Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

ಮನವಿಗಳಿಗಿಲ್ಲ ಸ್ಪಂದನೆ; ದುಸ್ತರ ರಸ್ತೆಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ

Team Udayavani, Sep 20, 2024, 12:59 PM IST

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

ಸುಳ್ಯ: ಗ್ರಾಮೀಣ ಭಾಗದಲ್ಲಿ ಅದೆಷ್ಟೋ ಸ್ಥಳೀಯ ರಸ್ತೆಗಳಿಗೆ ಇಂದಿಗೂ ಅಭಿವೃದ್ಧಿ ಭಾಗ್ಯ ಕೂಡಿ ಬಂದಿಲ್ಲ. ಇದರಿಂದ ಇಂದಿಗೂ ಅಲ್ಲಿನ ಜನರು ದುಸ್ತರ ರಸ್ತೆಯಲ್ಲಿ ಸಂಕಷ್ಟದ ಸಂಚಾರ ಮಾಡಬೇಕಾದ ಅನಿವಾರ್ಯ ಬಂದೊದಗಿದೆ. ತಾಲೂಕಿನ ಪಂಜ ಸಮೀಪದ ಪೆರ್ಮಾಜೆ-ಪಂಬೆತ್ತಾಡಿ ಸಂಪರ್ಕ ರಸ್ತೆಯೂ ಅಭಿವೃದ್ಧಿ ಕಾಣದೆ ಸಂಚಾರ ನರಕಯಾತನೆ ಸ್ಥಿತಿಯಲ್ಲಿದೆ.

ತಾಲೂಕಿನ ಪಂಜ ಗ್ರಾಮ ಪಂಚಾಯತ್‌ ವ್ಯಾಪ್ತಿ ಹಾಗೂ ಕಲ್ಮಡ್ಕ ಗ್ರಾಮ ಪಂಚಾಯತ್‌ ವ್ಯಾಪ್ತಿಯನ್ನು ಹೊಂದಿಕೊಂಡಿರುವ ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಪೆರ್ಮಾಜೆ – ಕಂರ್ಬಿ – ಕೋಟೆಗುಡ್ಡೆ – ಪಂಬೆತ್ತಾಡಿ ಸಂಪರ್ಕ ರಸ್ತೆ ಯಾವುದೇ ರೀತಿಯಲ್ಲಿ ಪೂರ್ಣ ಪ್ರಮಾಣದ ಅಭಿವೃದ್ಧಿ ಆಗದೆ ಇಂದಿಗೂ ಮಣ್ಣಿನ ಕಚ್ಚಾ ರಸ್ತೆಯಾಗಿಯೇ ಉಳಿದು, ಸ್ಥಳೀಯರ ತಾಳ್ಮೆ ಪರೀಕ್ಷಿಸುತ್ತಿದೆ.

