Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್, ಮನಿಟ್ರ್ಯಾಪ್
Team Udayavani, Sep 20, 2024, 6:53 PM IST
ಸಾಗರ: ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವುದು, ತಮ್ಮ ಲಾಭಕ್ಕಾಗಿ ಎಚ್ಐವಿಯಂತಹದ್ದನ್ನು ಇಂಜೆಕ್ಟ್ ಮಾಡುವವರನ್ನು ನೇಣುಗಂಬಕ್ಕೆ ಹಾಕಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಹನಿಟ್ರ್ಯಾಪ್, ಮನಿಟ್ರ್ಯಾಪ್ ಜಾಸ್ತಿಯಾಗುತ್ತಿದೆ. ಹಿಂದಿನಿಂದಲೂ ಇದು ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಜನಪ್ರತಿನಿಧಿಯಾದವರು ಹೆಚ್ಚು ಜಾಗ್ರತೆಯಿಂದ ಇರಬೇಕು. ಭ್ರಷ್ಟಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಿಲುಕಬಾರದು. ಜನ ನಮ್ಮನ್ನು ಗಮನಿಸುತ್ತಿರುತ್ತಾರೆ ಎನ್ನುವ ಪ್ರಜ್ಞೆ ಇರಬೇಕು. ಮುನಿರತ್ನ ವಿರುದ್ಧ ಕೇಳಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆದು ಬಂಧನಕ್ಕೆ ಒಳಗಾಗಿದ್ದಾರೆ. ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ.
ಡಿಸಿಎಂ ಡಿ.ಕೆ.ಶಿವಕುಮಾರ್ ಪಾತ್ರವೂ ಇಲ್ಲ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸಹ ಇಂತಹ ಘಟನೆ ನಡೆದಿದೆ.
ಅನಗತ್ಯವಾಗಿ ಉಪ ಮುಖ್ಯಮಂತ್ರಿಗಳ ಮೇಲೆ ಗೂಬೆ ಕೂರಿಸಬೇಡಿ. ಮುನಿರತ್ನ ವಿರುದ್ಧ ಬೇರೆ ಬೇರೆ ಪ್ರಕರಣ ದಾಖಲಾಗುತ್ತಿದೆ. ರಾಜ್ಯ ಸರ್ಕಾರ ಕಾನೂನಿಗೆ ಪೂರಕವಾಗಿ ಕೆಲಸ ಮಾಡುವುದು ಅನಿವಾರ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.