Shirva: ಬಂಟಕಲ್‌ ತಾಂತ್ರಿಕ ಕಾಲೇಜು ಪದವಿ ಪ್ರದಾನ ಕಾರ್ಯಕ್ರಮ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ - ಲಕ್ಷ್ಮೀ ಪತಿ ಭಟ್‌

Team Udayavani, Sep 22, 2024, 5:55 PM IST

16

ಶಿರ್ವ:  ಜೀವನದಲ್ಲಿ ಉತ್ತಮ ಯೋಜನೆ ಇದ್ದರೆ ಸಾಲದು ಅದರ ಜತೆಗೆ ಯೋಜನೆಯನ್ನು ಕಾರ್ಯಗತಗೊಳಿಸಲು ಬೇಕಾದ ಕಾರ್ಯಕ್ಷಮತೆ ಹೊಂದಿರಬೇಕು. ಪದವೀಧರರು ತಮ್ಮ ಜೀವನದಲ್ಲಿ ಭಕ್ತಿ, ಪ್ರಾಮಾಣಿಕತೆ, ಹೊಂದಾಣಿಕೆ, ಸ್ಥಿತಿಸ್ಥಾಪಕತ್ವ ಮತ್ತು ಪಾಂಡಿತ್ಯ ಮುಂತಾದ ತತ್ವಗಳೊಂದಿಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ ಎಂದು ರೋಬೋಸಾಫ್ಟ್‌ ಟೆಕ್ನಾಲಜೀಸ್‌ನ ಗ್ಲೋಬಲ್‌ ಮಾರ್ಕೆಟಿಂಗ್‌ ಮತ್ತು ಕಮ್ಯುನಿಕೇಷನ್ಸ್‌ ನ ಉಪಾಧ್ಯಕ್ಷ ಲಕ್ಷ್ಮೀ ಪತಿ ಭಟ್‌ ಹೇಳಿದರು.

ಅವರು ಸೆ. 22 ರಂದು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ 11ನೇ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಪದವಿ ಪ್ರದಾನ ಮಾಡಿ ಮಾತನಾಡಿದರು.

ವಿಶ್ವೇಶ್ವರ ತಾಂತ್ರಿಕ ವಿ.ವಿ.ಯಿಂದ ಚಿನ್ನದ ಪದಕ ಪಡೆದ ರಕ್ಷಾ ಮತ್ತು ವಿ.ವಿ.ಯ ಬಿ.ಇ ಹಾನರ್ ಪಡೆದ ಶೇಖ್‌ ಮೊಹಮ್ಮದ್‌ ಶುಹೂದ್‌ ಅವರನ್ನು ಸಮ್ಮಾನಿಸಲಾಯಿತು. ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಜಿ. ಅಕ್ಷತಾ, ಗಣಕಯಂತ್ರ ವಿಭಾಗದ ಶೇಖ್‌ ಮೊಹಮ್ಮದ್‌ ಶುಹೂದ್‌, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ನಿಖಿತಾ ಶೆಟ್ಟಿ ಮತ್ತು ಮೆಕ್ಯಾನಿಕಲ್‌ ವಿಭಾಗದ ಅಂಕಿತ್‌ ಸುವರ್ಣ ಅವರ ಶೈಕ್ಷಣಿಕ ಸಾಧನೆಗಾಗಿ ಮಂಗಳೂರಿನ ಎಸ್‌. ಎಲ್‌. ಶೇಟ್‌ ಜ್ಯುವೆಲರ್‌ ಪ್ರಾಯೋಜಿತ ಚಿನ್ನದ ಪದಕಗಳನ್ನು ನೀಡಿ ಗೌರವಿಸಲಾಯಿತು. ಅಕಾಡೆಮಿಕ್‌ ಡೀನ್‌ ಡಾ| ನಾಗರಾಜ ಭಟ್‌ಚಿನ್ನದ ಪದಕ ಗಳಿಸಿದವರ ಹೆಸರು ಮತ್ತು ವಿಭಾಗ ಮುಖ್ಯಸ್ಥರು ಪದವೀಧರರ ಪಟ್ಟಿ ವಾಚಿಸಿದರು.

