Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು
Team Udayavani, Sep 23, 2024, 11:50 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪಣತ್ತೂರು ಕೆರೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ನೇಪಾಳ ಮೂಲದ ಅನಿಲ್ (22) ಮೃತ ಯುವಕ. ಆತನ ಜತೆ ಕೆರೆಗೆ ಇಳಿದಿದ್ದ ದಿನೇಶ್ ಎಂಬಾತ ಈಜಿ ಸುರಕ್ಷಿತವಾಗಿ ದಡ ಸೇರಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.
ನೇಪಾಳ ಮೂಲದ ಅನಿಲ್ ಮತ್ತು ದಿನೇಶ್ ಹಾಗೂ ಉಪೇಂದ್ರ ಎಂಬುವರು ಭಾನುವಾರ ಸಂಜೆ ಮದ್ಯಪಾನ ಮಾಡಿ ಪಣತ್ತೂರು ಕೆರೆ ಬಳಿ ಹೋಗಿದ್ದರು. ಈ ಪೈಕಿ ಅನಿಲ್ ಮತ್ತು ದಿನೇಶ್, ಮದ್ಯದ ನಶೆಯಲ್ಲಿ ರೀಲ್ಸ್ ಮಾಡಲು ಕೆರೆಗೆ ಇಳಿದಿದ್ದಾರೆ. ಉಪೇಂದ್ರ, ದಡದಲ್ಲಿ ಕುಳಿತು ಮೊಬೈಲ್ ನಿಂದ ಆ ಇಬ್ಬರ ರೀಲ್ಸ್ನ ದೃಶ್ಯ ಚಿತ್ರೀಕರಿಸುತ್ತಿದ್ದ. ಆಗ ಅನಿಲ್, ನೀರಿನಲ್ಲಿ ಮುಳುಗಿದ್ದಾನೆ. ಅದರಿಂದ ಗಾಬರಿಯಾದ ದಿನೇಶ್, ಈಜಿ ದಡಕ್ಕೆ ಬಂದಿದ್ದಾನೆ. ನಂತರ ದಿನೇಶ್ ಮತ್ತು ಉಪೇಂದ್ರ, ತುರ್ತು ಸಹಾಯವಾಣಿ 112ಗೆ ಕರೆ ಮಾಡಿದ್ದಾನೆ. ತುರ್ತು ಕರೆ ಆಧರಿಸಿ ಕೆಲ ನಿಮಿಷಗಳಲ್ಲೇ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಆದರೆ, ಅಷ್ಟರಲ್ಲಿ ಅನಿಲ್ ಮೃತಪಟ್ಟಿದ್ದಾನೆ. ಅನಿಲ್, ದಿನೇಶ್ ಮತ್ತು ಉಪೇಂದ್ರ, ಪಣತ್ತೂರಿನ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸವಿದ್ದು, ಈ ಪೈಕಿ ಅನಿಲ್ ಮತ್ತು ದಿನೇಶ್, ಪಣತ್ತೂರಿನ ಅಪಾರ್ಟ್ ಮೆಂಟ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಉಪೇಂದ್ರ, ಅದೇ ಅಪಾರ್ಟ್ಮೆಂಟ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
WTC; ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ
Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು
Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್ ಇವೆಂಟ್ ರದ್ದು
Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್ಗೆ ಕಡಿವಾಣ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.