AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು


Team Udayavani, Sep 21, 2024, 10:09 AM IST

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

ಶಾರ್ಜಾ: ದಕ್ಷಿಣ ಆಫ್ರಿಕಾ (South Africa) ತಂಡವನ್ನು ಸತತ ಎರಡು ಏಕದಿನ ಪಂದ್ಯಗಳಲ್ಲಿ ಸೋಲುಣಿಸಿದ ಅಫ್ಘಾನಿಸ್ಥಾನ ತಂಡವು (Team Afghanistan) ಐತಿಹಾಸಿಕ ಸರಣಿ ಗೆಲುವು ಸಾಧಿಸಿದೆ. ಶುಕ್ರವಾರ (ಸೆ.20) ನಡೆದ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 177 ರನ್‌ ಗಳ ಬೃಹತ್‌ ಅಂತರದಲ್ಲಿ ಸೋಲನುಭವಿಸಿದೆ.

ಶಾರ್ಜಾದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡವು ರೆಹಮನುಲ್ಲಾ ಗುರ್ಬಾಜ್‌ (Rahmanullah Gurbaz) ಶತಕದ ನೆರವಿನಿಂದ ನಾಲ್ಕು ವಿಕೆಟ್‌ ನಷ್ಟಕ್ಕೆ 311 ರನ್‌ ಗಳಿಸಿದರೆ, ದ.ಆಫ್ರಿಕಾ ತಂಡವು ಸ್ಪಿನ್‌ ದಾಳಿಗೆ ಸಿಲುಕಿ ಕೇವಲ 134 ರನ್‌ ಗೆ ಆಲೌಟಾಯಿತು. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಒಂದು ಪಂದ್ಯ ಉಳಿದಿರುವಂತೆ ತನ್ನ ವಶಕ್ಕೆ ಪಡೆಯಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಅಫ್ಘಾನ್‌ ಗೆ ಗುರ್ಬಾಜ್‌ ಮತ್ತು ರಿಯಾಜ್‌ ಹಸನ್‌ ಮೊದಲ ವಿಕೆಟ್‌ 88 ರನ್‌ ಜೊತೆಯಾಟವಾಡಿ ಆಧರಿಸಿದರು. ಎರಡನೇ ವಿಕೆಟ್‌ ಗೆ ಗುರ್ಬಾಜ್‌ ಜತೆ ಸೇರಿದ ರೆಹಮತ್‌ 100 ರನ್‌ ಜೊತೆಯಾಟವಾಡಿದರು. ಏಕದಿನ ಕ್ರಿಕೆಟ್‌ ನ ಏಳನೇ ಶತಕ ಬಾರಿಸಿದ ಗುರ್ಬಾಜ್‌ 105 ರನ್‌ ಗಳಿಸಿದರು. ರೆಹಮತ್‌ 50 ರನ್‌ ಮಾಡಿದರೆ, ಅಜ್ಮತುಲ್ಲಾಹ್‌ ಅಜೇಯ 86 ರನ್‌ ಮಾಡಿದರು.

312 ರನ್‌ ಗುರಿ ಬೆನ್ನತ್ತಿದ್ದ ದ.ಆಫ್ರಿಕಾ ನಾಯಕ ಬವುಮಾ ಮತ್ತು ಟೊನಿ ಡಿ ಜೋರ್ಜಿ ಮೊದಲ ವಿಕೆಟ್‌ ಗೆ 72 ರನ್‌ ಕಲೆ ಹಾಕಿದರು. ಬವುಮಾ 38 ಮತ್ತು ಟೊನಿ 31 ರನ್‌ ಮಾಡಿದರು. ಆದರೆ ಬಳಿಕ ಯಾವುದೇ ಆಟಗಾರ ನಿಂತು ಆಡಲಿಲ್ಲ. ರೀಜಾ ಹೆಂಡ್ರಿಕ್ಸ್‌ (17 ರನ್)‌ ಏಡನ್‌ ಮಾರ್ಕ್ರಮ್‌ (21 ರನ್)‌ ಗಳಿಸಿದ್ದು ಬಿಟ್ಟರೆ ಉಳಿದ್ಯಾರು ಎರಡಂಕಿ ಮೊತ್ತವನ್ನೂ ಕಲೆ ಹಾಕಲಿಲ್ಲ. ಕೊನೆಗೆ 34.2 ಓವರ್‌ ಗಳಲ್ಲಿ ಆಫ್ರಿಕಾ ಕೇವಲ 134 ರನ್‌ ಗೆ ಆಲೌಟಾಯಿತು.

