Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Team Udayavani, Sep 21, 2024, 2:44 PM IST
ಶಿವಮೊಗ್ಗ: ಮುಖ್ಯಮಂತ್ರಿಯವರ ಕುಮ್ಮಕ್ಕಿನಿಂದ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹಿಂದೂ ಭಾವನೆ ಮೇಲೆ ಧಕ್ಕೆ ತರುವಂತಹ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಯಾವುದೇ ಸರಕಾರ ಇಷ್ಟೊಂದು ಕೆಟ್ಟದಾಗಿ ನಡೆದುಕೊಂಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪದೇ ಪದೇ ಹಿಂದೂ ಸಂಘಟನೆಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ರಾಜ್ಯದಾದ್ಯಂತ ಗಣೇಶ ವಿಸರ್ಜನೆ ಬಹಳ ಅರ್ಥಪೂರ್ಣವಾಗಿ ದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ನಾಗಮಂಗಲದಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ದಾವಣಗೆರೆಯಲ್ಲಿ ಘಟನೆ ನಡೆದಿದೆ. ಹಿಂದೂ ಸಂಘಟನೆ ಮೇಲೆ ಹಬ್ಬದ ದಿನ ದಾಳಿ ನಡೆದಿದೆ ಎಂದು ಕಿಡಿಕಾರಿದರು.
ತುಮಕೂರಿನಲ್ಲಿ ಪೊಲೀಸರು ವಿದ್ಯಾರ್ಥಿಗಳು ಕಳುಹಿಸಬಾರದು ಎಂದು ಕುಲಸಚಿವರಿಗೆ ಪತ್ರ ಬರೆಯುತ್ತಾರೆ. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಡಿ ಎಂದು ತಾಕೀತು ಮಾಡಿದ್ದಾರೆ. ದುರಂಹಕಾರ ಇಲ್ಲದಿದ್ದರೆ ಪತ್ರ ಬರೆಯುತ್ತಿರಲಿಲ್ಲ. ಹಿಂದೂ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸರಕಾರ ನಡೆದುಕೊಳ್ಳುತ್ತಿದೆ. ಕುಲಸಚಿವರು ಈ ಸುತ್ತೊಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರದ ನಡವಳಿಕೆ ದೇಶದ್ರೋಹಿಗಳಿಗೆ ದೊಡ್ಡ ಶಕ್ತಿ ತಂದುಕೊಡ್ತಿದೆ. ಸರಕಾರದ ನಡವಳಿಕೆ ರಾಜ್ಯಕ್ಕೆ ಮಾರಕವಾಗುತ್ತಿದೆ. ಹಿಂದುಗಳ ಭಾವನೆಗೆ ಧಕ್ಕೆ ತರುತ್ತಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನದ ಧ್ವಜ ಹಾರಿಸುತ್ತಾರೆ. ಸರಕಾರದ ಧೋರಣೆಯಿಂದ ಇಂತಹ ಘಟನೆ ನಡೆಯುತ್ತವೆ. ಮೊದಲೇ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
ಮುನಿರತ್ನ ತನಿಖೆಯಾಗಲಿ
ಮುನಿರತ್ನ ತನಿಖೆ ಸರಿಯಾದ ರೀತಿ ಆಗಬೇಕು. ತಪ್ಪು ಮಾಡಿದ್ದರೆ ಸೂಕ್ತ ತನಿಖೆಯಾಗಲಿ ನಾವು ಬೇಡ ಎನ್ನುವುದಿಲ್ಲ. ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.