Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್
ವೈಎಸ್ಆರ್ಸಿಪಿ ಆಡಳಿತದಲ್ಲಿ 219 ದೇವಸ್ಥಾನಗಳ ಧ್ವಂಸ.. ಮಸೀದಿ, ಚರ್ಚ್ ಗಳಲ್ಲಿ ಆಗಿದ್ದರೆ?
Team Udayavani, Sep 22, 2024, 4:00 PM IST
ಗುಂಟೂರು: ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದ ಅಪವಿತ್ರ ಗೊಂಡಿರುವ ಪ್ರಾಯಶ್ಚಿತ ಎಂಬಂತೆ ನಾನು ಈ 11 ದಿನಗಳ ಉಪವಾಸ ಕೈಗೊಂಡು ವೆಂಕಟೇಶ್ವರನ ಕ್ಷಮೆ ಕೇಳುತ್ತೇನೆ” ಎಂದು ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್ ಕಲ್ಯಾಣ್ ಭಾನುವಾರ(ಸೆ22) ಹೇಳಿಕೆ ನೀಡಿದ್ದಾರೆ.
”ಹಿಂದೂ ದೇವಾಲಯಗಳನ್ನು ಅಪವಿತ್ರಗೊಳಿಸಿದಾಗ ನಾವು ಮೌನವಾಗಿರಬಾರದು.ಇದು ಮಸೀದಿ ಅಥವಾ ಚರ್ಚ್ಗಳಲ್ಲಿ ಸಂಭವಿಸಿದ್ದರೆ, ರಾಷ್ಟ್ರದಲ್ಲಿ ಪರಿಸ್ಥಿತಿ ಸ್ಫೋಟಗೊಳ್ಳುತ್ತಿತ್ತು” ಎಂದು ಡಿಸಿಎಂ ಪವನ್ ಕಲ್ಯಾಣ್ ಕಿಡಿ ಕಾರಿದ್ದಾರೆ.
”ವೈಎಸ್ಆರ್ಸಿಪಿ ಆಡಳಿತದಲ್ಲಿ 219 ದೇವಸ್ಥಾನಗಳನ್ನು ಧ್ವಂಸಗೊಳಿಸಲಾಗಿತ್ತು, ಈ ದೇವಾಲಯಗಳನ್ನು ನಾಶಪಡಿಸಿದ್ದನ್ನು ನಾನು ಪ್ರಶ್ನಿಸಿತ್ತಿದ್ದು ಇದನ್ನು ಸಹಿಸುವುದಿಲ್ಲ, ಕಠಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
”ಕಳೆದ ಐದು ವರ್ಷಗಳಲ್ಲಿ ಟಿಟಿಡಿ ಮಂಡಳಿ ಏನು ಮಾಡಿದೆ ಎಂದು ಹಿಂದೂ ಭಕ್ತರು ಧ್ವನಿ ಎತ್ತಬೇಕು.ಒಂದು ಕಾಲದಲ್ಲಿ ಪವಿತ್ರವಾಗಿದ್ದುದು ಈಗ ಅಪವಿತ್ರಗೊಂಡಿದೆ. ತಪ್ಪಿತಸ್ಥರು ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.