Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Team Udayavani, Sep 20, 2024, 6:44 PM IST

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಮುಧೋಳ : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಕೂಲಿ ಕಾರ್ಮಿಕರು ಶುಕ್ರವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಲವಾರು ದಿನಗಳಿಂದ ಕೂಲಿ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗೆ ಎಡತಾಕುತ್ತಿದ್ದರೂ ಅಧಿಕಾರಿಗಳು ಕೆಲಸ ನೀಡುತ್ತಿಲ್ಲ. ಸರಿಯಾದ ರೀತಿಯಲ್ಲಿ ಜಾಬ್ ಕಾರ್ಡ್ ನೀಡುತ್ತಿಲ್ಲ. ಕೂಡಲೇ ನಮಗೆ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ದಿನಗೂಲಿ ಸಿಗದೆ ಬೇರೆ ಊರಿಗೆ ಕೆಲಸ ಅರಸಿ ಹೋಗಬೇಕಾದ ಪರಿಸ್ಥಿತಿ ಇದೆ. ಇದ್ದ ಊರಿನಲ್ಲಿಯೇ ಕೆಲ‌ಸ ಮಾಡಬೇಕು ಎಂದರೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದವರು ನರೇಗಾ ಕೆಲಸ ನೀಡುತ್ತಿಲ್ಲ. ಇನ್ನುಮುಂದೆ ಕೂಲಿ ಕೆಲಸ ನೀಡದೆ ಹೋದರೆ ಮುಂದಿನ ದಿನದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಏಕವಚನ, ಏರುಧ್ವನಿಯಲ್ಲಿ ಮಾತು ಬೆಳೆಸಿದ ಇಒ : ಗ್ರಾಮಸ್ಥರು ಕೆಲಸ ಕೇಳಿಕೊಂಡು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆಗೆ ಕುಳಿತ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ತಾಲೂಕು ಪಂಚಾಯಿತಿ ಇಒ ಪ್ರತಿಭಟನೆ ನೇತೃತ್ವ ಹೊತ್ತಿದ್ದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕ ಶಂಕರ ಅವರೊಂದಿಗೆ ಏಕವಚನದಲ್ಲಿ ಏರುಧ್ವನಿಯಲ್ಲಿ ಮಾತು ಬೆಳೆಸಿದರು. ಘಟನೆಯನ್ನು ವಿಡಿಯೋ ಮಾಡುತ್ತಿದ್ದ ಮಹಿಳೆಯೋರ್ವಳಿಗೆ ವಿಡಿಯೋ ಮಾಡದಂತೆ ತಾಕೀತು ಮಾಡಿರುವುದು ಕಂಡುಬಂದಿತು. ಇಒ ಸಿದ್ನಾಳ ನಡೆಗೆ ಕೋಪಗೊಂಡ ಗ್ರಾಮಸ್ಥರು ನೀವು ಬಡವರಿಗೆ ಕೆಲಸ ಕೊಡಿಸಲು ಬಂದಿದ್ದೀರೋ ? ಅಥವಾ ನಮ್ಮನ್ನು ಹೆದರಿಸಲು ಬಂದಿದ್ದೀರೋ ಎಂದು ಇಒ ಉಮೇಶ ಸಿದ್ನಾಳಗೆ ಪ್ರಶ್ನಿಸಿದರು. ಮೊದಲು ನಮಗೆ ಕೆಲಸ ನೀಡುವಂತೆ ಪಟ್ಟು ಹಿಡಿದರು. ಆಗ ಗ್ರಾಮಸ್ಥರೊಂದಿಗೆ ಮಾತನಾಡಿದ ಇಒ ಶೀಘ್ರದಲ್ಲಿಯೇ ಗ್ರಾಮಸ್ಥರಿಗೆ ಕೂಲಿ ಕೆಲಸ‌ ನೀಡುವುದಾಗಿ ಭರವಸೆ ನೀಡಿದರು.

12ಗಂಟೆಯಾದರೂ ಆಗಮಿಸದ ಪಿಡಿಒ : ಗ್ರಾಮದ ಜನತೆ ಕೆಲಸಕ್ಕಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುತ್ತಿದ್ದರೆ ಅಲ್ಲಿನ ಪಿಡಿಒ 12ಗಂಟೆಯಾದರೂ ಕಚೇರಿಗೆ ಆಗಮಿಸಿದ್ದಿಲ್ಲ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಪ್ರತಿಭಟನಾಕಾರರು ಅಭಿವೃದ್ದಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುವುದಿಲ್ಲ ಎಂದು ದೂರಿದರು.

ಗ್ರಾಮಸ್ಥರಾದ ಈರಮ್ಮ, ಶ್ರೀದೇವಿ, ಸಿದ್ದವ್ವ, ಗೀತಾ, ರಾಧಿಕಾ, ಸಿದ್ದಪ್ಪ, ಶಿವು, ಸವಿತಾ, ಶಿಲ್ಪಾ, ರವಿ, ಬಸವರಾಜು ಗ್ರಾಕೂಸ್ ಜಿಲ್ಲಾ ಸಂಚಾಲಕ ಶಂಕರ ಸೇರಿದಂತೆ ಇತರರು ಇದ್ದರು.

ಮೆಳ್ಳಿಗೇರಿ ಗ್ರಾಮದಲ್ಲಿ ಸದ್ಯ ಜಾಬ್ ಕಾರ್ಡ್ ಇರುವ ಜನರಿಗೆ ಶೀಘ್ರವೇ ಉದ್ಯೋಗ ನೀಡಲಾಗುವುದು. ಜಾಬ್ ಕಾರ್ಡ್ ಇಲ್ಲದಿರುವ ಜನರನ್ನು ಗುರುತಿಸಿ ಅವರಿಗೆ ಜಾಬ್ ಕಾರ್ಡ್ ವ್ಯವಸ್ಥೆ ಮಾಡಿ ಆ ನಂತರದಲ್ಲಿ ಕೆಲಸ ನೀಡಲಾಗುವುದು.
-ಉಮೇಶ ಸಿದ್ನಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುಧೋಳ

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.