ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ


Team Udayavani, Sep 20, 2024, 10:47 AM IST

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಗ್ರಾಹಕರೇ ಸಹಕಾರಿಗಳ ಮೂಲದ್ರವ್ಯವಾಗಿದ್ದು, ಅವರ ಸಂತೃಪ್ತಿಯಿಂದ ಸಹಕಾರಿಗಳ ಯಶಸ್ಸು ಸುಲಭಸಾಧ್ಯ ಎಂದು ರಬಕವಿಯ ಶ್ರೀ ಧನಲಕ್ಷ್ಮೀ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಗಾಳಿ ನುಡಿದರು.

ರಬಕವಿಯ ಶ್ರೀ ಬನಶಂಕರಿ ಸಭಾಭವನದಲ್ಲಿ ನಡೆದ ಸಂಘದ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸಂಘಕ್ಕೆ ಶೇರುದಾರರು ಮೂಲಸ್ತೋತ್ರವಾದರೆ, ಹೊಣೆಯರಿತ ಆಡಳಿತ ಮಂಡಳಿ ಹಾಗೂ ಆಡಳಿತ ಮಂಡಳಿ ಮತ್ತು ಗ್ರಾಹಕರ ನಡುವೆ ಸಕಾರಾತ್ಮಕ ಸ್ಪಂದನೆ ನೀಡುವ ಕೌಶಲ್ಯಯುತ ಸಿಬ್ಬಂದಿಯ ಜತೆಗೆ ಗ್ರಾಹಕರು ನಡೆಸುವ ವಹಿವಾಟು ಸಹಕಾರಿಯ ಯಶಸ್ಸಿನ ಜೀವಾಳವಾಗಿದೆ ಎಂದರು.

2023-24ನೇ ಸಾಲಿನ ವಾರ್ಷಿಕ ವರದಿಯನ್ನು ಸಭೆಯಲ್ಲಿ ಮಂಡಿಸಿದ ಅಧ್ಯಕ್ಷ ಚಿದಾನಂದ ಒಟ್ಟು 2774 ಸದಸ್ಯರು ಹೊಂದಿರುವ ಸಂಘದ ಶೇರು ಬಂಡವಾಳ 74,78,800 ಇದ್ದು, 8,74,18,268 ಠೇವಣಿ ಹೊಂದಿದೆ. ಸಾಲ ಪ್ರಮಾಣದಲ್ಲೂ ಏರಿಕೆಯಾಗಿದ್ದು, 6,96,64,003 ವಿತರಣೆಯಾಗಿದೆ.

ಸದಸ್ಯರ ನಿಗದಿತ ಕಾಲದಲ್ಲಿ ಮರುಪಾವತಿ ಮಾಡಿದ ಕಾರಣ 32,71,228 ರೂ. ನಿವ್ವಳ ಲಾಭ ಹೊಂದಿದೆ. ಶೇ.20 ರಂತೆ ಲಾಭಾಂಶ ಹಂಚಲು ತೀರ್ಮಾನಿಸಲಾಗಿದೆ. ಮುದ್ದತ್‌ ಮೀರಿದ ಸಾಲದ ಪ್ರಮಾಣ ಶೇ.3.86ರಷ್ಟು ಮಾತ್ರ ಇದ್ದು ಸಾಲ ಬಾಕಿದಾರರು ಸಂಘಕ್ಕೆ ಹಣ ಪಾವತಿಸಿ ಸಂಘದೊಡನೆ ಸಹಕರಿಸಬೇಕೆಂದರು. ಸಂಘದ ನೂತನ ಕಚೇರಿ ಕಟ್ಟಡ ಕಾಮಗಾರಿ ಕಳೆದ 2 ವರ್ಷಗಳಿಂದ ನಡೆಯುತ್ತಿದ್ದು, ಬರುವ ವಾರ್ಷಿಕ ಸರ್ವಸಾಧಾರಣ ಸಭೆಯೊಳಗಾಗಿ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಸಭೆಗೆ ವಿವರಿಸಿದರು.

ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಮುಖ್ಯಕಾರ್ಯನಿರ್ವಹಣಾಧಿಕಾರಿ ಈರಣ್ಣ ಗುಣಕಿ ಸಭೆಯ ಮುಂದಿಟ್ಟು ಅನುಮೋದನೆ ಪಡೆದುಕೊಂಡರು. ಬಸವರಾಜ ಯಂಡಿಗೇರಿ, ಡಾ.ಸಂಗಣ್ಣಾ ಸಾಬೋಜಿ, ಎಂ.ಸಿ.ಸಾಬೋಜಿ, ಬಸವರಾಜ ಭಿಲವಡಿ, ರಾಜಶೇಖರ ಕುರ್ಲಿ, ರಾಜು ಉಮದಿ, ವಿಜಯ ಕರಡಿಗುದ್ದಿ, ಬಸವರಾಜ ಮಟ್ಟಿಕಲ್ಲಿ, ಭೀಮಪ್ಪ ಭಜಂತ್ರಿ, ಸುನಂದಾ ವಗ್ಗ, ಶೋಭಾ ಭಿಲವಡಿ, ಮಹಾದೇವ ಕವಿಶೆಟ್ಟಿ, ನಾರಾಯಣ ಬೋರಗಿನಾಯಕ, ಗಜಾನನ ನಾಗರಾಳ, ಸತೀಶ ಅಬ್ದುಲ್‌ಪೂರ, ಮಲ್ಲಿಕಾರ್ಜುನ ಉಮದಿ ಉಪಸ್ಥಿತರಿದ್ದರು.

ಡಾ| ಎಸ್‌.ಜಿ.ಸಾಬೋಜಿ ಸ್ವಾಗತಿಸಿದರು. ಮಹೇಶ ಮಟ್ಟಿಕಲ್ಲಿ, ಸದಾನಂದ ಜೋತಾವರ ನಿರೂಪಿಸಿದರು. ವಿಜಯ ಕರಡಿಗುದ್ದಿ
ವಂದಿಸಿದರು. ಪುರವಂತರು, ಸಾಂಪ್ರದಾಯಿಕ ಕರಡಿ ಮಜಲು ವಾದಕರು, ಚಳ್ಳಂಗ ಕಲಾವಿದರು, ರುದ್ರಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 15 ಸಾಧಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.