Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ


Team Udayavani, Sep 20, 2024, 2:34 PM IST

Tirupati Case; Hurtful work for Hindus by converted Jagan: KS Eshwarappa

ಶಿವಮೊಗ್ಗ: ಹಿಂದೂ ಸಮಾಜದ ಜೊತೆ ಮುಸ್ಲಿಂ, ಕ್ರಿಶ್ಚಿಯನ್ನರು ಹೊಂದಿಕೊಳ್ಳಬೇಕು. ತಿರುಪತಿ ಲಡ್ಡಿನಲ್ಲಿ ಕೊಬ್ಬು ವಿಚಾರ ಕೇಳಿ ಆಶ್ಚರ್ಯವಾಯ್ತು. ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಭಕ್ತಿ ತುಂಬಿರುತ್ತದೆ. ಗೋಮಾತೆಯ ಕೊಬ್ಬು ಸೇರಿಸಿ ತಯಾರು ಮಾಡುತ್ತಿರುವುದು ತುಂಬಾ ನೋವಾಯ್ತು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈಗಾಗಲೇ ತನಿಖೆ ಮಾಡಿದ್ದಾರೆ. ಈಗಾಗಲೇ ಈ ಬಗ್ಗೆ ವರದಿ ಕೊಟ್ಟಿದ್ದಾರೆ. ದ್ವೇಷ ಸಾಧನೆ ಮಾಡುವುದಕ್ಕೆ ಈ ವಿಚಾರದಲ್ಲಿ ಹೋಗಬಾರದು. ಜಗನ್ ಮೋಹನ್ ರೆಡ್ಡಿ ಸರ್ಕಾರವಿದ್ದಾಗ ಈ ರೀತಿ ಮಾಡಿದ್ದಾರೆ. ಇಡೀ ಪ್ರಪಂಚದಲ್ಲಿರುವ ಹಿಂದೂಗಳಿಗೆ ನೋವುಂಟು ಮಾಡಿದೆ. ಲಡ್ಡಿ ತಯಾರಿಕೆಯಲ್ಲಿ ಮೀನಿನ ಎಣ್ಣೆ, ಗೋವಿನ ಕೊಬ್ಬು, ಹಂದಿ ಕೊಬ್ಬು ಬಳಸಿದ್ದಾರೆ. ಮತಾಂತರಗೊಂಡಿರುವ ಜಗನ್ ಮೋಹನ್ ರೆಡ್ಡಿ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

ಜಗನ್ ಮೋಹನ್ ರೆಡ್ಡಿ, ಅಧ್ಯಕ್ಷ ಸುಬ್ಬಾರೆಡ್ಡಿಯನ್ನು ಬಂಧಿಸಬೇಕು. ಈ ಪ್ರಕರಣ ಸಿಬಿಐ ತನಿಖೆಯಾಗಬೇಕು. ಯಾರು ಯಾರು ಬೆಂಬಲ ಕೊಟ್ಟಿದ್ದಾರೆ, ಅವರ ಮೇಲೆ ಕ್ರಮ ಆಗಬೇಕು. ಇದನ್ನು ಹಿಂದೂ ಸಮಾಜ ಒಪ್ಪಲ್ಲ. ಇದು ಅಪ್ರತ್ಯಕ್ಷ ವಾಗಿ ವಿಷ ಕೊಟ್ಟಿರುವ ಕೆಲಸ. ವೈಎಸ್ಆರ್ ಪಕ್ಷದ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್ಐಆರ್ ಹಾಕಬೇಕು. ಪುಣ್ಯ ಸರ್ಕಾರ ಬದಲಾಯಿತು. ಇಲ್ಲದಿದ್ದರೆ ಈ ವಿಚಾರ ಹೊರಗೆ ಬರುತ್ತಿರಲಿಲ್ಲ. ತಿರುಪತಿ ತಿಮ್ಮಪ್ಪ ಭಕ್ತರಿಗೆ ಬಹಳ ನೋವಾಗಿದೆ. ಕೇಂದ್ರ ಸರ್ಕಾರ ಸಿಬಿಐ ತನಿಖೆ ಮೂಲಕ ಸತ್ಯವನ್ನು ಬಯಲು ಮಾಡಬೇಕು ಎಂದು ಆಗ್ರಹಿಸಿದರು.

