Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

ವಿದ್ಯಾರ್ಥಿಗಳು ಸಶಸ್ತ್ರ ಪಡೆಗಳಿಗೆ ಸೇರಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿ: ಉಪ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್

Team Udayavani, Sep 21, 2024, 11:18 PM IST

Vijayapura-Sainik

ವಿಜಯಪುರ: ವಿದ್ಯಾರ್ಥಿಗಳು ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಿ ಸಮರ್ಪಣೆ, ಹೆಮ್ಮೆ ಮತ್ತು ನಿಸ್ವಾರ್ಥದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸಬೇಕು ಎಂದು ಭಾರತೀಯ ನೌಕಾಪಡೆಯ ಉಪ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ತಿಳಿಸಿದರು.

ನಗರದ ಸೈನಿಕ ಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಯುಎಚ್-3ಎಚ್ ಹೆಲಿಕಾಪ್ಟರ್ ಸ್ಥಾಪನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಜೀವನದಲ್ಲಿ ಯಶಸ್ವಿಯಾಗಲು ಮತ್ತು ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ವಿದ್ಯಾರ್ಥಿಗಳು ಹೋರಾಟದ ಮನೋಭಾವ ಪ್ರದರ್ಶಿಸಬೇಕು ಮತ್ತು ಶ್ರೇಷ್ಠತೆಯ ಗುರಿ ಹೊಂದಿರಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ, ಈ ಶಾಲೆಯಲ್ಲಿ ತಾವು ಕಲಿತ ದಿನಗಳನ್ನೂ ನೆನಪಿಸಿಕೊಂಡ ಅವರು, ತಮ್ಮ ಆರು ದಶಕಗಳ ಜೀವನ ಪಯಣದಲ್ಲಿ ಈ ಶಾಲೆಗೆ ವಿಶೇಷ ಸ್ಥಾನವಿದೆ ಎಂದರು. ಅಲ್ಲದೇ, ಸೈನಿಕ ಶಾಲೆಯಲ್ಲಿ ಯುಎಚ್-3ಎಚ್ ಹೆಲಿಕಾಪ್ಟರ್ ಸ್ಥಾಪನೆಯು ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್‌ನ ಶ್ರೀಮಂತ ಕಾರ್ಯಾಚರಣೆ ಪರಂಪರೆಗೆ ಸಂದ ಗೌರವ. ಶಾಲೆಯ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಉದ್ದೇಶದಿಂದ ಇದನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ಮತ್ತು ಕೆಡೆಟ್‌ಗಳೊಂದಿಗೆ ಸಂವಾದ ನಡೆಸಿದರು.

ಇದಕ್ಕೂ ಮುನ್ನ ಉಪ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ರನ್ನು ಪ್ರಿನ್ಸಿಪಾಲ್, ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ್ ಬರಮಾಡಿಕೊಂಡರು. ಶಾಲೆಯ ಇತ್ತೀಚಿನ ಬೆಳವಣಿಗೆಗಳು ಮತ್ತು ಶೈಕ್ಷಣಿಕ ಪ್ರಗತಿ ವಿವರಿಸಿದರು. ಜತೆಗೆ ಸೈನಿಕ ಶಾಲೆಯ ಕೆಡೆಟ್‌ಗಳು ಆಕರ್ಷಕ ಗೌರವ ವಂದನೆ ಸಲ್ಲಿಸಿದರು.

ಹೆಲಿಕಾಪ್ಟರ್ ಇತಿಹಾಸ
ಸೈನಿಕ ಶಾಲೆಯ ಆವರಣದಲ್ಲಿ ಸ್ಥಾಪಿಸಲಾದ ಯುಎಚ್-3ಎಚ್ ಹೆಲಿಕಾಪ್ಟರ್ ಭಾರತೀಯ ನೌಕಾಪಡೆಗೆ ಸೇರಿದ್ದು. 2007ರಲ್ಲಿ ನೌಕಾಪಡೆಗೆ ಸೇರ್ಪಡೆ ಮಾಡಲಾಗಿತ್ತು. 2009ರ ಮಾರ್ಚ್ 24ರಂದು ಮೊದಲ ಬಾರಿ ವಿಶೇಷ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಅವಳಿ ಎಂಜಿನ್, ಬಹು ಪಾತ್ರದ ಹೆಲಿಕಾಪ್ಟರ್ ಆಗಿದ್ದು, ಇದು ನೌಕಾಪಡೆಯ ಸೀಲಿಫ್ಟ್ ಸಾಮರ್ಥ್ಯವನ್ನು ಹೆಚ್ಚಿಸಿತ್ತು. ಪ್ರತಿಕೂಲ ಸಮುದ್ರತೀರದಲ್ಲಿ ಯುದ್ಧ ಪಡೆಗಳ ತರಬೇತಿ ಜತೆಗೆ ಅನೇಕ ಕಾರ್ಯಾಚರಣೆಗಳಲ್ಲಿ ತನ್ನ ಪಾತ್ರವನ್ನು ವಹಿಸಿ, ರಾಷ್ಟ್ರಕ್ಕೆ ಸೇವೆ ಸಲ್ಲಿಸಿದೆ.

ಟಾಪ್ ನ್ಯೂಸ್

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.