತವೆ. ಭವಿಷ್ಯತ್ತಿನ ಹವಾಮಾನ ಬದಲಾವಣೆ ಕೇಂದ್ರೀ ಕರಿಸಿ ಪ್ಯಾರೀಸ್‌ ಒಪ್ಪಂದ ಜಾರಿಗೆ ತರಲಾಗಿದೆ. ಪ್ಯಾರೀಸ್‌ ಒಪ್ಪಂದಕ್ಕೆ ಸಹಿ ಹಾಕಿ ಜಾಗತಿಕ ತಾಪಮಾನ ತಡೆಗಟ್ಟಲು ಕೈ ಜೋಡಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ, ಸರ್ಕಾರದ ಆಡಳಿತ ಯಂತ್ರದ ಭಾಗವಾಗಿರುವ ಬಿಬಿಎಂಪಿ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಕೇವಲ ಮೂರೇ ವರ್ಷದಲ್ಲಿ 9 ಸಾವಿರ ಮರಗಳನ್ನು ನೆಲಸಮ ಮಾಡಲು ಅವಕಾಶ ಕೊಟ್ಟಿರುವುದನ್ನು ನೋಡಿದರೆ ನಿಜವಾದ ಪರಿಸರ ಉಳಿಸುವ ಕಾಳಜಿ ಇಲ್ಲದಂತೆ ತೋರುತ್ತದೆ ಎಂದು ಪರಿಸರವಾದಿ ಭಾರ್ಗವಿ ರಾವ್‌ ದೂರುತ್ತಾರೆ. ಜಾಗತಿಕ ತಾಪ ಮಾನದ ಬದಲಾವಣೆಯಿಂದಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ವಿಪತ್ತುಗಳು ಸಂಭವಿಸುತ್ತಿವೆ. ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಂತಹ ಸಂಸ್ಥೆಗಳು ನಗರದ ಹಸಿರು ಹೊದಿಕೆಯನ್ನು ಸುಧಾರಿಸಲು ಮತ್ತು ಉಳಿಸಿಕೊಳ್ಳಲು ಯೋಜನೆಯನ್ನು ಸಿದ್ಧಪಡಿಸ ಬೇಕಾಗಿದೆ ಎನ್ನುತ್ತಾರೆ.

ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸಾವಿರಾರು ಮರಗಳನ್ನು ಕಡಿಯುತ್ತಿದ್ದು, ಮುಂದಿನ ದಿನಗಳಲ್ಲಿ ನಾವೆಲ್ಲರೂ ದೊಡ್ಡ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ರಾಜಧಾನಿಯಲ್ಲಿ ಗರಿಷ್ಠ ತಾಪಮಾನ ತಲುಪಿದೆ. ಬಿಬಿಎಂಪಿ ಮರ ಸಮಿತಿಯು ಕಡಿದ ಮರಗಳಿಗೆ ಪರ್ಯಾಯವಾಗಿ ಎಷ್ಟು ಗಿಡಗಳನು ನೆಟ್ಟು ಬೆಳೆಸಿದೆ ಎಂಬುದರ ಪರಿಶೀಲನೆ ನಡೆಸಲು ಮುಂದಾಗಬೇಕು. ●ವಿಜಯ್‌ ನಿಶಾಂತ್‌, ಸಸ್ಯ ವೈದ್ಯ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.