Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Team Udayavani, Sep 21, 2024, 2:03 PM IST
ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಶನಿವಾರ ಮಧ್ಯಾಹ್ನ (ಸೆ.21) ಪತ್ತೆಯಾಗಿದೆ.
ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ.
ಜುಲೈ 16ರಂದು ನಡೆದಿದ್ದ ಗುಡ್ಡಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು. ಆ ವೇಳೆ ಹಲವು ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ತೀವ್ರ ನೀರಿನ ಸೆಳೆತದ ಕಾರಣದಿಂದ ಅಡ್ಡಿಯಾಗಿತ್ತು.
ಗುಡ್ಡ ಕುಸಿತದ ಕಾರಣದಿಂದ ಹೆದ್ದಾರಿ ಬದಲಿಯಲ್ಲಿದ್ದ ಹೋಟೆಲ್ ಸಮೇತ ಲಾರಿಯೂ ಗಂಗಾವಳಿ ನದಿ ಪಾಲಾಗಿತ್ತು. ಎನ್ಡಿಆರ್ಎಫ್ ತಂಡ ಡ್ರೋನ್ ಮೂಲಕ ಸ್ಕ್ಯಾನಿಂಗ್ ನಡೆಸಿದ್ದು, ನದಿಯಲ್ಲಿ ಸ್ಕ್ಯಾನಿಂಗ್ ಮೂಲಕ ಲಾರಿ ಇರುವ ಸ್ಥಳ ಗುರುತು ಮಾಡಿತ್ತು. ಆದರೆ ಡೈವಿಂಗ್ ಮಾಡಿ ಲಾರಿಯನ್ನು ಪರಿಶೀಲಿಸಲು ನದಿಯ ಹರಿವು ಅಡ್ಡಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.