Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
Team Udayavani, Sep 21, 2024, 7:00 AM IST
ಬೆಂಗಳೂರು: ನ್ಯಾಯಾಲಯದ ಕಲಾಪಗಳು ನಡೆಯುವ ವೇಳೆ ಕೆಲವು ನ್ಯಾಯಮೂರ್ತಿಗಳ ಸಾಂದರ್ಭಿಕ ಮಾತು, ಅಭಿಪ್ರಾಯಗಳ ವೀಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿ ಸಿರುವ ಹೈಕೋರ್ಟ್, ಪೂರ್ವಾನು ಮತಿ ಪಡೆಯದೆ ವೀಡಿಯೋ ರೆಕಾರ್ಡಿಂಗ್ ಮತ್ತು ಅದರ ಹಂಚಿಕೆ ಮಾಡ ದಂತೆ ವೀಕ್ಷಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ.ಈ ಎಚ್ಚರಿಕೆಯ ಸೂಚನೆಗಳನ್ನು ಪ್ರತಿ ದಿನ ಕಲಾಪದ ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ಆರಂಭವಾಗುವುದಕ್ಕಿಂತ ಮುಂಚೆ ಹಾಕಲಾಗುತ್ತದೆ.
ಕರ್ನಾಟಕ ಹೈಕೋರ್ಟ್ 2022ರ ಜನವರಿ 1ರಿಂದ ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್ ಸ್ಟ್ರೀಮಿಂಗ್) ಮತ್ತು ರೆಕಾರ್ಡಿಂಗ್ ನಿಯಮಗಳು 2021ನ್ನು ಜಾರಿಗೊಳಿಸಿದೆ. ಇದರಲ್ಲಿ ಲೈವ್ ಸ್ಟ್ರೀಮಿಂಗ್, ರೆಕಾರ್ಡಿಂಗ್ ನಿಯಮ ಅಡಕ ಗೊಳಿಸಲಾಗಿದೆ.
ಈ ಸಂಬಂಧದ ನೋಟಿಸನ್ನು ಪ್ರತಿಯೊಂದು ಕೋರ್ಟ್ ಹಾಲ್ಗಳ ವೀಡಿಯೊ ಕಾನ್ಫರೆನ್ಸ್ ಪರದೆಯ ಮೇಲೆ ಕಲಾಪ ಆರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನ ಭೋಜನದ ವೇಳೆಯಲ್ಲಿ ಪ್ರಸಾರ ಮಾಡಲಾಗಿದೆ.
ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ ಯಾವುದೇ ವ್ಯಕ್ತಿ/ ಸಂಸ್ಥೆ ಕಲಾಪದ ಲೈವ್ ಸ್ಟ್ರೀಮಿಂಗ್
ಅಥವಾ ಹೈಕೋರ್ಟ್ ಯೂಟ್ಯೂಬ್ ಚಾನಲ್ನಲ್ಲಿನ ವೀಡಿಯೋಗಳನ್ನು ರೆಕಾರ್ಡ್ ಆಗಲಿ, ಪ್ರಸರಣ ಮಾಡುವು ದಾಗಲಿ ಮಾಡುವಂತಿಲ್ಲ ಎಂದು ಹೇಳಲಾಗಿದೆ. ಇದು ಎಲ್ಲ ಸಂದೇಶ ಅಪ್ಲಿಕೇಶನ್ಗಳಿಗೆ ಅನ್ವಯಿಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.