Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

ಬೋಟ್‌ಗೆ ಭಾರೀ ಹಾನಿ, ಅಂದಾಜು 25 ಲಕ್ಷ ರೂ. ನಷ್ಟ

Team Udayavani, Sep 22, 2024, 7:30 AM IST

KUNDAPURA-BOA

ಕುಂದಾಪುರ/ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಮರದ ದಿಮ್ಮಿ ತಾಗಿ ಬೋಟ್‌ಗೆ ಹಾನಿಯಾಗಿ ದಿಕ್ಕಾಪಾಲಾಗುತ್ತಿದ್ದ ತ್ರಿಸೆವೆಂಟಿ ಬೋಟೊಂದನ್ನು ಮೀನುಗಾರಿಕೆಯಲ್ಲಿ ತೊಡಗಿದ್ದ ಇನ್ನೆರಡು ಬೋಟ್‌ನವರು ರಕ್ಷಿಸಿದ್ದಾರೆ. ಅದರಲ್ಲಿದ್ದ 6 ಮೀನುಗಾರರನ್ನು ಸುರಕ್ಷಿತವಾಗಿ ಪಾರು ಮಾಡಿದ ಘಟನೆ ಕೋಟ ಸಮೀಪ ಆಳ ಸಮುದ್ರದಲ್ಲಿ ನಡೆದಿದೆ.

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಈ ಬೋಟ್‌ನಲ್ಲಿದ್ದ ಬಸವ ಖಾರ್ವಿ, ಪ್ರಮೋದ್‌, ಭಾಸ್ಕರ್‌, ವೈಕುಂಠ, ಶೇಖರ್‌ ಹಾಗೂ ಸೂರ್ಯ ಅವರನ್ನು ರಕ್ಷಿಸಲಾಗಿದೆ. ಕೋಟ ಸಮೀಪದ ಅರಬಿ ಸಮುದ್ರದಲ್ಲಿ ಮರದ ಬೃಹತ್‌ ದಿಮ್ಮಿ ತಾಗಿ, ಬೋಟಿಗೆ ಹಾನಿಯಾಗಿದ್ದು, ಈ ವೇಳೆ ಅಲ್ಲಿಯೇ ಇದ್ದ ವರುಣ ಸಿದ್ಧಿ ಹಾಗೂ ಬೃಂದಾವನ ಎನ್ನುವ ಬೋಟ್‌ನಲ್ಲಿದ್ದ ಮೀನುಗಾರರು ನೆರವಿಗೆ ಬಂದು, ಈ ಬೋಟ್‌ ಅನ್ನು ಹಂಗಾರಕಟ್ಟೆಯ ಬಂದರಿಗೆ ಸುರಕ್ಷಿತವಾಗಿ ತರುವಲ್ಲಿ ಸಹಕರಿಸಿದರು. ಬೋಟ್‌ಗೆ ಭಾರೀ ಹಾನಿಯಾಗಿದ್ದು, ಅಂದಾಜು 25 ಲಕ್ಷ ರೂ. ನಷ್ಟ ಉಂಟಾಗಿದೆ. ಗಂಗೊಳ್ಳಿಯ ಕರಾವಳಿ ಕಾವಲು ಪಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಡಕ್ಕಪ್ಪಳಿಸಿದ ಬೋಟ್‌ ರಕ್ಷಣೆ ಕಾರ್ಯಾಚರಣೆ ವಿಫಲ
ಕೋಟ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಸಾಲಿಗ್ರಾಮ ಮೂಲದ ಗೀತಾ ಅವರ ಮಾಲಕತ್ವದ ಜಲಸಾಗರ ಹಾಗೂ ಭವಾನಿ ಅವರ ಮಾಲಕತ್ವದ ಜಲಜನನಿ ಬೋಟ್‌ಗಳು ಸೆ.17ರಂದು ಭಾರೀ ಗಾಳಿ-ಮಳೆಗೆ ಗೋಪಾಡಿ ಚರ್ಕಿಕಡು ಎನ್ನುವಲ್ಲಿ ದಡಕ್ಕೆ ಅಪ್ಪಳಿಸಿದ್ದು, ಅದನ್ನು ತೆರವು ಗೊಳಿಸಲು ನಾಲ್ಕು ದಿನಗಳಿಂದ ನಡೆಸಿದ ಕಾರ್ಯಾಚರಣೆ ವಿಫಲವಾಗಿದೆ.

ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದ ಸಮುದ್ರದ ಅಲೆಗೆ ಸಿಲುಕಿ ದಡಕ್ಕೆ ಅಪ್ಪಳಿಸಿದ್ದು, ಮೀನುಗಾರರು ಸುರಕ್ಷಿತವಾಗಿದ್ದರೂ ಬೋಟ್‌ಗೆ ಸಾಕಷ್ಟು ಹಾನಿಯಾಗಿತ್ತು. ಅನಂತರ ಸಮುದ್ರದ ಮೂಲಕ ಇನ್ನೊಂದು ಬೋಟ್‌ ಬಳಸಿ ನೀರಿಗೆ ಎಳೆಯಲು ಪ್ರಯತ್ನಿಸಲಾಯಿತು ಹಾಗೂ ತಾಂತ್ರಿಕ ತಜ್ಞರ ಸಹಕಾರ ಪಡೆದು ಕಾರ್ಯಾಚರಣೆ ನಡೆಸಿದರೂ ಯಶಸ್ವಿಯಾಗಿಲ್ಲ. ಎರಡೂ ಬೋಟ್‌ಗಳು ಸಂಪೂರ್ಣ ಹಾನಿಗೀಡಾಗುವ ಆತಂಕ ಎದುರಾಗಿದ್ದು, ಸುಮಾರು 30 ಲಕ್ಷ ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.