Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

ಯಶವಂತಪುರದಲ್ಲಿ 2016ರಲ್ಲಿ ಕಟ್ಟಡ ದುರಸ್ತಿಗಾಗಿ ಸೇವೆ ಸ್ಥಗಿತವಾಗಿದ್ದ ಆಸ್ಪತ್ರೆ

Team Udayavani, Sep 20, 2024, 3:18 PM IST

13-bng

ಬೆಂಗಳೂರು: ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿಯ ಹಗ್ಗ-ಜಗ್ಗಾಟದಲ್ಲಿ ಯಶವಂತ ಪುರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸೇವೆಯು “ನಮ್ಮ ಕ್ಲಿನಿಕ್‌’ಗೆ ಸೀಮಿತವಾಗಿದ್ದು, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕಟ್ಟಡ ಉದ್ದೇಶಿತ ಸೇವೆಗೆ ಬಳಕೆಯಾಗುತ್ತಿಲ್ಲ.

ಸುಸಜ್ಜಿತ ಬಹುಮಹಡಿ ಕಟ್ಟಡ, ಶಸ್ತ್ರಚಿಕಿತ್ಸಾ ವಿಭಾಗ, ತುರ್ತು ಚಿಕಿತ್ಸೆ ಹಾಗೂ ಪ್ರಯೋಗಾಲ ಯದ ಸೇವೆ ಹಾಗೂ ಹೊಸದಾಗಿ ಖರೀದಿಸಿದ್ದ ಹಾಸಿಗೆಗಳಿದ್ದರೂ, ಯಶವಂತಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅನಾಥವಾಗಿದೆ. ಪ್ರತಿದಿನ ಹತ್ತಾರು ಬಡ ಗರ್ಭಿಣಿಯರು ಒಪಿಡಿ ಹಾಗೂ ಹೆರಿಗೆ ಸೇವೆಗಾಗಿ ಅಲೆದಾಡುವ ಪರಿಸ್ಥಿತಿ ಇದೆ.

ಸುವರ್ಣ ಸಂಭ್ರಮ: 1975ರಿಂದ ಸೇವೆ ಸಲ್ಲಿಸುತ್ತಿದ್ದ ಯಶವಂತಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಇನ್ನೊಂದು ವರ್ಷವಾಗಿದ್ದರೆ ಸುವರ್ಣ ಸಂಭ್ರಮವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ, 2016ರಲ್ಲಿ ದುರಸ್ತಿ ಹೆಸರಿನಲ್ಲಿ ಸೇವೆ ಸ್ಥಗಿತಗೊಳಿಸಿ, ಆಸ್ಪತ್ರೆಯ ವೈದ್ಯರು ಹಾಗೂ ಇತರೆ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸಲಾಗಿತ್ತು. ಈಗ ಕಟ್ಟಡಕ್ಕೆ ಹೊಸ ಕಳೆ ಬಂದಿದೆ. ಹೊಸ ಉಪಕರಣಗಳೂ ಬಂದಿವೆ. 2020ರಲ್ಲಿ ಇದನ್ನೇ ಕೋವಿಡ್‌ ಆಸ್ಪತ್ರೆಯ ನ್ನಾಗಿ ಪರಿವರ್ತಿಸಲಾಯಿತು. ಆ ಬಳಿಕವೂ ಇದು ಹೆರಿಗೆ ಆಸ್ಪತ್ರೆಯಾಗಿ ಕಾರ್ಯಾನಿರ್ವಹಿಸಲೇ ಇಲ್ಲ.

