Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Team Udayavani, Sep 22, 2024, 1:00 PM IST
ನವದೆಹಲಿ: ಇಂದಿನ ಇಂಟರ್ ನೆಟ್ ಯುಗದಲ್ಲಿ ಕ್ಷಣ ಮಾತ್ರದಲ್ಲಿ ಕೆಲವೊಂದು ವಿಚಾರಗಳು – ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲೂ ರೀಲ್ಸ್ ಗಳಂತೂ ಬಹಳ ವೇಗವಾಗಿ ಎಲ್ಲೆಡೆ ಶೇರ್ ಆಗುತ್ತವೆ.
ಅಪಾಯಕಾರಿ ಸಾಹಸದ ರೀಲ್ಸ್ (Reels) ಮಾಡಲು ಹೋಗಿ ಕಾಲು ಕಳೆದುಕೊಂಡವರು, ಪ್ರಾಣವನ್ನೇ ಕಳೆದುಕೊಂಡ ಘಟನೆಗಳನ್ನು ನಾವು ನೋಡಿದ್ದೇವೆ. ಇಂತಹ ಎಷ್ಟೇ ಘಟನೆಗಳು ನಡೆದರೂ ಹುಚ್ಚಾಟದ ರೀಲ್ಸ್ ಮಾಡುವುದನ್ನು ಮಾತ್ರ ಜನ ನಿಲ್ಲಿಸಲ್ಲ. ಇದೇ ರೀತಿಯ ಮತ್ತೊಂದು ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ಮಹಿಳೆಯೊಬ್ಬರು ತೆರೆದ ಬಾವಿ ಮೇಲೆ ಕುಳಿತು, ಹಾಡೊಂದಕ್ಕೆ ಲಿಪ್ ಸಿಂಕ್ ಮಾಡಿ, ರೀಲ್ಸ್ ಮಾಡಿದ್ದಾರೆ. ಆ ಮಹಿಳೆಯ ಕಾಲಿನಲ್ಲಿ ಮಗು ನೇತಾಡಿಕೊಂಡಿದೆ. ಸ್ವಲ್ಪ ಆಚೆ ಇಚೆ ಆದರೂ ಆ ಮಗು ಬಾವಿಗೆ ಬೀಳುವ ಸಾಧ್ಯತೆಯಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಮಹಿಳೆ ಮಗುವನ್ನು ನಿರ್ಲಕ್ಷ್ಯತನ ಮಹಿಳೆ ಹಿಡಿದುಕೊಂಡಿರುವ ಕ್ರಮಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಹಿಳೆ ಮಗುವನ್ನು ಕೊಲ್ಲಲು ಯತ್ನಿಸಿದ್ದಾಳೆ ಎಂದು ʼಎಕ್ಸ್ʼನಲ್ಲಿ ಒಬ್ಬರು ಬರೆದುಕೊಂಡಿದ್ದಾರೆ.
“ಕಾನೂನನ್ನು ದೂಷಿಸಬೇಡಿ. ಇದೊಂದು ಮೆಂಟಲ್ ಕೇಸ್! ರೀಲ್ಸ್ ಗಳು ಮಾನವನ ಮೆದುಳನ್ನು ನಾಶಪಡಿಸುತ್ತಿವೆ. ಇಂತಹ ಸನ್ನಿವೇಶಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.
Family court in custody case: Only mother can love child more. Even more than father.
Le mother:#ParentalAlienation pic.twitter.com/mc1kl5ziFj— Raw and Real Man (@RawAndRealMan) September 18, 2024
ಇಂಥ ಮಹಿಳೆಯ ಮೇಲೆ ಕಾನೂನು ಕ್ರಮ ಆಗಬೇಕೆಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ.
ಸದ್ಯ ವಿಡಿಯೋ ವೈರಲ್ ಆಗಿದ್ದು, ಇದು ಎಲ್ಲಿ ನಡೆದಿದೆ. ಯಾವಾಗ ಆಗಿದ್ದು, ಹಾಗೂ ಮಹಿಳೆಯ ಜತೆಗಿರುವ ಈ ಮಗು ಆಕೆಯ ಮಗುವೇ ಅಥವಾ ಬೇರೆಯವರದ್ದೇ ಎನ್ನುವುದರ ಬಗ್ಗೆ ಯಾವ ಮಾಹಿತಿಯೂ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.