Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Team Udayavani, Sep 22, 2024, 2:04 PM IST
ಕೊಪ್ಪಳ: ರಾಜ್ಯಪಾಲರು ಅರ್ಕಾವತಿ ವರದಿ ಕೇಳಿದ ವಿಚಾರಕ್ಕೆ ಸಂಬಂಧಿಸಿ ಬರೆದಿರುವ ಪತ್ರವನ್ನು ನಾನಿನ್ನು ಗಮನಿಸಿಲ್ಲ. ಅರ್ಕಾವತಿ ಬಡಾವಣೆ ಬಗ್ಗೆ ವರದಿ ಕೇಳಿರುವ ವಿಚಾರ ಪತ್ರಿಕೆಯಲ್ಲಿ ಓದಿರುವೆ. ಆರ್ಕಾವತಿ ಬಡಾವಣೆ ವಿಚಾರದಲ್ಲಿ ರಿಡೂ ಅಂತ ಹೇಳಿದ್ದು ನಾನಲ್ಲ, ಸುಪ್ರೀಂ ಕೋರ್ಟ್ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ
ಕೊಪ್ಪಳ ತಾಲೂಕಿನ ಗಿಣಗೇರಾ ವಿಮಾನ ನಿಲ್ದಾಣ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿಯಿಂದಲೇ ಪತ್ರಗಳ ಸೊರಿಕೆಯಾಗಿರಬಹುದು. ಪತ್ರಗಳು ಸೋರಿಕೆಯಾಗಿದ್ದರೇ ತನಿಖೆಯಾಗಲಿ ಎಂದರು.
ಶಾಸಕ ಮುನಿರತ್ನ ವಿರುದ್ಧ ಎಸ್ ಐಟಿ ತನಿಖೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಮುನಿರತ್ನನಿಗೆ ಅಪರಾಧ ಮಾಡು ಅಂತ ನಾವು ಹೇಳಿದ್ವಾ ? ಮುನಿರತ್ನ ಮೇಲೆ ಮೂರು ಪ್ರಕರಣ ದಾಖಲಾಗಿವೆ. ನಾವು ಕ್ರಮ ಕೈಗೊಳ್ಳೋದು ಬಿಡಬೇಕಾ? ಎಂದು ಪ್ರಶ್ನಿಸಿದರು.
ನಾವು ಯಾರ ವಿರುದ್ದವೂ ದ್ವೇಷೇದ ರಾಜಕಾರಣ ಮಾಡುತ್ತಿಲ್ಲ. ಮುನಿರತ್ನ ವಿಚಾರದಲ್ಲಿ ಅವರ ಆಪ್ತರಿಗೆ ಬೆದರಿಕೆ ಹಾಕಿದೆ ಎನ್ನುವುದು ಸುಳ್ಳು, ನಾವು ಅಂಥ ಕೆಲಸ ಮಾಡಲ್ಲ ಎಂದರು.
ತುಂಗಭದ್ರಾ ಡ್ಯಾಂ ಗೇಟ್ ಮುರಿದಾಗ ಗೇಟ್ ರಿಪೇರಿಯಾಗಿ ಮತ್ತೆ ಡ್ಯಾಂ ತುಂಬುತ್ತದೆ ಎಂದಿದ್ದೆ, ಮಳೆಯ ಕೃಪೆಯಿಂದ ಮತ್ತೆ ಜಲಾಶಯ ತುಂಬಿದೆ. ಮುಂಗಾರಿನ ಬೆಳೆಗೆ ನೀರು ದೊರೆಯುತ್ತದೆ. ಹಿಂಗಾರು ಬೆಳೆಗೂ ನೀರು ಲಭಿಸುವ ಭರವಸೆಯಿದೆ. ಕನ್ನಯ್ಯ ನಾಯ್ಡು ಹಾಗೂ ಅಧಿಕಾರಿಗಳ ತಂಡ ತುಂಬಾ ಕಾಳಜಿ ವಹಿಸಿ ಗೇಟ್ ದುರಸ್ಥಿ ಮಾಡಿದೆ. ಹಿಂದುಸ್ಥಾನ್ ಇಂಜಿನಿಯರಿಂಗ್ ಸೇರಿ ಮೂರು ಸಂಸ್ಥೆಗಳ ಸಹಾಯದಿಂದ ಗೇಟ್ ದುರಸ್ಥಿ ಕಾರ್ಯ ಯಶಸ್ವಿಯಾಯಿತು. ಇದರಿಂದಾಗಿ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಗೇಟ್ ಮುರಿದಾಗ ರೈತರಿಗೆ ತುಂಬಾ ಆತಂಕವಿತ್ತು. ಡ್ಯಾಂ ನಿಂದ 20 ಟಿಎಂಸಿಗೂ ಹೆಚ್ಚಿನ ನೀರು ಹರಿದು ಹೋಗಿತ್ತು. ಇದು ರೈತರಲ್ಲಿ ಆತಂಕ ಮೂಡಿಸಿತ್ತು. ಮತ್ತೆ ಮಳೆ ಬಂದು ತುಂಗಭದ್ರೆ ತುಂಬಿದ್ದರಿಂದ ರೈತರಲ್ಲಿ ಸಂತಸ ತಂದಿದೆ. ಮಳೆರಾಯನಿಗೆ ಸರಕಾರದ ಪರವಾಗಿ ಧನ್ಯವಾದ ಹೇಳುವೆ ಎಂದರು.