ಜನರು ತಿರುಪತಿ ಹೋಗಬಾರದು ಎಂದುಕೊಂಡರೆ ಹಿಂದೂ ಸಮಾಜ ಸತ್ತುಹೋಗಿದೆ ಎಂದರ್ಥ. ಈ ವಿಚಾರ ಕೇಳಿ‌ ನಮ್ಗು ತುಂಬಾ ನೋವು ತಂದಿದೆ. ತಪಿಸ್ಥರಿಗೆ ಶಿಕ್ಷೆಯಾಗಬೇಕು. ಯಾವ್ಯಾವ ಸಂಸ್ಥೆ ಇವೆ ಎಂಬುದು ತನಿಖೆಯಿಂದ ಹೊರಬರಬೇಕು. ತಿರುಪತಿ ಲಡ್ಡಿನ ಬಗ್ಗೆ ಪ್ರಪಂಚದಲ್ಲಿ ಗೌರವವಿದೆ. ಚಂದ್ರಬಾಬು ನಾಯ್ಡು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಷ್ಟ್ರದ್ರೋಹಿ ಚಟುವಟಿಕೆ ರಾಜ್ಯದಲ್ಲಿ ಹೆಚ್ಚಾಗಿವೆ. ಟಿಪ್ಪು ಸುಲ್ತಾನ್, ಔರಂಗ್ ಜೇಬ್ ಇವರ ಫ್ಲೆಕ್ಸ್ ಹಾಕುತ್ತಿದ್ದಾರೆ. ಪ್ಯಾಲೆಸ್ತೀನ್ ಬಗ್ಗೆ ಅಭಿಮಾನ ತೋರಿಸುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಈ ಬಗ್ಗೆ ಯಾಕೆ ಕಾಂಗ್ರೆಸ್ ಒಂದು ಉತ್ತರವು ಕೊಡ್ತಿಲ್ಲ? ಮನೆಗಳಿಗೆ, ಅಂಗಡಿಗಳಿಗೆ ಕಲ್ಲು ತೂರಾಟವಾಗಿದೆ. ಇದನ್ನು ಹಿಂದೂ ಸಮಾಜ ಎಷ್ಟು ದಿನ ತಡೆದುಕೊಳ್ಳಬೇಕು. ನಾಗಮಂಗಲದಲ್ಲಿ ಗಲಾಟೆ ಮಾಡಿದ್ದಾರೆ. ಕಲ್ಲು ತೂರಾಟ ಮಾಡಿದ್ದಾರೆ, ತಲ್ವಾರ್ ಹಿಡಿದುಕೊಂಡು ಓಡಾಡಿದ್ದಾರೆ. ರಾಜ್ಯ ಸರ್ಕಾರದಿಂದ ದುಷ್ಕರ್ಮಿಗಳ ವಿರುದ್ಧ ಕ್ರಮ ಆಗಬೇಕು. ಇದರ ಹಿಂದೆ ಯಾವ ಶಕ್ತಿ ಇದೆ ಎಂಬುದನ್ನು ತನಿಖೆ ಮಾಡಬೇಕು. ರಾಜ್ಯದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಪೊಲೀಸರ ಮೇಲೆ ಹಲ್ಲೆಯಾಗಿದೆ. ಆಡಳಿತ ವ್ಯವಸ್ಥೆ ಸರಿ ಇಲ್ಲ. ಇದೇ ರೀತಿ ನೀವು ಆಡಳಿತ ನಡೆಸಿದರೆ ಜನ ನಿಮ್ಮ ಕುರ್ಚಿ ಖಾಲಿ ಮಾಡಿಸುತ್ತಾರೆ ಎಂದರು.

ಚಂದ್ರಶೇಖರ್ ಪತ್ನಿ ಕವಿತಾ ಅವರಿಗೆ ಸಿಎಂ ಕಚೇರಿಯಿಂದ ಕರೆ ಬಂದಿದೆ. ಕವಿತಾ ಅವರಿಗೆ ನೌಕರಿ‌ ಕೊಡುತ್ತೇವೆಂದು ಹೇಳಿದ್ದಾರೆ. ಇದು ತುಂಬಾ ಸಂತೋಷದ ವಿಚಾರ ಎಂದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.