Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

ಸೇವಾ ವ್ಯತ್ಯಯ ದೃಢಪಟ್ಟಿದ್ದರಿಂದ ಗ್ರಾಹಕ ನ್ಯಾಯಾಲಯದಿಂದ ದಂಡ

Team Udayavani, Sep 20, 2024, 12:57 PM IST

10-bng

ಬೆಂಗಳೂರು: ಅಂತಾರಾಷ್ಟ್ರೀಯ ಕಂಪನಿಯೊಂದರ ಟೀವಿಯ ಪ್ಯಾನಲ್‌ ವಾರೆಂಟಿ ಅವಧಿಯಲ್ಲಿ ದುರಸ್ತಿ ಗೊಳಿಸಲು ಒಪ್ಪದ ಎಲೆಕ್ಟ್ರಾನಿಕ್‌ ಸರ್ವೀಸ್‌ ಸೆಂಟರ್‌ಗೆ ಗ್ರಾಹಕ ವ್ಯಾಜ್ಯಗಳ ನ್ಯಾಯಾಲಯ 12,300 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕನಕಪುರದ 68 ವರ್ಷದ ನಿವಾಸಿ 2017ರಲ್ಲಿ 43 ಇಂಚಿನ ಸೋನಿ ಟೀವಿ, ಎಲ್‌ಜಿ ಫ್ರಿಡ್ಜ್ ಹಾಗೂ ಓವನ್‌ ಖರೀದಿಗೆ 1.22 ಲಕ್ಷ ರೂ. ಪಾವತಿಸಿದ್ದರು. ಈ ವೇಳೆ ಟೀವಿಗೆ 56,200 ರೂ. ಪಾವತಿಸಿದ್ದರು. 2022ರ ಆಗಸ್ಟ್‌ನಲ್ಲಿ ಟೀವಿ ಪ್ಯಾನಲ್‌ ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ವೇಳೆ 7,300 ರೂ. ಪಾವತಿಸಿ ಸರ್ವೀಸ್‌ ಸೆಂಟರ್‌ನಿಂದ ದುರಸ್ತಿ ಮಾಡಿಸಿದ್ದು, ಇದಕ್ಕೆ 8 ತಿಂಗಳ ವಾರೆಂಟಿಯನ್ನು ಸಹ ನೀಡಿದ್ದರು.

ರಿಪೇರಿ ಬಳಿಕವೂ ಟೀವಿ ಸರಿಯಾಗಿರಲಿಲ್ಲ. ಹೀಗಾಗಿ ಸರ್ವೀಸ್‌ಗೆ ಮತ್ತೆ ಮನವಿ ಮಾಡಿದ್ದರು. ಈ ಕುರಿತು ಹಲವು ಬಾರಿ ಕರೆ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ 2023ರ ಅ.10ರಂದು ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ. ತದನಂತರ ಗ್ರಾಹಕ ನ್ಯಾಯಾಲಯದಲ್ಲಿ ದೂರ ದಾಖಲಿಸಿದ್ದು, ಈ ವೇಳೆ ಹೊಸ ಟೀವಿ ಅಥವಾ 7,300 ರೂ. ಮರುಪಾವತಿಸುವುದು, 15 ಸಾವಿರ ಪರಿಹಾರ, ತಲಾ 5000 ಕೋರ್ಟ್‌ ಹಾಗೂ ನೋಟಿಸ್‌ ಬಾಬ್ತು ಸೇರಿದಂತೆ ಒಟ್ಟು 32,300 ರೂ. ಪರಿಹಾರ ಪಾವತಿಸುವಂತೆ ಮನವಿ ಮಾಡಿದ್ದರು.

ಬೆಂಗಳೂರು ನಗರ 2ನೇ ಹೆಚ್ಚುವರಿ ಗ್ರಾಹಕ ನ್ಯಾಯಾಲಯಗಳ ಆಯೋಗದ ಅಧ್ಯಕ್ಷ ವಿಜಯಕುಮಾರ ವಾದವನ್ನು ಪರಿಶೀಲನೆ ಮಾಡಿ, ಗ್ರಾಹಕ ಸೇವೆಯಲ್ಲಿ ವ್ಯತ್ಯಯವಾಗಿರುವುದು ದೃಢವಾಗಿದೆ ಹೀಗಾಗಿ ಗ್ರಾಹಕರಿಗೆ ಟೀವಿ ಪ್ಯಾನಲ್‌ ಮೊತ್ತ 7,300 ರೂ.ಗೆ ದೂರು ದಾಖಲಾದ ದಿನದಿಂದ ಶೇ.6ರ ಬಡ್ಡಿ ದರದಲ್ಲಿ ಮರುಪಾವತಿ, ಕೋರ್ಟ್‌ ಬಾಬ್ತು 5 ಸಾವಿರ ಸೇರಿದಂತೆ ಒಟ್ಟು 12,300 ರೂ. ಅ.15ರೊಳಗೆ ಪಾವತಿಸುವವಂತೆ ಆದೇಶಿಸಿದ್ದಾರೆ. ಸಕಾಲದಲ್ಲಿ ಹಣ ಪಾವತಿ ಮಾಡಲು ವಿಫ‌ಲವಾದರೆ ಶೇ.8 ಬಡ್ಡಿ ದರದಲ್ಲಿ ಪಾವತಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖೀಸಲಾಗಿದೆ.

ಏನಿದು ಪ್ರಕರಣ?  56 ಸಾವಿರ ನೀಡಿ ಟೀವಿ ಖರೀದಿಸಿದ್ದ ಗ್ರಾಹಕ  ಟೀವಿ ಪ್ಯಾನಲ್‌ ದುರಸ್ತಿಗೂ 7,300 ರೂ. ಪಾವತಿ, ದುರಸ್ತಿ ಬಳಿಕವೂ ಸರಿಯಾಗಿ ಕಾರ್ಯನಿರ್ವಹಿಸದ ಟೀವಿ  ಎಲೆಕ್ಟ್ರಾನಿಕ್‌ ಸರ್ವೀಸ್‌ ಸೆಂಟರ್‌ ವಿರುದ್ಧ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಕೆ

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.