ಎಲ್ಲ ಕ್ರಸ್ಟ್ ಗೇಟ್ ಗಳನ್ನು ಬದಲಿಸುವ ವಿಚಾರ, ತುಂಗಭದ್ರಾ ಜಲಾಶಯ ನಿರ್ಮಾಣವಾಗಿ 70 ವರ್ಷ ಕಳೆದಿದೆ. 50 ವರ್ಷ ಯಾವುದೇ ಗೇಟ್ ಗಳಿಗೆ ಹಾನಿಯಾಗಿರಲಿಲ್ಲ. ಆದರೆ, ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿ ಈಚೆಗೆ ಗೇಟ್ ಮುರಿದಿತ್ತು. ಗೇಟ್ ಬದಲಾಗಣೆ ವಿಚಾರದಲ್ಲಿ ಎಕ್ಸ್ ಫರ್ಟ್ ಕಮಿಟಿ ನೀಡಿದ ವರದಿ ಅನುಸಾರ ಕ್ರಮ ವಹಿಸಲಾಗುವುದು ಎಂದರು.
ಕೊಪ್ಪಳ ಜಿಲ್ಲೆಯ ರಸ್ತೆಗಳು ಹಾನಿಯಾದ ವಿಚಾರ, ಈ ಹಿಂದೆ ಬಿಜೆಪಿ, ಸಮ್ಮಿಶ್ರ ಸರಕಾರದಲ್ಲಿ ರಸ್ತೆಗಳಾಗಿದ್ದವು. ಈಗ ಮಳೆಯಾಗಿ ಅವು ದುರಸ್ತಿಗೊಂಡಿವೆ. ಅವುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಕಲ್ಯಾಣ ಕರ್ನಾಟಕ ಸಚಿವ ಸಂಪುಟದಲ್ಲಿ 56 ವಿಷಯಗಳ ಕುರಿತು ಚರ್ಚೆ ಮಾಡಿದ್ದೇವೆ. ಇದರಲ್ಲಿ 46 ಕಲ್ಯಾಣ ಕರ್ನಾಟಕದ್ದಾಗಿವೆ.
ಹಾಲಿನ ದರ ಹೆಚ್ಚಳದ ವಿಚಾರ, ಮಾಗಡಿಗೆ ತೆರಳಿದ ವೇಳೆ, ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹಾಲಿನ ಪ್ರೋತ್ಸಾಹ ಧನ ಕಡಿಮೆಯಿದೆ ಎಂದು ಮನವಿ ಮಾಡಿದ್ದರು. ಅವರ ಬೇಡಿಕೆಯಂತೆ ಹಾಲಿನ ದರ ಹೆಚ್ಚಳ ಮಾಡಿ, ಬರುವ ಆದಾಯವನ್ನು ರೈತರಿಗೆ ಕೊಡೊಣ ಎಂದಿರುವೆ. ಈ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿದರೆ ಆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ ರಾಷ್ಟ್ರ ಪ್ರಶಸ್ತಿ ಗರಿ
Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ
Health: ಆಹಾರ ಚೆನ್ನಾಗಿ ಜಗಿದು ನುಂಗಿ ನೆತ್ತಿಗೆ ಹತ್ತದಿರಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.