Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

ಮಾಹಿತಿ ನೀಡುವಂತೆ ಮುಖ್ಯಕಾರ್ಯದರ್ಶಿಗೆ ಪತ್ರ ; ಮುಂದುವರಿದ ರಾಜಭವನ-ಸರಕಾರ ಜಟಾಪಟಿ

Team Udayavani, Sep 21, 2024, 7:10 AM IST

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

ಬೆಂಗಳೂರು: ರಾಜ್ಯಪಾಲರು ಹಾಗೂ ಸರಕಾರದ ನಡುವಿನ ಜಟಾ ಪಟಿ ಮತ್ತೆ ಮುಂದುವರಿದಿದ್ದು ಲೋಕಾಯುಕ್ತ ಹಾಗೂ ರಾಜಭವನದ ನಡುವಿನ ಪತ್ರ ವ್ಯವಹಾರ ಗೌಪ್ಯತೆ ಸೋರಿಕೆ ಯಾಗುತ್ತಿರುವ ಬಗ್ಗೆ ರಾಜ್ಯಪಾಲರು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದಾರೆ.

ಲೋಕಾಯುಕ್ತದವರು ರಾಜ್ಯಪಾಲ ರಿಗೆ ಬರೆದ ರಹಸ್ಯ ಪತ್ರ ಸೋರಿಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಪತ್ರದಲ್ಲಿ ಕೋರಿದ್ದಾರೆ. ಸ್ವಾಯತ್ತ ಸಂಸ್ಥೆಯಾದ ಲೋಕಾಯುಕ್ತ ಹಾಗೂ ರಾಜಭವನದ ಮಧ್ಯೆ ನಡೆದ ಪತ್ರ ವ್ಯವಹಾರಗಳು ಸಕ್ಷಮ ಪ್ರಾಧಿಕಾರದ ವ್ಯಕ್ತಿ (ರಾಜಭವನ) ಹೊರತುಪಡಿಸಿ ಅನ್ಯರಿಗೆ ಲಭಿಸಲು ಹೇಗೆ ಸಾಧ್ಯ? ರಾಜ್ಯಪಾಲರ ಮುಂದೆ ಇರುವ ಲೋಕಾಯುಕ್ತ ಶಿಫಾರಸುಗಳನ್ನು ಯಾವ ಆಧಾರದ ಮೇಲೆ ಬಳಸಿಕೊಂಡು ಸಂಪುಟ ಸಲಹೆ ನೀಡಿದೆ? ಇದಕ್ಕೆ ಸೂಕ್ತ ದಾಖಲೆಯೊಂದಿಗೆ ಉತ್ತರ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

ರಾಜ್ಯಪಾಲರ ಪತ್ರದಲ್ಲಿ ಏನಿದೆ?
ಆ. 26ಕ್ಕೆ ರಾಜಭವನಕ್ಕೆ ಕ್ಯಾಬಿನೆಟ್‌ ನಿರ್ಣಯದ ದಾಖಲೆಗಳ ಕುರಿತು ಮುಚ್ಚಿದ ಲಕೋಟೆಯೊಂದಿಗೆ ಪತ್ರ ತಲುಪಿದೆ. ಅದರಲ್ಲಿ 16ನೇ ಸಚಿವ ಸಂಪುಟ ಸಭೆಯ ಅಜೆಂಡಾ ಹಾಗೂ 17ನೇ ಸಚಿವ ಸಂಪುಟದ ಹೆಚ್ಚುವರಿ ಅಜೆಂಡಾದ ಪ್ರತಿ ಮಾತ್ರ ಇತ್ತು. ಸಭೆಯ ನಿರ್ಣಯದ ದಾಖಲೆ ಇರಲಿಲ್ಲ. ಸಂಪುಟ ವಿಭಾಗಕ್ಕೆ ರಾಜಭವನದಿಂದ ದೂರವಾಣಿ ಮೂಲಕ ಮಾಹಿತಿ ತಿಳಿಸಲಾಯಿತು. ಆ. 27ರಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ದಾಖಲೆ ರಾಜಭವನಕ್ಕೆ ತಲುಪಿಸಲಾಗಿದೆ.

