Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ
Team Udayavani, Sep 23, 2024, 11:45 AM IST
ಮಾಗಡಿ: ಪಟ್ಟಣದ ಸರಸ್ವತಿ ವಿದ್ಯಾಮಂದಿರದ ಹಳೆ ಶಾಲೆಯ ಪಕ್ಕದ ಮನೆಯಲ್ಲಿ ವಾಸವಿ ದೇವಾಲಯದ ಖಜಾಂಚಿಯೂ ಆಗಿರುವ ವೇಣುಗೋಪಾಲ್ ಅವರ ಮನೆಗೆ ಕಳ್ಳರು ಕನ್ನ ಹಾಕಿದ್ದು ದೇವಸ್ಥಾನಕ್ಕೆ ಸಂಬಂಧಪಟ್ಟ ಚಿನ್ನಾಭರಣ ಸೇರಿದಂತೆ ಒಟ್ಟು ನಾಲ್ಕು ಕೆಜಿ ಚಿನ್ನ ಕಳ್ಳತನವಾಗಿರುವ ಕುರಿತು ವರದಿಯಾಗಿದೆ.
ವೇಣುಗೋಪಲ್ ಅವರು ಭಾನುವಾರ (ಸೆ. 22) ಸಂಜೆ 6:30ರ ಹೊತ್ತಿಗೆ ಆರ್ಯವೈಶ್ಯ ಸಮಾಜದ ಕಾರ್ಯಕ್ರಮಕ್ಕಾಗಿ ಕುಟುಂಬ ಸಮೇತರಾಗಿ ಚನ್ನಪಟ್ಟಣಕ್ಕೆ ತೆರಳಿದ್ದರು ನಂತರ ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ಬಂದು ನೋಡಿದಾಗ ಕಳ್ಳತವಾಗಿರುವುದು ಬೆಳಕಿಗೆ ಬಂದಿದೆ.
ಸ್ಥಳೀಯರು ನೀಡುವ ಮಾಹಿತಿಯಂತೆ ಭಾನುವಾರ ರಾತ್ರಿ 9:30ರ ಸಮಯದಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ. ವೇಣುಗೋಪಾಲ್ ಅವರ ಮನೆಯಲ್ಲಿ ವಾಸವಿ ದೇವಾಲಯದ ಚಿನ್ನಾಭರಣ ಸೇರಿದಂತೆ ಸುಮಾರು 4 ಕೆಜಿ ಚಿನ್ನಾಭರಣ ದೋಚಲಾಗಿದ್ದು, ಬೆಳ್ಳಿ ಒಡವೆಗಳನ್ನು ಕಳ್ಳರು ಮುಟ್ಟಿಲ್ಲ ಎನ್ನಲಾಗಿದೆ.
ಘಟನೆ ಕುರಿತು ವೇಣುಗೋಪಾಲ್ ಅವರು ಮಾಗಡಿ ಪೊಲೀಸರಿಗೆ ದೂರು ನೀಡಿದ್ದು ಬೆರಳಚ್ಚು ತಜ್ಞರು ನುರಿತ ಶ್ವಾನದಳ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಡಿವೈಎಸ್ಪಿ ಪ್ರವೀಣ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
WTC; ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ
Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು
Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್ ಇವೆಂಟ್ ರದ್ದು
Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್ಗೆ ಕಡಿವಾಣ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.