Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…
Team Udayavani, Sep 23, 2024, 10:54 AM IST
ಜಬಲ್ಪುರ: ಜಬಲ್ಪುರ – ಮುಂಬೈ ಗರೀಬ್ ರಥದ ಎಸಿ ಕೋಚ್ನಲ್ಲಿ ಹಾವೊಂದು ಟಿಕೆಟ್ ಇಲ್ಲದೆ ಪ್ರಯಾಣಿಸಿದೆ ಇದರಿಂದ ಎಸಿ ಕೋಚ್ನಲ್ಲಿ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು.
ಭಾನುವಾರ (ಸೆ.22) ದಂಡು ಈ ಘಟನೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದೆ.
ಜಬಲ್ಪುರದಿಂದ ಮುಂಬೈಗೆ ಹೊರಟಿದ್ದ ಗರೀಬ್ ರಥ ಎಕ್ಸ್ಪ್ರೆಸ್ ರೈಲು ಜಬಲ್ಪುರದಿಂದ ಹೊರಟು ಭೂಸಾವಲ್ ಮತ್ತು ಕಾಸರ ನಿಲ್ದಾಣದ ನಡುವೆ ತಲುಪಿದಾಗ ರೈಲಿನ ಎಸಿ ಕೋಚ್ನಲ್ಲಿ ಸುಮಾರುಐದು ಅಡಿ ಉದ್ದದ ಹಾವು ನೇತಾಡುತ್ತಿರುವುದು ಕಂಡುಬಂದಿದೆ. ಹಾವನ್ನು ಗಮನಿಸಿದ ಪ್ರಯಾಣಿಕರೊಬ್ಬರು ಇತರ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕೆಲ ಹೊತ್ತು ಪ್ರಯಾಣಿಕರು ಗೊಂದಲಕ್ಕೆ ಒಳಗಾಗಿದ್ದಾರೆ. ಬಳಿಕ ವಿಚಾರವನ್ನು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು, ಕೂಡಲೇ ರೈಲನ್ನು ನಿಲ್ಲಿಸಿದ ಅಧಿಕಾರಿಗಳು ಎಸಿ ಕೋಚ್ ಬಳಿ ದೌಡಾಯಿಸಿ ಪ್ರಯಾಣಿಕರನ್ನು ಸಮಾಧಾನ ಪಡಿಸಿದ್ದಾರೆ. ಬಳಿಕ ಅಧಿಕಾರಿಗಳ ತಂಡ ಹಾವಿನ ಕಾರ್ಯಾಚರಣೆಗೆ ಇಳಿದಿದ್ದಾರೆ ಆದರೆ ಹಾವು ಮಾತ್ರ ಎಲ್ಲೂ ಪತ್ತೆಯಾಗಿಲ್ಲ ಇದಾದ ಬಳಿಕ ಅಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಇನ್ನೊಂದು ಕೋಚ್ ಗೆ ಸ್ಥಳಾಂತರಿಸಿ ಬಳಿಕ ರೈಲು ಪ್ರಯಾಣ ಬೆಳೆಸಿತು.
Panic was created after a venomous snake emerged in the Garib Rath Express train going from Jabalpur to Mumbai – #WATCH#ViralVideo #Viral #Snake #SnakeInTrain pic.twitter.com/zRKbPh51yq
— TIMES NOW (@TimesNow) September 23, 2024
ಈ ಕುರಿತು ಮಾಹಿತಿ ನೀಡಿದ ಪಶ್ಚಿಮ ಮಧ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಷಿತ್ ಶ್ರೀವಾಸ್ತವ್ ಘಟನೆಯನ್ನು ಗಮನಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಮತ್ತು ರೈಲ್ವೆ ಇಂತಹ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!
Marriage;ನವೆಂಬರ್-ಡಿಸೆಂಬರ್ನಲ್ಲಿ ದೇಶದಲ್ಲಿ 35 ಲಕ್ಷ ಮದುವೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ
ಪ್ಯಾಸೆಂಜರ್ ರೈಲು ಓಡಾಟ ಎಂದು? ರೈಲ್ವೆ ಹೋರಾಟಗಾರರಿಗೆ ಬೇಸರ…
Multi-level ಕಾರ್ ಪಾರ್ಕಿಂಗ್ ಮತ್ತೆ ಸಾಕಾರದ ಆಶಾಭಾವ!
Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.