Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ
Team Udayavani, Sep 21, 2024, 10:40 PM IST
ಉಪ್ಪುಂದ: ಸಿನಿಮಾ ಮಾದರಿಯಲ್ಲಿ ವೇಗವಾಗಿ ಬಂದ ಒಂದು ಕಾರನ್ನು ಇನ್ನೊಂದು ಕಾರು ಬೆನ್ನಟ್ಟಿಕೊಂಡು ಬಂದು ಪರಾರಿಯಾಗಲು ಯತ್ನಿಸಿದಾಗ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪುಂದ ಸಮೀಪದ ನಂದನವನದಲ್ಲಿ ನಡೆದಿದೆ.
ಗುರುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ಸಂಜೆ 3 ಗಂಟೆಗೆ ನಾಲ್ಕು ಜನರಿದ್ದ ಕಾರು ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಬರುತ್ತಿತ್ತು. ಅದನ್ನು ಬೆನ್ನಟ್ಟಿಕೊಂಡು ಇನ್ನೊಂದು ಕಾರು ಬಂದಿದೆ. ಎದುರಿನ ಕಾರಿನಲ್ಲಿದ್ದ ನಾಲ್ಕು ಜನರ ಪೈಕಿ ಇಬ್ಬರು ಹುಡುಗಿಯರು ಇದ್ದರೆನ್ನಲಾಗಿದೆ. ಈ ಕಾರು ಉಪ್ಪುಂದದ ನಂದನವನ ಎಂಬಲ್ಲಿ ಅಡ್ಡರಸ್ತೆಯಲ್ಲಿ ತಿರುಗಿದ ಬಳಿಕ ಇಬ್ಬರು ಹುಡುಗಿಯರನ್ನು ಇಳಿಸಿ ಕಾರು ಮುಂದಕ್ಕೆ ಸಾಗಿದೆ.
ಇದನ್ನು ಗಮನಿಸಿದ ಮಹಾಬಲೇಶ್ವರ ಮತ್ತು ಸ್ಥಳೀಯ ಯುವಕರು ಎರಡೂ ಕಾರುಗಳನ್ನು ಬೆನ್ನತ್ತಿದ್ದಾರೆ. ಕಾರು ನಂದನವನ ಹೊಳೆಯ ಹತ್ತಿರದ ಮನೆಯ ಬದಿಯಲ್ಲಿ ನಿಲ್ಲಿಸಿ ಹೊಳೆಗೆ ಹಾರಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸ್ಥಳೀಯ ಯುವಕರು ಮತ್ತು ಮಹಿಳೆಯರು ಸೇರಿ ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಹಿಂದಿನ ಕಾರಿನಲ್ಲಿದ್ದವರನ್ನು ವಿಚಾರಿಸಿದ್ದಾಗ ಮೊದಲಿನ ಕಾರಿನವರು ತಮ್ಮ ಕಾರನ್ನು ಕಳ್ಳತನ ಮಾಡಿಕೊಂಡು ಬಂದು ಅಪರಾಧ ಕೃತ್ಯಗಳಿಗೆ ಬಳಸುತ್ತಿದ್ದರೆ ಎಂದು ದೂರಿದ್ದಾರೆ.
ಮಾರಾಕಾಸ್ತ್ರ ಪತ್ತೆ:
ಮೊದಲ ಕಾರನ್ನು ಪರೀಕ್ಷಿಸಿದಾಗ ಢಿಕ್ಕಿಯಲ್ಲಿ ಮಾರಾಕಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಬಳಿಕ ಬೈಂದೂರು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ಆರೋಪಿಗಳು ನೀವು ಭಟ್ಕಳಕ್ಕೆ ಬಂದರೆ ನೋಡಿಕೊಳ್ಳುತ್ತೇವೆ ಎಂದು ಸ್ಥಳೀಯರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.