Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

ಮುಡಾ ಪ್ರಕರಣ ರಾಜ್ಯಪಾಲರ ಸ್ವಜನ ಪಕ್ಷಪಾತ; ಸಿಎಂ ಬೆಂಬಲಕ್ಕೆ ಮಠಾಧೀಶರು

Team Udayavani, Sep 20, 2024, 1:10 PM IST

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

ಕಲಬುರಗಿ: ಲೋಕಾಯುಕ್ತ ನೀಡಿದ ನಾಲ್ಕೂ ದೂರುಗಳನ್ನು ಬದಿಗೊತ್ತಿ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳು ನೀಡಿದ ದೂರನ್ನಾಧಿರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜ್ಯಪಾಲರ ಪಕ್ಷಪಾತ ಧೋರಣೆಯಾಗಿದೆ. ಆದ್ದರಿಂದ ನ್ಯಾಯಾಲಯದ ತೀರ್ಪು ವ್ಯತಿರಿಕ್ತ ಬಂದರೆ ಸಿಎಂ ರಾಜೀನಾಮೆ ನೀಡಬಾರದು ಎಂದು ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮಿಗಳು ಆಗ್ರಹಿಸಿದರು.

ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯಪಾಲರನ್ನು ಬಳಕೆ ಮಾಡಿಕೊಂಡು‌ ಸಿದ್ಧರಾಮಯ್ಯನವರ, 136 ಸ್ಥಾನಗಳಿಂದ ಜನಾಶೀರ್ವಾದ ಪಡೆದ ಸರಕಾರವನ್ನು ಅಸ್ಥಿರ ಮಾಡಿ, ಬದಲಿ‌ ಸರಕಾರ ರಚಿಸಲು ಹೊಂಚು ಹಾಕಿದೆ. ಆದ್ದರಿಂದ ತಾವು ನ್ಯಾಯಾಲಯ ತೀರ್ಪಿನ ಬಳಿಕ ರಾಜೀನಾಮೆ ನೀಡದೆ ಸುಪ್ರಿಂ ಕೋರ್ಟ್‌ ನಲ್ಲಿ ದಾವೆ ಹೂಡಿ ನ್ಯಾಯ ಕೇಳಬೇಕು. ಅದಕ್ಕೆ ರಾಜ್ಯದ ಮಠಾಧೀಶರ ಬೆಂಬಲವೂ ಇದೆ ಎಂದರು.

ರಾಜ್ಯಪಾಲರ ನಡೆ ಪಕ್ಷಪಾತದಿಂದ ಕೂಡಿದೆ ಎನ್ನುವುದು ರಾಜ್ಯದ ಜನಾಭಿಪ್ರಾಯವೂ ಆಗಿದೆ. ಮುಡಾದಲ್ಲಿ ಅಧಿಕಾರಿಗಳು ಮಾಡಿರುವ ತಪ್ಪನ್ನು ಸಿಎಂ ಕೊರಳಿಗೆ ಹಾಕಿ ಅವರ ವ್ಯಕ್ತಿತ್ವಕ್ಕೆ ಕಪ್ಪು‌ಚುಕ್ಕೆ ಹಚ್ಚುವ ಆ ಮೂಲಕ ಒಂದು‌ ಜನಪರ ಸರಕಾರವನ್ನು ಉರುಳಿಸುವ ಸಂಚು ಕೇಂದ್ರ ಸರಕಾರ ಮಾಡಿದೆ. ಇದಕ್ಕೆ ರಾಜ್ಯದ ನಾಯಕರೂ ಕೈ‌ಜೋಡಿಸಿರುವುದು ಸಂವಿಧಾನ ವಿರೋಧಿಯಾಗಿದೆ ಎಂದರು.

ಒಂದು ವೇಳೆ ಕೋರ್ಟ್ ತೀರ್ಪು ವ್ಯತಿರಿಕ್ತ ಬಂದರೆ, ರಾಜ್ಯದ ಮಠಾಧೀಶರ ನಡೆಯ ಮತ್ತು ಪ್ರತಿರೋಧ ಏನಾಗಿರಬೇಕು ಎನ್ನುವದರ  ಕುರಿತು ನಮ್ಮ ತೀರ್ಮಾನ ತಿಳಿಸಲಾಗುವುದು ಎಂದ ಅವರು, ದೇಶದಲ್ಲಿ ಈ ಹಿಂದೆಯೂ ಕೇಂದ್ರ ಸರಕಾರಗಳು ರಾಜ್ಯಪಾಲರನ್ನು ಬಳಕೆ ಮಾಡಿಕೊಂಡು ರಾಜ್ಯ ಸರಕಾರಗಳನ್ನು ವಜಾ ಮಾಡಿದ ಎಷ್ಟೋ ಪ್ರಕರಣಗಳು ನಮಗೆ ಸಿಗುತ್ತವೆ ಎಂದು ನೆಹರು, ಇಂದಿರಾಗಾಂಧಿ ಹಾಗೂ ಜನತಾಪಕ್ಷದ ಕಾರನಾಮೆಗಳನ್ನು ನೆನಪಿಸಿದರು.

ರಾಜ್ಯದಲ್ಲಿ‌ ದೇವೇಗೌಡ, ರಾಮಕೃಷ್ಣ ಹೆಗಡೆ ಸಿಎಂ ಆಗಿದ್ದಾಗ ಇಂತಹ ಆರೋಪಗಳು ಕೇಳಿ ಬಂದಿದ್ದವು. ಆದ್ದರಿಂದ ತಾವು ಅವಸರದಲ್ಲಿ ರಾಜೀನಾಮೆ ಕೋಡಬೇಡಿ ಎಂದರು.

ರಾಜ್ಯಪಾಲರಿಗೆ ಪ್ರದತ್ತವಾದ ಪರಮಾಧಿಕಾರದ ಕುರಿತು ಚರ್ಚೆಯಾಗಿ ಅವುಗಳನ್ನು ಮೊಟಕುಗೊಳಿಸುವ ಅಥವಾ ಸಮಾಪ್ತಿಗೊಳಿಸಬೇಕಿದೆ. ಬ್ರಿಟೀಷರ ಕಾಲದಲ್ಲಿ ಅದರ ಅಗತ್ಯವಿತ್ತು. ಈಗ ಇಲ್ಲ‌ಎಂದರು.

ಸುದ್ದಿಗೋಷ್ಠಿಯಲ್ಲಿ ಸುಲಫಲ ಮಠದ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಸೇರಿದಂತೆ 16 ಮಠಾಧೀಶರು ಇದ್ದರು.

ಟಾಪ್ ನ್ಯೂಸ್

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.