ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಶ್ರೀಮಂತಿಕೆಯನ್ನು ಪೂಜಿಸುವ ಹಂತಕ್ಕೆ ಸಮಾಜ ಒಂದು ನಿಂತಿದೆ...

Team Udayavani, Sep 20, 2024, 10:15 AM IST

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಉದಯವಾಣಿ ಸಮಾಚಾರ
ಧಾರವಾಡ: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ಸಮಾಜದಲ್ಲಿನ ಮಾನವೀಯ ಮೌಲ್ಯಗಳ ಕುಸಿತ ಕಾರಣವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ| ಸಂತೋಷ ಹೆಗ್ಡೆ ಹೇಳಿದರು.

ನಗರದಲ್ಲಿ ಆಲ್‌ ಇಂಡಿಯಾ ಡೆಮೊಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌(ಎಐಡಿವೈಒ) ವತಿಯಿಂದ ಹಮ್ಮಿಕೊಂಡಿದ್ದ “ಮಹಿಳೆಯರ ಘನತೆ ಮತ್ತು ಮಾನವ ಮೌಲ್ಯ ಉಳಿಸೋಣ’ ಎಂಬ ವಲಯ ಮಟ್ಟದ ಯುವಜನರ ಸಂಕಲ್ಪ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ತಪ್ಪು ಯಾರೇ ಮಾಡಿದರೂ ಅವರಿಗೆ ಶಿಕ್ಷೆ ಆಗಬೇಕು. ಕೋರ್ಟ್‌ಗಳಲ್ಲಿ ವಿಚಾರಣೆ ನಡೆದು ಶಿಕ್ಷೆ ಆಗುವುದು ಬಹಳ ಸಮಯ ತೆಗೆದುಕೊಳ್ಳುತ್ತಿದೆ. ತೀರ್ಪು ಹೊರಬರುವಷ್ಟರಲ್ಲಿ ಆರೋಪಿಯೇ ಸತ್ತು ಹೋಗಿರುತ್ತಾನೆ. ಇದರಿಂದ ಅಪರಾಧ ಮಾಡುವವರಿಗೆ ಭಯವಿಲ್ಲವಾಗಿದೆ. ನಮ್ಮ ಯುವಕರು ಹಿರಿಯರು ಕಟ್ಟಿ ಬೆಳೆಸಿದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಅಪರಾಧಗಳೇ ಇಲ್ಲದ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಹಿಂದೆ ತಪ್ಪು ಮಾಡಿ ಜೈಲು ಶಿಕ್ಷೆ ಅನುಭವಿಸಿ ಬಂದವರನ್ನು ಸಮಾಜ ಬಹಿಷ್ಕಾರ ಮಾಡುತ್ತಿತ್ತು. ಅವರಿಗೆ ಸಾಮಾಜಿಕ ಶಿಕ್ಷೆ ಆಗುತ್ತಿತ್ತು. ಆದರೆ ಅವರನ್ನು ಇಂದು ಸನ್ಮಾನ ಮಾಡುವ ಸ್ಥಿತಿಗೆ ನಮ್ಮ ಸಮಾಜ ತಲುಪಿದೆ. ಶ್ರೀಮಂತಿಕೆಯನ್ನು ಪೂಜಿಸುವ ಹಂತಕ್ಕೆ ಸಮಾಜ ಒಂದು ನಿಂತಿದ್ದು, ಪ್ರಾಮಾಣಿಕರನ್ನು ಹುಚ್ಚನೆಂದು ಕರೆಯಲಾಗುತ್ತಿದೆ ಎಂದು ಹೇಳಿದರು.

ಎಐಡಿವೈಒ ಅಖಿಲ ಭಾರತ ಉಪಾಧ್ಯಕ್ಷ ಡಾ| ಜಿ.ಶಶಿಕುಮಾರ್‌ ಮಾತನಾಡಿ, ಯುವಕರಲ್ಲಿ ಮಾನಸಿಕ ಸ್ಥೈರ್ಯ ಹಾಗೂ ವೈಚಾರಿಕತೆ ಬೆಳೆಸಲು ಈ ರೀತಿಯ ಸಮಾವೇಶ ಸಂಘಟಿಸಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಐಡಿವೈಒ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಗಾಳ್‌ ಮಾತನಾಡಿ, ಕೇವಲ ಪ್ರತಿಭಟಿಸಿದರೆ ಸಾಲದು. ಸಮಸ್ಯೆಗಳ ಮೂಲ ಕಾರಣದ ಕುರಿತು ಚರ್ಚೆ ನಡೆಯಬೇಕಾಗಿದೆ ಎಂದರು. ಧಾರವಾಡ ಜನಜಾಗೃತಿ ಅಭಿಯಾನದ ಸಲಹೆಗಾರ ರಾಮಾಂಜನಪ್ಪ ಅಲ್ದಳ್ಳಿ ಇದ್ದರು.

ಭ್ರಷ್ಟಾಚಾರ ಹಾಗೂ ಕಾನೂನು ಉಲ್ಲಂಘನೆ ಮಾಡುವವರನ್ನು ಹೊತ್ತು ಮೆರೆಸುವ ಸಂಸ್ಕೃತಿ ನಿಜಕ್ಕೂ ಬಹಳ ಅಪಾಯಕಾರಿ. ಲೋಕಾಯುಕ್ತಕ್ಕೆ ನಾನು ನೇಮಕಗೊಂಡ ಮೇಲೆ ಭ್ರಷ್ಟಾಚಾರದ ವಿರಾಟ ದರ್ಶನವಾಯಿತು. ಅಲ್ಲಿಯವರೆಗೆ ಬಾವಿ ಕಪ್ಪೆಯಂತಿದ್ದೆ ಎಂದೆನಿಸಿತು. ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಮಾಜ ಎತ್ತ ಸಾಗುತ್ತಿದೆ ಎಂದು ಆತಂಕವಾಗುತ್ತದೆ.
ನ್ಯಾ| ಸಂತೋಷ ಹೆಗ್ಡೆ, ನಿವೃತ್ತ ಲೋಕಾಯುಕ್ತರು

ಟಾಪ್ ನ್ಯೂಸ್

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.