Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Team Udayavani, Sep 22, 2024, 12:43 PM IST
ಉಡುಪಿ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಹೇಳಿದರು.
ತಿರುಪತಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಲಡ್ಡು ಪ್ರಸಾದಕ್ಕೆ ದನದ ತುಪ್ಪದ ಬದಲು ಪ್ರಾಣಿ ಜನ್ಯ ಕೊಬ್ಬಿನ ಮಿಶ್ರಣ ಬಳಕೆ ಮಾಡಿರುವ ವಿಚಾರ ಕೇಳಿ ಖೇದವಾಗಿದೆ. ಮೀನಿನ ಎಣ್ಣೆ, ಹಂದಿ ಹಸುವಿನ ಕೊಬ್ಬ ಬಳಸಿ ಪ್ರಸಾದ ತಯಾರಿಸಿರುವುದು ಸಮಾಜಕ್ಕೆ ಭಗವಂತನಿಗೆ ಬಗೆದಿರುವ ಅಪಚಾರ. ಇಂತಹ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು ಖಂಡನೀಯ ಎಂದರು.
ತಿರುಪತಿ ಶ್ರೀನಿವಾಸನನ್ನು ಗೋರಕ್ಷಕ ಎಂದು ಕಾಣುತ್ತೇವೆ. ಅಂತಹ ಶ್ರೀನಿವಾಸ ದೇವರಿಗೆ ಹಸು ಕೊಬ್ಬು ಬಳಸಿದ ಪ್ರಸಾದ ನೀಡಿರುವುದು ಅಪರಾಧ. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಮಾಡಿರುವ ಹಲ್ಲೆ ಇದು. ಹಿಂದೂಗಳು ಉಪಯೋಗ ಅನರ್ಹವಾಗಿರುವ ವಸ್ತುಗಳನ್ನು ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು ಶಿಕ್ಷಿಸಿ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ ಸಾಹಿತ್ಯ ರಂಗದ ಸಾರ್ಥಕ ಸೇವೆ
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.