Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!
ಗೋ ಧ್ವಜ ಸ್ಥಾಪನಾ ಭಾರತ ಯಾತ್ರೆ.. ಅಯೋಧ್ಯೆಯಲ್ಲಿದ್ದರೂ ರಾಮ ಮಂದಿರಕ್ಕೆ ತೆರಳದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ
Team Udayavani, Sep 22, 2024, 8:55 PM IST
ಅಯೋಧ್ಯೆ: ”ಭಾಗಶಃ ನಿರ್ಮಿಸಿದ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ” ಎಂದು ಉತ್ತರಾಖಂಡದ ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಭಾನುವಾರ(ಸೆ22) ಪ್ರತಿಪಾದಿಸಿದ್ದಾರೆ.
ಅಯೋಧ್ಯೆಯಲ್ಲಿದ್ದರೂ ರಾಮ ಮಂದಿರಕ್ಕೆ ಏಕೆ ತೆರಳಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ”ಭಾಗಶಃ ನಿರ್ಮಿಸಲಾದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ. ಇದು ಅಪೂರ್ಣವಾಗಿದೆ. ರಾಮ ಮಂದಿರದ ಶಿಖರ(ಮೇಲ್ಭಾಗ) ಸಂಪೂರ್ಣವಾಗಿ ನಿರ್ಮಾಣವಾದ ಬಳಿಕ ಮಾತ್ರ ತಾನು ತೆರಳಿ ಪೂಜೆ ಸಲ್ಲಿಸುತ್ತೇನೆ” ಎಂದರು.
ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಭಾನುವಾರ(ಸೆ22) ಅಯೋಧ್ಯೆಯಿಂದ ರಾಷ್ಟ್ರವ್ಯಾಪಿ “ಗೋ ಧ್ವಜ ಸ್ಥಾಪನಾ ಭಾರತ ಯಾತ್ರೆ”ಯನ್ನು ಪ್ರಾರಂಭಿಸಿದ್ದಾರೆ. ಗೋವುಗಳರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಂವಿಧಾನಾತ್ಮಕ ನಿಬಂಧನೆಗಳನ್ನು ಮತ್ತು ಕಾನೂನುಗಳನ್ನು ಜಾರಿಗೊಳಿಸಲು ಸಮಾವೇಶದಲ್ಲಿ ಕರೆ ನೀಡಿದರು.
“ನಮ್ಮ ದೇಶದಲ್ಲಿ ಗೋವನ್ನು ಗೋ ಮಾತೆ ಎಂದು ಪೂಜಿಸಲಾಗುತ್ತದೆ. ಆದಾಗ್ಯೂ, ಗೋವನ್ನು ಪೂಜಿಸುವ ದೇಶವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಗೋಮಾಂಸ ರಫ್ತುದಾರನಾಗಿರುವುದು ದುರದೃಷ್ಟಕರ. ನಮ್ಮ ಯಾತ್ರೆಯು ದೇಶದ ವಿವಿಧ ಪ್ರದೇಶಗಳಲ್ಲಿ ಸಂಚರಿಸಲಿದ್ದು, ಪ್ರಮುಖ ಮಹಂತರು ಮತ್ತು ಜನಸಾಮಾನ್ಯರು ನಮ್ಮೊಂದಿಗೆ ಸೇರುತ್ತಾರೆ ಎಂದು ಗೋಹತ್ಯೆ ನಿಷೇಧಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.
ಇದೆ ವೇಳೆ ಚಿನೇಶ್ವರನಾಥ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸೇವೆಯನ್ನು ನಡೆಸಿದರು ಮತ್ತು ಅಯೋಧ್ಯೆಯ ರಾಮಕೋಟ್ ಪ್ರದೇಶದ ಉದ್ದಕ್ಕೂ ರಾಮ ಜನ್ಮಭೂಮಿ ಸಂಕೀರ್ಣದ ಪ್ರದಕ್ಷಿಣೆಯನ್ನು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Shiruru Landslide Tragedy: ಟ್ಯಾಂಕರ್ ಎಂಜಿನ್, ಸ್ಕೂಟಿ ಪತ್ತೆ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
Badminton; ಅನ್ಮೋಲ್ ಖರಬ್ಗೆ ಬ್ಯಾಡ್ಮಿಂಟನ್ ಪ್ರಶಸ್ತಿ
Duleep Trophy:ಇಂಡಿಯಾ ಎ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.