Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

ಹಲವು ವರ್ಷಗಳಿಂದ ಕುಂಟುತ್ತಿರುವ ಯೋಜನೆ; ಕಕ್ಕುಂಜೆ ಟ್ಯಾಂಕ್‌ ಕಾರ್ಯ ಬಾಕಿ

Team Udayavani, Sep 20, 2024, 2:49 PM IST

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

ಉಡುಪಿ: ಪ್ರತೀ ವರ್ಷ ಬೇಸಗೆಗೆ ನಗರಸಭಾ ವ್ಯಾಪ್ತಿಯಲ್ಲಿ ನೀರಿಗೆ ಹಾಹಾಕಾರ ಆರಂಭವಾಗುತ್ತದೆ. ಆಗ ನೆನಪಾಗುವುದು ವಾರಾಹಿ ನೀರು.

ನಗರಕ್ಕೆ ಇದೀಗ ಸ್ವರ್ಣ ನದಿಯಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದ್ದರೂ, ವಾರಾಹಿ ಕುಡಿಯುವ ನೀರಿನ ಯೋಜನೆ ಬಗ್ಗೆ ಪ್ರಸ್ತುತ ಗಂಭೀರ ಚಿಂತನೆ ನಡೆಸಬೇಕಾಗಿದೆ. ಈ ವರ್ಷವೂ ವಾರಾಹಿ ನೀರು ಬಾರದೇ ಇದ್ದರೆ ಇನ್ನಷ್ಟು ಸಮಸ್ಯೆಯಾಗುವ ಎಲ್ಲ ಸಾಧ್ಯತೆಯೂ ಇದೆ.

ನಗರಕ್ಕೆ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆ ಹಲವು ವರ್ಷಗಳಿಂದ ಕುಂಟುತ್ತಲೇ ಸಾಗುತ್ತಿದ್ದು, ಯಾವಾಗ ಪೂರ್ಣಗೊಳ್ಳುವುದು, ಯಾವಾಗ ನೀರು ಪೂರೈಕೆಯಾಗುವುದೋ ಎಂಬ ಗೊಂದಲದಲ್ಲಿ ಉಡುಪಿಯ ನಾಗರಿಕರಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಈ ಯೋಜನೆ ಆಮೆ ನಡಿಗೆಯಂತೆ ಸಾಗುತ್ತಿದೆ.

ನಗರಸಭೆ ಅಮೃತ್‌, ಎಡಿಬಿ ಅನುದಾನದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಹಾಲಾಡಿಯಿಂದ ನಗರಕ್ಕೆ ನೀರು ಪೂರೈಸುವ ಯೋಜನೆಯ ಕಾಮಗಾರಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ) ನಿರ್ವಹಿಸುತ್ತಿದೆ. 2017ರಲ್ಲಿ ಆರಂಭಗೊಂಡ ಈ ಯೋಜನೆ ಎರಡು ವರ್ಷಗಳಲ್ಲಿ ಪೂರ್ಣಗೊಂಡು ನೀರು ಪೂರೈಕೆಯಾಗಲಿದೆ ಎನ್ನಲಾಗಿತ್ತು.

ಕಾಮಗಾರಿ ಸ್ವರೂಪ ಹೀಗಿದ್ದು, ಹಾಲಾಡಿ ಭರತ್‌ಕಲ್‌ನಲ್ಲಿ ಡಬ್ಲ್ಯುಟಿಪಿ ಘಟಕ ನಿರ್ಮಿಸಿ ನಿತ್ಯ 45 ಎಂಎಲ್‌ಡಿ ನೀರನ್ನು ಪಂಪ್‌ ಮಾಡಿ ನೀರನ್ನು ಮಣಿಪಾಲಕ್ಕೆ ಪೈಪ್‌ಲೈನ್‌ ಮೂಲಕ ಹಾಯಿಸುವುದು. ಈ ನೀರನ್ನು ಮಣಿಪಾಲದಲ್ಲಿರುವ 25 ಎಂಎಲ್‌ಡಿ ಸಾಮರ್ಥ್ಯದ ಎರಡು ಜಿಎಲ್‌ಎಸ್‌ಆರ್‌ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಿ, ಆ ಬಳಿಕ 7 ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ನೀರು ಪೂರೈಸುವುದು. ಇಲ್ಲಿಂದ ಈಗಾಗಲೆ ಸಂಪರ್ಕ ಪಡೆದಿರುವ 21 ಸಾವಿರ ನೀರಿನ ಸಂಪರ್ಕ ಪಡೆದ ವಾಣಿಜ್ಯ ಉದ್ದೇಶ ಮತ್ತು ಮನೆಗಳಿಗೆ 24 ಗಂಟೆ ನೀರು ಪೂರೈಸುವುದು.