ಕಾಲೇಜಿನ ಸಂಶೋಧನಾ ಕೇಂದ್ರದಿಂದ ಡಾಕ್ಟರೇಟ್‌ ಪದವಿ ಪಡೆದ ಪ್ರಾಧ್ಯಾಪಕರನ್ನು ಸಮ್ಮಾನಿಸಲಾಯಿತು. ಅಂತಿಮ ವರ್ಷದ ಪ್ರತಿ ವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದ ನಾಲ್ಕು ವಿದ್ಯಾರ್ಥಿಗಳಿಗೆ ನಂದನ್‌ ಕುಮಾರ್‌ ಇನ್ನಂಜೆ ಪ್ರಾಯೋಜಿತ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಬೆಂಗಳೂರು ಸರಕಾರಿ ಪ್ರಥಮ ದರ್ಜೆಕಾಲೇಜಿನ ಇಂಗ್ಲೀಷ್‌ ಪ್ರಾಧ್ಯಾಪಕ ಡಾ|ಎಲ್‌.ಎನ್‌. ಶೇಷಗಿರಿ ಮಾತನಾಡಿ ವ್ಯಕ್ತಿಯ ಹುಟ್ಟಿನಿಂದ ಪದವಿಯವರೆಗಿನ ಕಲಿಕೆಯು, ಜೀವನದ ಉದ್ದೇಶವನ್ನು ತಿಳಿದುಕೊಳ್ಳಲು ಮತ್ತು ಸಾಧಿಸಲು ಸಾಧ್ಯವಾಗುತ್ತದೆ. ಪದವೀಧರರು ಸಮಾಜದ ಮಾನವೀಯ ಮೌಲ್ಯಗಳ ಅಗತ್ಯತೆಯನ್ನು ಅರಿತು ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಸೋದೆ ವಾದಿರಾಜ ಮಠದ ಶ್ರೀಶ್ವವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಜೀವನದಲ್ಲಿ ಏನಾದರೂ ಸಾಧಿಸುವ ಗುರಿಯೊಂದಿಗೆ ಆಸಕ್ತಿಯ ವಿಷಯಗಳಲ್ಲಿ ಏಕಾಗ್ರತೆಯಿರಿಸಿಕೊಂಡು ಮಾಡುವ ಕೆಲಸದಲ್ಲಿ ನಂಬಿಕೆ, ಶ್ರದ್ಧೆ , ವಿಶ್ವಾಸವಿರಿಸಿಕೊಂಡಲ್ಲಿ ಬದುಕು ಉಜ್ವಲವಾಗುತ್ತದೆ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್‌ ಶುಭ ಹಾರೈಸಿದರು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಶ್ರೀನಿವಾಸ ತಂತ್ರಿ, ಡೀನ್‌ ಡಾ| ಸುದರ್ಶನ್‌ ರಾವ್‌ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿದ್ದರು.

ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ|ಲೊಲಿಟಾ ಪ್ರಿಯಾ ಕ್ಯಾಸ್ತಲಿನೊ ಮತ್ತು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ   ಡಾ| ಸುಬ್ಬು ಲಕ್ಷ್ಮೀ  ಎನ್‌. ಕಾರಂತ್‌ ಅತಿಥಿ ಪರಿಚಯ ಮಾಡಿದರು. ಉಪಪ್ರಾಂಶುಪಾಲ ಡಾ|ಗಣೇಶ್‌ ಐತಾಳ್‌ ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ ಸ್ವಾಗತಿಸಿದರು. ಅಕ್ಷತಾ ರಾವ್‌ ಮತ್ತು ಅನಂತ್‌ ಮೋಹನ್‌ ಮಲ್ಯ ಕಾರ್ಯಕ್ರಮ ನಿರೂಪಿಸಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ|ರವೀಂದ್ರ ಹೆಚ್‌. ಜೆ ವಂದಿಸಿದರು.

ಟಾಪ್ ನ್ಯೂಸ್

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

dw

Katkeri: ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.