ಆ ಸಂಪುಟ ಸಭೆ ಬಗ್ಗೆ ಆ.23ರಂದು ಮಾಧ್ಯಮ ವರದಿ ಗಮನಿಸಿದ್ದು, ಎಚ್‌.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ ಜನಾರ್ದನ್‌ ರೆಡ್ಡಿ ವಿರುದ್ಧ ತನಿಖೆ ಅನುಮತಿ/ಅಭಿಯೋಜನೆಗೆ ಒಪ್ಪಿಗೆ ಪ್ರಸ್ತಾವನೆಗೆ ತಡಮಾಡದೆ ಒಪ್ಪಿಗೆ ನೀಡುವಂತೆ ಸಂಪುಟ ಸಭೆ ಸಲಹೆ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಇದೆ. ಆದರೆ ಸಂಪುಟ ಸಭೆಯಲ್ಲಿ ಈ ಪ್ರಕರಣಗಳಿಗೆ ಬಾಕಿಯಾಗಿರುವ ಬಗ್ಗೆ ಗಮನಿಸಿರುವುದರ ಬಗ್ಗೆ ಉಲ್ಲೇಖವಿದೆ ಹೊರತು ಸಲಹೆ ಕೊಡುವ ತೀರ್ಮಾನವಾಗಿಲ್ಲ ಎಂಬುದು ತಮಗೆ ಸೇರಿದ ಸರಕಾರದ ವರದಿಯಲ್ಲಿದೆ.

ಸಂಪುಟ ಸಭೆಯ ಟಿಪ್ಪಣಿಯಲ್ಲಿ ಯಾವ ದಿನಾಂಕದಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್‌ ಅನುಮತಿ ಕೇಳಿದೆ ಎಂಬುದನ್ನುಉಲ್ಲೇಖಿಸಲಾಗಿದೆ. ಈ ವಿಚಾರದಲ್ಲಿ ನನಗೆ ಕುತೂಹಲ ಉಂಟಾಗಿದ್ದು ಲೋಕಾಯುಕ್ತ ವಿಶೇಷ ತನಿಖಾ ತಂಡ ರಾಜ್ಯಪಾಲರಿಗೆ ಬರೆದ ಪತ್ರ ಹೇಗೆ ಬಹಿರಂಗವಾಯಿತು? ಸ್ವಾಯತ್ತ ಸಂಸ್ಥೆಯಾದ ಲೋಕಾಯುಕ್ತದ ಪೊಲೀಸರು ಗೌಪ್ಯ ದಾಖಲೆಯನ್ನು ಅಭಿಯೋಜನೆಗೆ ಅನುಮತಿ ನೀಡುವ ರಾಜಭವನ ಹೊರತು ಬಹಿರಂಗಪಡಿಸಿತು? ಗೌಪ್ಯ ಮಾಹಿತಿ ಹರಿ
ದಾಡಿದ್ದು ಹೇಗೆ? ಈ ವಿಚಾರದಲ್ಲಿ ಸಂಪುಟದ ಟಿಪ್ಪಣಿ, ಸಂಬಂಧಪಟ್ಟ ದಾಖಲೆ, ದಾಖಲೆ ಯ ಮೂಲ ಅಥವಾ ಮಾಹಿತಿಯನ್ನು ಪ್ರಾಮಾಣಿಕ ಹಾಗೂ ಶೀಘ್ರವಾಗಿ ನೀಡುವಂತೆ ಮುಖ್ಯಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ರಾಜ್ಯಪಾಲರ ಪತ್ರದಲ್ಲಿ ಏನಿದೆ?
-ಆ. 26ರ ಸಂಪುಟ ನಿರ್ಣಯ ತಲುಪಿದ ಬಗ್ಗೆ ರಾಜ್ಯಪಾಲರ ಪತ್ರದಲ್ಲಿ ಉಲ್ಲೇಖ
-ಆ. 27ರ ಡಿಸಿಎಂ ನೇತೃತ್ವದ ಸಭೆಯ ನಿರ್ಣಯಗಳು ಸಿಕ್ಕಿದ್ದರ ಬಗ್ಗೆ ಪ್ರಸ್ತಾವ
-ಕುಮಾರಸ್ವಾಮಿ, ಜೊಲ್ಲೆ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಅಭಿಯೋಜನೆಗೆ ಅನುಮತಿ ಬಗ್ಗೆ ಮಾಧ್ಯಮಗಳಲ್ಲಿ ವರದಿ
-ಸರಕಾರದ ವರದಿಯಲ್ಲಿ ಪ್ರಕರಣ ಅಭಿಯೋಜನೆಗೆ ಅನುಮತಿ ಬಾಕಿ ಬಗ್ಗೆ ಉಲ್ಲೇಖ
-ಲೋಕಾಯುಕ್ತ ಪೊಲೀಸರ ಗೌಪ್ಯ ಮಾಹಿತಿ ಹರಿದಾಡಿದ್ದು ಹೇಗೆ?
-ಈ ಬಗ್ಗೆ ಶೀಘ್ರ ಮಾಹಿತಿ ನೀಡಲು ಸಿ.ಎಸ್‌.ಗೆ ಪತ್ರದಲ್ಲಿ ಕೋರಿಕೆ

ಟಾಪ್ ನ್ಯೂಸ್

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Chikkaballapura: Walk in Chikkaballapura on World Peace Day

Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.