TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
ಕ್ರೆಸ್ಟ್ ಗೇಟ್ ಕಿತ್ತು ಹೋದ ವೇಳೆ ಬಾಗಿನ ಕೊಡಲು ಬರುತ್ತೇನೆ ಎಂದಿದ್ದರು
Team Udayavani, Sep 22, 2024, 5:01 PM IST
ಕೊಪ್ಪಳ: ಮೈತುಂಬಿಕೊಂಡಿರುವ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ(ಸೆ22) ಬಾಗಿನ ಅರ್ಪಿಸಿದರು.
ಡ್ಯಾಂನ 19ನೇ ಕ್ರೆಸ್ಟ್ ಗೇಟ್ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಮಿಸಿದ್ದ ವೇಳೆ ಡ್ಯಾಂ ಮತ್ತೆ ಭರ್ತಿಯಾಗಲಿದೆ. ಆಗ ನಾನೇ ಬಾಗಿನ ಅರ್ಪಣೆ ಮಾಡಲು ಬರುವೆ ಎಂದು ಸಿಎಂ ಹೇಳಿದ್ದರು. ಅದರಂತೆ ಮತ್ತೆ ತುಂಗಭದ್ರಾ ಡ್ಯಾಂ ಭರ್ತಿಯಾಗಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ”ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗಿದ್ದು, ಅಣೆಕಟ್ಟೆಯಲ್ಲಿ 101.77 ಟಿಎಂಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಚಳಿಗಾಲದ ಬಿತ್ತನೆಗೆ ನೀರು ಲಭ್ಯವಾಗಲಿದೆ.ತಜ್ಞರ ವರದಿಯಂತೆ ತುಂಗಭದ್ರಾ ನದಿಯ ಪಂಪಾಸಾಗರ ಅಣೆಕಟ್ಟಿನ ಕ್ರೆಸ್ಟ್ ಗೇಟ್ಗಳ ನಿರ್ವಹಣೆಯನ್ನು ಕೈಗೊಳ್ಳಲಾಗುವುದು.50 ವರ್ಷಗಳ ನಂತರ ಅಣೆಕಟ್ಟಿನ ಗೇಟ್ಗಳನ್ನು ಬದಲಾಯಿಸಬೇಕು ಆದಾಗ್ಯೂ, ಗೇಟ್ಗಳು 70 ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದರು.
”ಬೆಳೆಗಳಿಗೆ ನೀರು ಸಿಗುತ್ತದೋ ಇಲ್ಲವೋ ಎಂಬ ಆತಂಕ ರೈತರನ್ನು ಕಾಡುತ್ತಿತ್ತು., ಅಣೆಕಟ್ಟು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ತುಂಬಿದ್ದು ಈಗ ಯಾವುದೇ ಸಮಸ್ಯೆ ಇಲ್ಲ.ಎರಡನೇ ಬೆಳೆಗೂ ನೀರು ಕೊಡಲು ಪ್ರಯತ್ನಿಸಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು.
ಈ ವೇಳೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರಾದ ಬೋಸರಾಜು, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್ಗೆ ಜಿಪಿಎಸ್ ಕಣ್ಗಾವಲು!
Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ
PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ
Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!
Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ
Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
Udupi: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.