ಆಗಬೇಕಿರುವ ಕಾಮಗಾರಿಗಳು
ಹಾಲಾಡಿ ಭರತ್‌ಕಲ್‌ನಲ್ಲಿ ನಿರ್ಮಿಸಲಾಗುವ ಡಬ್ಲ್ಯುಟಿಪಿ ಘಟಕದ ಸಿವಿಲ್‌ ವರ್ಕ್‌ ಪ್ರಗತಿಯಲ್ಲಿದೆ. ಇಲ್ಲಿ ನೀರು ಶುದ್ಧಗೊಳಿಸುವ ಘಟಕದ ಫಿಲ್ಟರ್‌ಬೆಡ್‌ ವರ್ಕ್‌ ನಡೆಯುತ್ತಿದ್ದು, ಕೆಲವು ತಾಂತ್ರಿಕ ಕೆಲಸಗಳು ಬಾಕಿ ಇದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಕಕ್ಕುಂಜೆ ಓವರ್‌ಹೆಡ್‌ ಟ್ಯಾಂಕ್‌ ಕೆಲಸ ಬಾಕಿ ಇದ್ದು, ಮಳೆ ಪೂರ್ಣ ಬಿಟ್ಟರೆ 20 ದಿನಗಳಲ್ಲಿ ಕೆಲಸ ಪೂರ್ಣಗೊಳ್ಳಲಿದೆ. ಉಳಿದಂತೆ ನಗರದ ಕೆಲವು ಕಡೆಗಳಲ್ಲಿ ಮನೆಗಳಿಗೆ ಸಂಪರ್ಕಿಸುವ ಕಲ್ಪಿಸುವ ಪೈಪ್‌ಲೈನ್‌ ಕೆಲಸ ಅಲ್ಲಲ್ಲಿ ನಡೆಯುತ್ತು. ಶೇ.10ರಷ್ಟು ಪೈಪ್‌ಲೈನ್‌ ಕೆಲಸ ಬಾಕಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯಿಂದ ವಿಳಂಬ
ಮಳೆಯಿಂದ ಕಾಮಗಾರಿಗೆ ಸ್ವಲ್ಪ ತಡೆಯಾಗಿ ವಿಳಂಬವಾಯಿತು. ಸದ್ಯಕ್ಕೆ ನೀರು ಪೂರೈಕೆ ಮಾಡುವ ಎಲ್ಲ ಪ್ರಮುಖ ಕೆಲಸಗಳು ಪೂರ್ಣಗೊಂಡಿದ್ದು. ಈಗಾಗಲೇ ಪ್ರಾಯೋಗಿಕವಾಗಿ ನೀರು ಪಂಪಿಂಗ್‌ ಮಾಡಿ ಪರೀಕ್ಷೆ ಮಾಡಿದ್ದೇವೆ. ಹಾಲಾಡಿ ಡಬ್ಲ್ಯುಟಿಪಿ ಘಟಕದ ಕೆಲವು ಕಾಮಗಾರಿ ಮತ್ತು ಕಕ್ಕುಂಜೆ ವಾಟರ್‌ ಟ್ಯಾಂಕ್‌ ಕೆಲಸ ಮಾತ್ರ ಪ್ರಮುಖವಾಗಿದ್ದು, ಶೀಘ್ರ ಪೂರ್ಣಗೊಳಿಸಲಾಗುತ್ತದೆ. ಅಕ್ಟೋಬರ್‌ ಅಂತ್ಯದೊಳಗೆ ನೀರು ಪೂರೈಕೆ ಮಾಡಬಹುದು.
-ಅರಕೇಶ್‌, ಎಇಇ, ಕೆಯುಐಡಿಎಫ್ಸಿ

ತ್ವರಿತ ಕಾಮಗಾರಿಗೆ ಸೂಚನೆ
ವಾರಾಹಿ ಕುಡಿಯುವ ನೀರು ಯೋಜನೆ ಕಾಮಗಾರಿ ವ್ಯವಸ್ಥಿತವಾಗಿ ವಿಳಂಬವಿಲ್ಲದೆ ಪೂರ್ಣಗೊಳಿಸಲು ಎಂಜಿನಿಯರ್‌ಗಳಿಗೆ ನಿರ್ದೇಶನ ನೀಡಲಾಗಿದೆ. ನಗರದೊಳಗಿನ ಕಕ್ಕುಂಜೆ ಟ್ಯಾಂಕ್‌ ಮತ್ತು ಹಾಲಾಡಿ ಡಬ್ಲ್ಯುಟಿಪಿ ಘಟಕದ ಕಾಮಗಾರಿ ಶೀಘ್ರ ಮುಗಿಸಲು ಸೂಚಿಸಲಾಗಿದೆ.
– ಪ್ರಭಾಕರ್‌ ಪೂಜಾರಿ, ಅಧ್ಯಕ್ಷರು, ನಗರಸಭೆ

ಅನುದಾನ ವಿವರ
7 ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣ, ಪೈಪ್‌ಲೈನ್‌ಗೆ 102 ಕೋ. ರೂ. ವೆಚ್ಚ

ಹಾಲಾಡಿ ಭರತ್‌ಕಲ್‌ನಲ್ಲಿ ಡಬ್ಲ್ಯುಟಿಪಿ ಘಟಕ ನಿರ್ಮಾಣಕ್ಕೆ 65 ಕೋ. ರೂ. ವೆಚ್ಚ

ಭರತ್‌ಕಲ್‌ನಿಂದ ಮಣಿಪಾಲ ಮುಖ್ಯ ಪೈಪ್‌ಲೈನ್‌ ಕಾಮಗಾರಿಗೆ 115 ಕೋ. ರೂ. ವೆಚ್ಚ

ಯೋಜನೆ 8 ವರ್ಷಗಳ ನಿರ್ವಹಣೆಗೆ 70 ಕೋ. ರೂ. ಯೋಜನಾ ವೆಚ್ಚ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.