ಅಫ್ಘಾನಿಸ್ಥಾನದ ಪರ ರಶೀದ್‌ ಖಾನ್‌ ಮತ್ತು ನಂಗೆಯಲಿಯಾ ಖರೋಟೆ ಸ್ಪಿನ್‌ ದಾಳಿ ನಡೆಸಿ ಹರಿಣಗಳ ಬ್ಯಾಟರ್‌ ಗಳನ್ನು ಕಟ್ಟಿ ಹಾಕಿದರು. ರಶೀದ್‌ ಖಾನ್‌ ಕೇವಲ 19 ರನ್‌ ನೀಡಿ 5 ವಿಕೆಟ್‌ ಕಿತ್ತರೆ, ನಂಗೆಯಲಿಯಾ ಖರೋಟೆ ನಾಲ್ಕು ವಿಕೆಟ್‌ ಪಡೆದರು. ರಶೀದ್‌ ಖಾನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ದಾಖಲೆ ಬರೆದ ಗುರ್ಬಾಜ್‌

ಶತಕ ಬಾರಿಸಿ ಮಿಂಚಿದ ಆರಂಭಿಕ ಆಟಗಾರ ರೆಹಮನುಲ್ಲಾ ಗುರ್ಬಾಜ್‌ ಏಕದಿನ ಕ್ರಿಕೆಟ್‌ ನಲ್ಲಿ ಅಫ್ಘಾನ್‌ ಪರ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್‌ ಎಂಬ ಖ್ಯಾತಿಗೆ ಪಾತ್ರರಾದರು. ಇದು ಗುರ್ಬಾಜ್‌ ಬಾರಿಸಿದ ಏಳನೇ ಶತಕ. ಅವರು ಆರು ಶತಕ ಬಾರಿಸಿದ್ದ ಮೊಹಮದ್‌ ಶೆಹಜಾದ್‌ ಅವರನ್ನು ಹಿಂದಿಕ್ಕಿದರು. ಇಬ್ರಾಹಿಂ ಜದ್ರಾನ್‌ ಮತ್ತು ರೆಹಮತ್‌ ಶಾ ತಲಾ ಐದು ಏಕದಿನ ಶತಕ ಹೊಡೆದಿದ್ದಾರೆ.

23 ವರ್ಷ ವಯಸ್ಸಿನ ಮೊದಲ ಅತಿ ಹೆಚ್ಚು ಏಕದಿನ ಶತಕ ಬಾರಿಸಿದವರ ಪಟ್ಟಿಯಲ್ಲಿ ಗುರ್ಬಾಜ್‌ ಮೂರನೇ ಸ್ಥಾನಕ್ಕೇರಿದರು. ಭಾರತದ ಸಚಿನ್‌ ತೆಂಡೂಲ್ಕರ್‌ ಮತ್ತು ದ.ಆಫ್ರಿಕಾದ ಕ್ವಿಂಟನ್‌ ಡಿಕಾಕ್‌ 23 ವರ್ಷದ ಮೊದಲು ಎಂಟು ಶತಕ ಹೊಡೆದಿದ್ದರು. ವಿರಾಟ್‌ ಕೊಹ್ಲಿ ಏಳು, ಬಾಬರ್‌ ಅಜಂ ಮತ್ತು ಉಪುಲ್‌ ತರಂಗ ತಲಾ ಆರು ಶತಕ ಬಾರಿಸಿದ್ದರು.

ಟಾಪ್ ನ್ಯೂಸ್

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.