J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
ಅಬ್ದುಲ್ಲಾ, ಮುಫ್ತಿ ಮತ್ತು ನೆಹರು-ಗಾಂಧಿ ಕುಟುಂಬಗಳು ಭಯೋತ್ಪಾದನೆಯನ್ನು ಹರಡಿದವು...
Team Udayavani, Sep 21, 2024, 9:27 PM IST
ಜಮ್ಮು: ”ಅಬ್ದುಲ್ಲಾ, ಮುಫ್ತಿ ಮತ್ತು ನೆಹರು-ಗಾಂಧಿ ಕುಟುಂಬಗಳು 90 ರ ದಶಕದಿಂದ ಇಲ್ಲಿಯವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡಿದವು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ(ಸೆ21) ಕಿಡಿ ಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಎಡೆಬಿಡದೆ ಹಲವು ಕಡೆ ಪ್ರಚಾರ ಕಾರ್ಯಗಳಲ್ಲಿ ಶಾ ಭಾಗಿಯಾದರು. ಮೆಂಧರ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮತ್ತು ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಂದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸುತ್ತಿದೆ. ಯುವಕರಿಗೆ ಕಲ್ಲುಗಳ ಬದಲಿಗೆ ಲ್ಯಾಪ್ಟಾಪ್ ನೀಡಲಾಗಿದೆ. ಓಮರ್ ಅಬ್ದುಲ್ಲಾ, ಕೇಳಿಸಿಕೋ, ಮೋದಿ ಸರಕಾರವು ಭಯೋತ್ಪಾದನೆಯನ್ನು ಈ ಸುಂದರವಾದ ಬೆಟ್ಟಗಳನ್ನು ಪ್ರವೇಶಿಸಲು ಬಿಡುವುದಿಲ್ಲ ಎಂದು ಅಬ್ಬರಿಸಿದರು.
ರಾಜೌರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ‘ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಮುಂದುವರಿಸುವುದು ಮೋದಿ ಸರಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ’ ಎಂದರು.
”90 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ದಾಳಿ ನಡೆಯುತ್ತಿತ್ತು ಏಕೆಂದರೆ ಇಲ್ಲಿನ ಯಜಮಾನರು ಪಾಕಿಸ್ಥಾನಕ್ಕೆ ಹೆದರುತ್ತಿದ್ದರು. ಈಗ ಪಾಕಿಸ್ಥಾನವು ಮೋದಿ ಜಿಗೆ ಹೆದರುತ್ತಿದೆ” ಎಂದರು.
‘ರಾಹುಲ್ ಗಾಂಧಿಯವರ ಮೊಹಬ್ಬತ್ ಕಿ ದುಖಾನ್ ನಿಂದ ಭಯೋತ್ಪಾದನೆಯ ಆದೇಶ ಹೊರಬೀಳುತ್ತಿದೆ.ಭಯೋತ್ಪಾದನೆಗಾಗಿ ಬಂದೂಕು ಹಿಡಿದಿದ್ದ ಜಮ್ಮು-ಕಾಶ್ಮೀರದ ಯುವಕರು ಈಗ ದೇಶದ ಭದ್ರತೆಗಾಗಿ ಬಂದೂಕು ಹಿಡಿಯಲಿದ್ದಾರೆ” ಎಂದರು.
”NC, ಕಾಂಗ್ರೆಸ್ ಮತ್ತು PDP ಯ ರಾಜವಂಶದ ಸರಕಾರಗಳು ಯಾವಾಗಲೂ ಜಮ್ಮುವಿನ ವಿರುದ್ಧ ತಾರತಮ್ಯವನ್ನು ಹೊಂದಿವೆ. ಪಕ್ಷಪಾತದಿಂದಾಗಿ ಜಮ್ಮು ಮತ್ತು ಕಾಶ್ಮೀರದ ಈ ಚುನಾವಣೆಯಲ್ಲಿ ಜನರು ಈ ಕುಟುಂಬಗಳ ಅಂಗಡಿಗಳಿಗೆ ಶಾಶ್ವತವಾಗಿ ಬೀಗ ಹಾಕಲು ಹೊರಟಿದ್ದಾರೆ ಮತ್ತು ಬಿಜೆಪಿಯನ್ನು ಮಾತ್ರ ಅಧಿಕಾರಕ್ಕೆ ತರಲಿದ್ದಾರೆ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.