Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ
ಉಡುಪಿ ರೈಲು ನಿಲ್ದಾಣದಲ್ಲಿ ಘಟನೆ - ರೈಲ್ವೇ ಪೊಲೀಸರ ಸಕಾಲಿಕ ಕಾರ್ಯಾಚರಣೆ
Team Udayavani, Sep 20, 2024, 8:48 PM IST
ಉಡುಪಿ: ಶುಕ್ರವಾರ ಬೆಳಗ್ಗೆ ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತಲು ಯತ್ನಿಸಿ ಬಿದ್ದ ಮಹಿಳೆಯೊಬ್ಬರನ್ನು ಉಡುಪಿ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣ ಪಡೆ (ಆರ್ಪಿಎಫ್) ರಕ್ಷಣೆ ಮಾಡಿದೆ.
ರೈಲು ಚಲಿಸಲು ಪ್ರಾರಂಭಿಸುತ್ತಿದ್ದಂತೆ ಮಹಿಳೆ ತನ್ನ ಸಮತೋಲನವನ್ನು ಕಳೆದುಕೊಂಡು ರೈಲು ಮತ್ತು ಫ್ಲ್ಯಾಟ್ಫಾರಂನ ಮಧ್ಯೆ ಬಿದ್ದು ಸಿಲುಕಿಕೊಂಡರು. ಇದನ್ನು ಗಮನಿಸಿದ ಆರ್ಪಿಎಫ್ ಅಧಿಕಾರಿ ಅಪರ್ಣಾ ನೇತೃತ್ವದ ಆರ್ಪಿಎಫ್ ಪೊಲೀಸರ ತಂಡ ತತ್ಕ್ಷಣ ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಿದರು. ಈ ಸಮಯೋಚಿತ ಮಧ್ಯಪ್ರವೇಶದಿಂದ ಸಂಭಾವ್ಯ ಅನಾಹುತ ತಡೆಯಲು ಸಾಧ್ಯವಾಯಿತು. ಸಿಬಂದಿಯ ಕ್ರಮವನ್ನು ಸಹಪ್ರಯಾಣಿಕರು ಶ್ಲಾಘಿಸಿದರು. ಅಪರ್ಣಾ ಅವರಿಗೆ ರೈಲ್ವೇ ಇಲಾಖೆ ವತಿಯಿಂದ 5 ಸಾವಿರ ರೂ. ಬಹುಮಾನ ಮೊತ್ತ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.