Thumbe: ಅಗೆದಲ್ಲಿ ಕಡೆಗೂ ಡಾಮರು
Team Udayavani, Sep 20, 2024, 12:54 PM IST
ಬಂಟ್ವಾಳ: ತುಂಬೆಯಿಂದ ಮಂಗಳೂರಿಗೆ ನೀರು ಪೂರೈಕೆ ಮಾಡುವ ಪೈಪ್ಲೈನ್ ಒಡೆದ ಹಿನ್ನೆಲೆಯಲ್ಲಿ ತುಂಬೆಯಲ್ಲಿ ಹೆದ್ದಾರಿ ಅಗೆದು ದುರಸ್ತಿ ಮಾಡಲಾಗಿದ್ದು, ಹೆದ್ದಾರಿ ಅಗೆತದಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಅಗೆದ ಭಾಗಕ್ಕೆ ಡಾಮರು ಹಾಕಲಾಗಿದ್ದು, ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.
ಸುಮಾರು ಒಂದು ತಿಂಗಳ ಹಿಂದೆ ತುಂಬೆ ತಿರುವಿನ ಬಳಿ ಪೈಪ್ಲೈನ್ ಒಡೆದು ಮಂಗಳೂರು ನಗರಕ್ಕೆ ನೀರು ಪೂರೈಕೆಗೆ ಸಮಸ್ಯೆಯಾಗುತ್ತಿದೆ ಎಂದು ಪಾಲಿಕೆಯ ಗುತ್ತಿಗೆ ಸಂಸ್ಥೆ ಹೊಂಡ ಅಗೆದು ಪೈಪ್ಲೈನ್ ದುರಸ್ತಿ ಮಾಡಿ ಮಣ್ಣು ತುಂಬಿಸಿ ಬಳಿಕ ಮೇಲಿನ ಭಾಗಕ್ಕೆ ಜಲ್ಲಿ ಹುಡಿ ಹಾಕಿತ್ತು. ಆದರೆ ಮಳೆಯ ಪರಿಣಾಮ ಮಣ್ಣು ತಗ್ಗಿ ಹೊಂಡ ಸೃಷ್ಟಿಯಾಗಿದೆ. ಪದೇ ಪದೇ ಜಲ್ಲಿ ಹುಡಿ ಹಾಕಿದರೂ ಹೊಂಡದ ಸಮಸ್ಯೆ ಪುನರಾವರ್ತನೆಯಾಗುತ್ತಿತ್ತು.
ಉಳಿದ ಭಾಗದಲ್ಲಿ ರಸ್ತೆ ಚೆನ್ನಾಗಿರುವುದ ರಿಂದ ವಾಹನಗಳು ವೇಗವಾಗಿ ಬಂದು ಹೊಂಡದ ಬಳಿ ನಿಯಂತ್ರಣ ಕಳೆದುಕೊಳ್ಳುತ್ತಿ ದ್ದವು. ಹಲವು ದ್ವಿಚಕ್ರ ವಾಹನಗಳು ಬಿದ್ದು ಸವಾರರು ಗಾಯಗೊಂಡ ಘಟನೆಗಳು ನಡೆಯುತ್ತಿತ್ತು. ಈ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಗೆ ತಿಳಿಸಿದರೂ ದುರಸ್ತಿ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಇದೀಗ ಅಗೆದ ಜಾಗಕ್ಕೆ ಡಾಮಾರು ಹಾಕಿ ಪರಿಹಾರ ಕಲ್ಪಿಸಲಾಗಿದ್ದು, ಆತಂಕ ದೂರವಾಗಿದೆ. ಮಳೆ ಕಡಿಮೆಯಾದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.