ತಿಂಗಳಿಗೆ 300 ಹೆರಿಗೆ: ಯಶವಂತಪುರ, ಪೀಣ್ಯ, ಪೀಣ್ಯ ಕೈಗಾರಿಕೆ ವಲಯ, ದಾಸರಹಳ್ಳಿ, ಮತ್ತಿಕೆರೆ, ಜಾಲಹಳ್ಳಿ, ಜಾಲಹಳ್ಳಿ ಕ್ರಾಸ್‌ ಸೇರಿದಂತೆ ಹತ್ತಾರು ಬಡಾವಣೆಯಲ್ಲಿ ಕೂಲಿ ಕೆಲಸ, ಗಾರ್ಮೆಂಟ್ಸ್‌ಗಳಿಗೆ ಹೋಗುವವರ ಸಂಖ್ಯೆ ಹೆಚ್ಚಿದೆ. ಬಡಕೂಲಿ ಕಾರ್ಮಿಕ ಹಾಗೂ ಕೆಳಮಧ್ಯಮ ವರ್ಗದ ಮಹಿಳೆಯರು ಈ ಹೆರಿಗೆ ಆಸ್ಪತ್ರೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿ ದ್ದರು. ಪ್ರತಿ ದಿನ 10ರಂತೆ ತಿಂಗಳಿಗೆ ಸರಾಸರಿ 300 ಹೆರಿಗೆಗಳನ್ನು ಮಾಡಿಸಲಾಗುತ್ತಿತ್ತು. ಈಗ ಈ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವ ಗರ್ಭಿಣಿಯರನ್ನು ಆಶಾ ಕಾರ್ಯಕರ್ತೆಯರು ಶ್ರೀರಾಮಪುರದ ಆಸ್ಪತ್ರೆಗೆ ಶಿಫಾರಸು ಮಾಡುತ್ತಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ದುಪ್ಪಟ್ಟು ಹಣ ವ್ಯಯಿಸಬೇಕಾಗಿದೆ. ಇನ್ನು ಅನೇಕರ ಮಂದಿ ದೂರದ ಕೆ.ಸಿ.ಜನರಲ್‌, ವಾಣಿವಿಲಾಸ್‌ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಆಸ್ಪತ್ರೆ

ವಿದ್ಯಾರ್ಥಿಗಳ ಪಾಠ ಶಾಲೆ!: ಪ್ರಸ್ತುತ ಆಸ್ಪತ್ರೆ ಹಿಂಭಾಗದ ಕಟ್ಟಡದಲ್ಲಿ ಬಿಬಿಎಂಪಿ ವ್ಯಾಪ್ತಿಯ ಮತ್ತಿಕೆರೆ ಶಾಲೆಯ ತರಗತಿಗಳು ನಡೆಯುತ್ತಿವೆ. ಮುಂಭಾಗದಲ್ಲಿ ನಮ್ಮ ಕ್ಲಿನಿಕ್‌ ಕಾರ್ಯಾಚರಿಸುತ್ತಿದೆ. ಆಸ್ಪತ್ರೆಯ ಹೊರ ವಲಯದಿಂದ ನೋಡಿದರೆ ನಮ್ಮ ಕ್ಲಿನಿಕ್‌ ಇರುವಿಕೆಯ ಕುರುವೇ ಇಲ್ಲ. ಆಸ್ಪತ್ರೆಯ ಮುಂಭಾಗವು ಖಾಸಗಿ ಆಟೋ, ಬೈಕ್‌ಗಳ ಪಾರ್ಕಿಂಗ್‌ ಸ್ಥಳವಾಗಿ ಪರಿವರ್ತನೆಗೊಂಡಿದೆ.

ಬಿಬಿಎಂಪಿ-ಆರೋಗ್ಯ ಇಲಾಖೆ ನಡುವೆ ಗೊಂದಲ?

