Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ
ಕಾರ್ಯಕರ್ತರ ಬಳಿ ಚರ್ಚಿಸಿ ಮುಂದಿನ ನಿರ್ಣಯ
Team Udayavani, Sep 22, 2024, 10:45 PM IST
ವಿಜಯಪುರ: ರಾಜ್ಯದಲ್ಲಿ ಲಿಂಗಾಯತರು, ಹಿಂದುಳಿದವರು, ದಲಿತರು ಹಾಗೂ ಬ್ರಾಹ್ಮಣರಿಗೂ ಸೇರಿದಂತೆ ಅನ್ಯಯವಾಗುವುದನ್ನು ತಡೆಯಲು “ರಾಯಣ್ಣ ಚನ್ನಮ್ಮ ಬ್ರಿಗೇಡ್’ (ಆರ್ಸಿಬಿ) ಸ್ಥಾಪನೆ ಸಂಬಂಧ ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಈ ಬ್ರಿಗೇಡ್ ಮಾಡುವ ಬಗ್ಗೆ ಕೂಡಲಸಂಗಮ ಸ್ವಾಮೀಜಿ ಹೇಳಿಕೆ ವಿಚಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಲಾಗುತ್ತದೆ. ಬೇರೆ ಸ್ವಾಮೀಜಿಗಳು ಕೂಡ ಬ್ರಿಗೇಡ್ ಬೇಕು ಎಂದಿದ್ದಾರೆ. ಕಾರ್ಯಕರ್ತರ ಬಳಿ ಚರ್ಚಿಸಿದ ನಂತರ ಮುಂದಿನ ನಿರ್ಣಯ ಮಾಡುತ್ತೇವೆ ಎಂದರು.
ಬಿಜೆಪಿ ಬಿಡಲ್ಲ: ಭಾರತೀಯ ಜನತಾ ಪಾರ್ಟಿ ನನ್ನ ತಾಯಿ ಇದ್ದಂತೆ. ಆದರೆ, ಅಲ್ಲಿನ ಅವ್ಯವಸ್ಥೆಯಿಂದ ನಾನು ಪಕ್ಷ ಬಿಟ್ಟಿದ್ದೇನೆ. ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಹೆಚ್ಚಾಗುತ್ತಿದೆ. ಆ ತಾಯಿಯನ್ನು ಬಿಟ್ಟು ನಾನು ಬೇರೆ ಯಾವ ಪಕ್ಷಕ್ಕೂ ಹೋಗಲ್ಲ. ಪಕ್ಷದಲ್ಲಿ ಶುದ್ಧೀಕರಣವಾಗಲಿ ಎಂಬ ಕಾರಣಕ್ಕೆ ಪಕ್ಷದಿಂದ ದೂರ ಇದ್ದೇನೆ ಎಂದರು.
ರಾಜ್ಯ ಬಿಜೆಪಿ ಘಟಕದ ಅವ್ಯವಸ್ಥೆ ಬಗ್ಗೆ ಇವತ್ತಲ್ಲ, ನಾಳೆ ಹೈಕಮಾಂಡ್ನವರು ಚಿಂತಿಸಿ ಮಾತನಾಡುವ ನಂಬಿಕೆ ಇದೆ. ಪಕ್ಷದಲ್ಲಿ ಹಿಂದೂತ್ವ ಪಕ್ಕಕ್ಕೆ ಹೋಗಿದೆ. ಜಾತಿ, ಉಪಜಾತಿಗೆ ಬೆಂಬಲ ಸಿಗುತ್ತಿದೆ. ಪಕ್ಷ ಶುದ್ಧೀಕರಣವಾಗಬೇಕು. ಆಗ ನಾನು ಕೂಡಾ ಬಿಜೆಪಿಗೆ ಸೇರುವ ವಿಚಾರವಾಗಿ ತೀರ್ಮಾನ ಮಾಡುವೆ. ಹಿರಿಯ ಶಾಸಕ ಬಸವಗೌಡ ಪಾಟೀಲ ಯತ್ನಾಳ ಹಿಂದೂತ್ವದ ಹುಲಿ. ನನ್ನನ್ನು ಬಿಜೆಪಿಗೆ ಕರೆತಂದು ಸಿಎಂ ಮಾಡುತ್ತೇವೆ ಎಂಬ ಅವರ ಪ್ರೀತಿ-ಮಾತಿಗೆ ಅಭಿನಂದಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.