Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Team Udayavani, Sep 21, 2024, 1:30 PM IST
ಬಳ್ಳಾರಿ: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರು ಕಳ್ಳರ ಜೊತೆಗೆ ಸೇರಿಕೊಂಡು ಕಳ್ಳತನ ಮಾಡುವ ಸುದ್ದಿಗಳನ್ನು ಓದಿರುತ್ತೇವೆ. ಆದರೆ ಕಳ್ಳರ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಇದೀಗ ಬಯಲಿಗೆ ಬಂದಿದೆ. ಬಳ್ಳಾರಿಯಲ್ಲಿ ಈ ಘಟನೆ ನಡೆದಿದೆ.
ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗ್ಯಾಂಗ್ ಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ ಬಂಧಿಸಲಾಗಿದೆ.
ಘಟನೆಯ ವಿವರ
ರಘು ಎನ್ನುವ ಉದ್ಯಮಿ ಸೆ.12 ರಂದು ಬೆಳಿಗಿನ ಜಾವ ಬೈಕ್ ನಲ್ಲಿ 22 ಲಕ್ಷದ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ತೆಗೆದುಕೊಂಡು ಹೋಗುತ್ತಿದ್ದರು. ರಾಯದುರ್ಗಾ ಬಸ್ ನಿಲ್ದಾಣದ ಕಡೆ ಹೋಗುತ್ತಿರುವಾಗ ಅವರಿಗೆ ಕಣ್ಣಿಗೆ ಖಾರದ ಪುಡಿ ಎರಚಿ ಹಣ ಒಡೆವೆ ದರೋಡೆ ಮಾಡಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಮುಖ ಆರೋಪಿ ತೌಸೀಫ್ ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ನನ್ನು ಬಂಧಿಸಿದ್ದಾರೆ. ಕಳ್ಳತನಕ್ಕೆ ಸಾಥ್ ನೀಡಿದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಮೆಹಬೂಬ್ ಪಾಷನನ್ನೂ ಬಂಧಿಸಲಾಗಿದೆ.
ಹೆಡ್ ಕಾನ್ಸಟೇಬಲ್ ಮೆಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರಾಗಿದ್ದರು. ಅಸೀಫ್ ಈ ಮೊದಲು ಹೋಮ್ ಗಾರ್ಡ್ ಕೆಲಸ ಮಾಡುತ್ತಿದ್ದ. ಆ ಸಲುಗೆಯಿಂದಲೇ ದರೋಡೆ ಮಾಡುವ ಪ್ಲಾನ್ ಮಾಡಲಾಗಿತ್ತು. ಆರೋಪಗಳನ್ನು ಬಂಧಿಸಿದಾಗ ಹೆಡ್ ಕಾನ್ಸಟೇಬಲ್ ಪಾತ್ರ ಇರುವುದು ಬಯಲಿಗೆ ಬಂದಿದೆ.
ದರೋಡೆ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ 9 ಲಕ್ಷ ಹಣವನ್ನು ಪಡೆದಿದ್ದಾರೆ. ಪೊಲೀಸರು ಸದ್ಯ 15 ಲಕ್ಷದ 91 ಸಾವಿರ ರೂ ನಗದು ಮತ್ತು116 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.