2020ರ ಕೋವಿಡ್‌ ಬಳಿಕ ನೂತನ ಆಸ್ಪತ್ರೆಯನ್ನು ಹೆರಿಗೆ ಆಸ್ಪತ್ರೆಯಾಗಿ ಉಳಿಸಿಕೊಳ್ಳಬೇಕೋ ಅಥವಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಬೇಕೆ ಎನ್ನುವ ಗೊಂದಲವಿತ್ತು. ಈ ನಡುವೆ ಆರೋಗ್ಯ ಇಲಾಖೆ ಈ ಆಸ್ಪತ್ರೆಯನ್ನು ನಡೆಸಲು ಮುಂದಾಗಿತ್ತಾದರೂ, ಕೆಲ ತಾಂತ್ರಿಕ ಕಾರಣಗಳಿಂದ ನಿರ್ಧಾರ ಕೈಬಿಡಲಾಗಿದೆ. ಇದೀಗ ಮತ್ತೂಮ್ಮೆ ಆಸ್ಪತ್ರೆಯನ್ನು ಸುರ್ಪದಿಗೆ ಪಡೆಯುವ ಕೆಲಸಗಳಾಗುತ್ತಿವೆ. ಆರೋಗ್ಯ ಇಲಾಖೆ ಆಸ್ಪತ್ರೆಯನ್ನು ಸುರ್ಪದಿ ಪಡೆದುಕೊಂಡರೆ ಈ ಆಸ್ಪತ್ರೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಉಳಿಯೋದು ಸ್ವಲ್ಪ ಅನುಮಾನವಾಗಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸುವ ಚಿಂತನೆ ಇದೆ.

ಯಶವಂತಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯು ಬಡ ಹೆಣ್ಣು ಮಕ್ಕಳಿಗೆ ಸಾಕಷ್ಟು ಅನುಕೂಲ ಕಲ್ಪಿಸಿತ್ತು. ಆಸ್ಪತ್ರೆ ದುರಸ್ತಿಗೊಂಡು 8 ವರ್ಷಗಳು ಪೂರ್ಣಗೊಂಡರು ಹೆರಿಗೆ ಆಸ್ಪತ್ರೆ ಪ್ರಾರಂಭವಾಗಿಲ್ಲ. ಇದರಿಂದಾಗಿ ಬಡ ಹೆಣ್ಣುಮಕ್ಕಳು ತುರ್ತು ಸಂದರ್ಭದಲ್ಲಿ ದೂರದ ಆಸ್ಪತ್ರೆಗೆ ತೆರಳು ಪರಿಸ್ಥಿತಿ ಇದೆ. ●ನಿರ್ಮಲಾ, ಆಲ್‌ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ಉಪಾಧ್ಯಕ್ಷೆ

ಪ್ರತಿದಿನ ಹತ್ತಾರು ಹೆರಿಗೆಯಾಗುತ್ತಿದ್ದ ಆಸ್ಪತ್ರೆಯು ಇದೀಗ ನಮ್ಮ ಕ್ಲಿನಿಕ್‌ ಆಗಿದೆ. ಈ ಪ್ರದೇಶದ ಗರ್ಭಿಣಿಯರು ದೂರ ಪ್ರದೇಶಕ್ಕೆ ತೆರಳಿ ತಪಾಸಣೆ ಹಾಗೂ ಹೆರಿಗೆ ಮಾಡಿಸಿಕೊಳ್ಳಲು ಅನಿವಾರ್ಯತೆ ಇದೆ. ●ಆನಂದ, ಸ್ಥಳೀಯರು.

ಯಶವಂತಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯನ್ನು ಆರೋಗ್ಯ ಇಲಾಖೆ ಸುರ್ಪದಿಗೆ ತೆಗೆದು ಕೊಳ್ಳಲಿದೆ. ಅದಕ್ಕೆ ಸಂಬಂಧಿಸಿದ ಕೆಲಸಗಳಾಗುತ್ತಿವೆ. ಆಸ್ಪತ್ರೆಯು ಶೀಘ್ರದಲ್ಲಿ ಕಾರ್ಯಾಚರಣೆ ಮಾಡಲಿದೆ. ತಾತ್ಕಾಲಿಕವಾಗಿ ಜನರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ನಮ್ಮ ಕ್ಲಿನಿಕ್‌ ಪ್ರಾರಂಭಿಸಲಾಗಿದೆ. ●ವಿಕಾಸ್‌ ಕಿಶೋರ್‌ ಸುರಾಳ್ಕರ್‌, ಬಿಬಿಎಂಪಿ ಆರೋಗ್ಯ ಆಯುಕ್ತರು

■ ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.