Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ
Team Udayavani, Sep 22, 2024, 6:55 AM IST
ಮೂಡುಬಿದಿರೆ: ಕಳೆದ ಆ. 15ರಂದು ಮೂಡುಬಿದಿರೆ ಮತ್ತು ಸೆ. 2ರಂದು ಮೂಡುಮಾರ್ನಾಡು ಬಸದಿ ಬಳಿ ವೃದ್ಧೆಯರ ಕುತ್ತಿಗೆಯಿಂದ ಚಿನ್ನದ ಸರ ಸೆಳೆದು ಪರಾರಿಯಾದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಸೆರೆಹಿಡಿದಿದ್ದಾರೆ.
ಮೂಡುಬಿದಿರೆಯ ನಿರ್ಮಲಾ ಪಂಡಿತ್ (70) ಇವರ ಕುತ್ತಿಗೆಯಿಂದ 24 ಗ್ರಾಂ. ಚಿನ್ನದ ಸರ ಮತ್ತು ಮೂಡುಮಾರ್ನಾಡು ಬಸದಿ ಬಳಿ ಪ್ರೇಮಾ (82) ಇವರ ಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಚಿನ್ನದ ಸರವನ್ನು ಸ್ಕೂಟರ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಕಸಿದು ಪರಾರಿಯಾಗಿದ್ದರು.
ಸರ ಕಳ್ಳತನ ಪ್ರಕರಣದ ಓರ್ವ ಆರೋಪಿ ಹಸನ್ ಹಬೀಬ್ ಹಸನ್ ಯಾನೆ ಚಬ್ಬಿ ಯಾನೆ ಚೆಂಬುಗುಡ್ಡೆ ಹಬ್ಬಿ (42) ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 44ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಈತನ ಮೇಲೆ ಉಳ್ಳಾಲ ಠಾಣೆಯಲ್ಲಿ 5 ದಸ್ತಗಿರಿ ವಾರೆಂಟ್ ಸಹಿತ ಒಟ್ಟಾರೆ 15 ದಸ್ತಗಿರಿ ವಾರೆಂಟ್ಗಳಿವೆ.
ಇನ್ನೊಬ್ಬ ಆರೋಪಿ ಬಂಟ್ವಾಳ ತಾಲೂಕಿನ ಜೋಡುಮಾರ್ಗ ಅದ್ಯಾಡಿ ಮನೆಯ ಉಮ್ಮರ್ ಸಿಯಾಫ್ ಚಿಯಾ (29) ಬಂಟ್ವಾಳ ಠಾಣೆಯಲ್ಲಿ ಈ ಮೊದಲು ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.
ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ, ಡಿಸಿಪಿ ಸಿದ್ಧಾರ್ಥ ಗೊಯಲ್, ಡಿಸಿಪಿ ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರ ನಿರ್ದೇಶನದಂತೆ, ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Arrested: ಐಪಿಎಸ್ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.