ಸಂಚಾರದ ಅನಿವಾರ್ಯ
ಪಂಬೆತ್ತಾಡಿ ಭಾಗದಿಂದ ಕೋಟೆಗುಡ್ಡೆ- ಕಂರ್ಬಿ ಮೂಲಕ ಪೆರ್ಮಾಜೆ ಮುಖಾಂತರ ಪಂಜ ಪೇಟೆ ಸಂಪರ್ಕಿಸುವ ಈ ರಸ್ತೆ ಪಂಚಾಯತ್‌ ರಸ್ತೆಯಾಗಿ ಗುರುತಿಸಿಕೊಂಡಿದ್ದು, ಸುಮಾರು 3.5 ಕಿ.ಮೀ. ಉದ್ದವಿದೆ. ಈ ರಸ್ತೆಯ ಮೂರು ಕಡೆಗಳಲ್ಲಿ ಸೇತುವೆ ಇದ್ದು, ಇಲ್ಲಿ ಕೆಲವು ದೂರ ಕಾಂಕ್ರೀಟ್‌ ರಸ್ತೆ ನಿರ್ಮಾಣಗೊಂಡಿದ್ದರೂ ಉಳಿದ ಕಡೆಗಳಲ್ಲಿ ಇದುವರೆಗೆ ರಸ್ತೆ ಅಭಿವೃದ್ಧಿಗೊಂಡಿಲ್ಲ. ಮಳೆಗಾಲದಲ್ಲಿ ಕೆಸರುಮಯಗೊಳ್ಳುವ ಈ ರಸ್ತೆ, ಬೇಸಗೆಯಲ್ಲಿ ಧೂಳುಮಯವಾಗಿರುತ್ತದೆ. ಪರಿಣಾಮ ಸರ್ವಋತುವಿನಲ್ಲೂ ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವೇ ಆಗಿದೆ. ಶಾಲಾ-ಮಕ್ಕಳು, ಸಾರ್ವಜನಿಕರು ನಡೆದಾಡಲು ಸಾಧ್ಯವಾಗದ ಸ್ಥಿತಿ ಇರುತ್ತದೆ ಎನ್ನುವುದು ಸ್ಥಳೀಯರ ಆರೋಪ. ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಹದಗೆಟ್ಟು ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗುತ್ತಿರುವುದಿಂದ ವಾಹನಗಳನ್ನು ಕೆಲವೊಮ್ಮೆ ಒಂದೆಡೆ ನಿಲ್ಲಿಸಿ ಮನೆಗೆ ತೆರಳುವ ಸ್ಥಿತಿಯೂ ಇಲ್ಲಿದೆ. ಅನಾರೋಗ್ಯ ಉಂಟಾದಲ್ಲಿ ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ಸಂಚಾರಕ್ಕೂ ಪರದಾಟ ನಡೆಸುವ ಸ್ಥಿತಿ ಇಲ್ಲಿದೆ ಎನ್ನುತ್ತಾರೆ ಸ್ಥಳೀಯರು. ಹೊಂಡ-ಗುಂಡಿ, ಕೆಸರು, ಧೂಳುಮಯ ರಸ್ತೆಯಲ್ಲಿ ಎದ್ದು-ಬಿದ್ದು ಸಂಚರಿಸಬೇಕಾದ ಸ್ಥಿತಿಯಲ್ಲಿ ಇಲ್ಲಿನ ಜನ ದಿನ ಕಳೆಯುತ್ತಿದ್ದಾರೆ.

ಕೋಟೆಗುಡ್ಡೆ ಎಂಬಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ ವಿದೆ. ಹಾಗೂ ಪಂಬೆತ್ತಾಡಿ ಭಾಗದ ಜನರು ಪಂಜ ದೇವಸ್ಥಾನ, ನಾಗತೀರ್ಥ ಆರೋಗ್ಯ ಉಪಕೇಂದ್ರ, ಪಂಜ ಆಸ್ಪತ್ರೆ, ಪಂಜ ಪೆಟೆ, ಕಲ್ಮಡ್ಕ ಗ್ರಾ.ಪಂ. ಕಚೇರಿ, ನ್ಯಾಯಬೆಲೆ ಅಂಗಡಿ, ಮತ್ತಿತರ ಕಡೆಗಳಿಗೆ ತೆರಳಲು ಇದೇ ರಸ್ತೆ ಅವಶ್ಯಕವಾಗಿದೆ. ರಸ್ತೆ ಅಭಿವೃದ್ಧಿ ಮಾಡುವಂತೆ ಸರಕಾರ, ಸ್ಥಳೀಯಾಡಳಿತ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೆ ಬೇಡಿಕೆ ಈಡೇರಿಸಲಾಗಿಲ್ಲ ಎಂದು ಊರವರು ಆರೋಪಿಸಿದ್ದಾರೆ.

ಈ ರಸ್ತೆಯನ್ನು ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿ ಮಾಡಲು ಸಂಬಂಧಿಸಿದವರು ಕ್ರಮಕೈಗೊಳ್ಳಬೇಕೆಂದು ಈ ಭಾಗದ ಜನರು ಆಗ್ರಹಿಸಿದ್ದಾರೆ.

ಪೆರ್ಮಾಜೆ-ಪಂಬೆತ್ತಾಡಿ ಸಂಪರ್ಕ ರಸ್ತೆ ಅಭಿವೃದ್ಧಿ ಆಗದೇ ಸಂಚರಿಸಲು ಕಷ್ಟವಾಗು ತ್ತಿದೆ. ಮಳೆಗಾಲದಲ್ಲಂತು ಈ ರಸ್ತೆ ತೀರ ಹದಗೆಟ್ಟು ತೀವ್ರ ತೊಂದರೆ ಅನುಭವಿಸಬೇಕಾಗಿದೆ.ಈ ರಸ್ತೆ ಯನ್ನು ಕಾಂಕ್ರೀಟ್‌ ರಸ್ತೆಯಾಗಿ ಅಭಿವೃದ್ಧಿ ಮಾಡಬೇಕು.
-ಜಯಶ್ರೀ ಸಂಪ, ಸ್ಥಳೀಯರು

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.