Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Team Udayavani, Sep 22, 2024, 10:59 AM IST
ಗಂಗೊಳ್ಳಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಂಕಾಳಿ ದೇವಸ್ಥಾನದ ದೇವರಿಗೆ ಹಾಕಲಾದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪೂಜೆ ಮಾಡುವ ಅರ್ಚಕರೇ ಕದ್ದಿರುವ ಘಟನೆ ಬೆಳಕಿಗೆ ಬಂದಿದೆ.
ದೇವಸ್ಥಾನದಲ್ಲಿ ಕಳೆದ ಮೇ ತಿಂಗಳಿನಿಂದ ಪೂಜೆ ಮಾಡುತ್ತಿದ್ದ ಅರ್ಚಕ ನರಸಿಂಹ ದೇವರ ಚಿನ್ನಾಭರಣ ಕದ್ದ ಆರೋಪಿ.
ಭಕ್ತರು ಹಾಗೂ ಆಡಳಿತ ಮಂಡಳಿಯವರು ದೇವರಿಗೆ ಸಮರ್ಪಿಸಿದ 264 ಗ್ರಾಂ. ತೂಕದ ಚಿನ್ನಾಭರಣಗಳನ್ನು ಅರ್ಚಕ ತೆಗೆದು, ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕಳವಾದ ಚಿನ್ನಾಭರಣದ ಮೌಲ್ಯ 21.12 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಕೆಲ ಚಿನ್ನಾಭರಣಗಳನ್ನು ತೆಗೆದು, ಅದರ ಬದಲು ನಕಲಿ ಚಿನ್ನಾಭರಣಗಳನ್ನು ಇರಿಸಿದ್ದಾರೆ.
ಶನಿವಾರ ನವರಾತ್ರಿ ಹಿನ್ನೆಲೆಯಲ್ಲಿ ಸಮಿತಿಯವರು ದೇವರ ಮೂರ್ತಿ, ಆಭರಣಗಳನ್ನು ಸ್ವಚ್ಚ ಮಾಡಬೇಕು, ತೆಗೆದು ಕೊಡಿ ಎಂದು ಅರ್ಚಕರಿಗೆ ಕೇಳುವಾಗ ಈ ವಿಚಾರ ಬೆಳಕಿಗೆ ಬಂದಿದೆ.
ದೇವಸ್ಥಾನದ ಅರ್ಚಕ ಆರೋಪಿ ನರಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನಷ್ಟು ಮಾಹಿತಿ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಸುದ್ದಿ ತಿಳಿಯುತ್ತಿದ್ದಂತೆ ಶನಿವಾರ ರಾತ್ರಿಯೇ ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು.
ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಮಡಿ ಶಂಕರ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.