Bigg Boss Kannada11: ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
Team Udayavani, Sep 23, 2024, 12:57 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Bigg Boss Kannada-11) ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ವಾರದಿಂದಲೇ ದೊಡ್ಮನೆ ಆಟ ಅದ್ಧೂರಿ ಆಗಿಯೇ ಆರಂಭಗೊಳ್ಳಲಿದೆ.
ಕಿಚ್ಚ ಸುದೀಪ್ (Kiccha Sudeep) ಟಿಪ್ ಟಾಪ್ ಆಗಿಯೇ ಬಿಗ್ ಬಾಸ್ ಮನೆಯ ʼಕಿಂಗ್ʼ ಆಗಿ ಈ ಬಾರಿಯೂ ಕಾಣಿಸಿಕೊಳ್ಳಲಿದ್ದಾರೆ. ಅವರೇ ಶೋ ನಡೆಸಿಕೊಡಲಿದ್ದಾರೆ ಎನ್ನುವ ವಿಚಾರ ಬಹಿರಂಗವಾದ ಬಳಿಕ ಪ್ರೇಕ್ಷಕರ ಕುತೂಹಲ ಸೀಸನ್ -11ರ ಮೇಲೆ ಹೆಚ್ಚಾಗಿದೆ.
ಕಲರ್ಸ್ ಕನ್ನಡ ಕಾರ್ಯಕ್ರಮದ ಕುರಿತಾದ ಪ್ರೋಮೊ ಬಿಟ್ಟು ಕುತೂಹಲ ಹೆಚ್ಚಾಗಿಸಿದೆ. ಇತ್ತೀಚೆಗೆ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಸ್ವರ್ಗ – ನರಕದಲ್ಲಿರುವ ಲೋಕವನ್ನು ತೋರಿಸಲಾಗಿದೆ. ಪ್ರೋಮೋದಲ್ಲಿ ಸಂತಸ ಪಡುವ ಜನ ಒಂದು ಕಡೆಯಾದರೆ ಇನ್ನೊಂದೆಡೆ ನರಕದಲ್ಲಿನ ಕಷ್ಟವನ್ನು ತೋರಿಸಲಾಗಿದೆ.
“ಬೆಳಕು, ಸಂತಸ, ಸುಖ, ನೆಮ್ಮದಿ ಸ್ವರ್ಗ.. ಕತ್ತಲು, ನೋವು, ಕಷ್ಟ ಹಿಂಸೆ ನರಕ.. ಸ್ವರ್ಗದಲ್ಲಿರುವವರು ನರಕದಲ್ಲಿರಬಹುದು, ನರಕದಲ್ಲಿರುವವರು ಸ್ವರ್ಗದಲ್ಲಿರಬಹುದು. ಬೆನ್ನಿಗೆ ಚೂರಿ ಹಾಕುವವರು ಅಂಥ ಅನ್ಕೊಂಡವರು ಮುಂದೆ ಹೋಗಿ ನಿಮ್ಮ ಸ್ನೇಹಿತರಾಗಿರಬಹುದು.. ಸ್ನೇಹಿತರಾಗಿರುತ್ತಾರೆ ಅಂದೋರು ಮುಂದೆ ಹೋಗಿ.. ಇದು ಬಿಗ್ ಬಾಸ್ನ ಹೊಸ ಅಧ್ಯಾಯ ಸ್ವರ್ಗ, ನರಕ ಎರಡೂ ಇದೆ. ಎರಡರಲ್ಲೂ ಕಿಚ್ಚು ಅಷ್ಟೇ ಇದೆ..” ಎಂದು ಕಿಚ್ಚ ಹೇಳುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಆ ಮೂಲಕ ಕಾರ್ಯಕ್ರಮದಲ್ಲಿ ಈ ಬಾರಿ ಸಖತ್ ಟ್ವಿಸ್ಟ್ ಇರಲಿದೆ ಎನ್ನಲಾಗುತ್ತಿದೆ. ಸ್ವರ್ಗ – ನರಕದ ಕಾನ್ಸೆಪ್ಟ್ ರಿವೀಲ್ ಆದ ಬಳಿಕ ಬಿಗ್ ಬಾಸ್ ಕನ್ನಡ -11ರ ಹೊಸ ಮನೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒಂದು ಕಡೆ ಸ್ವರ್ಗದ ರೀತಿಯ ಮನೆ, ಇನ್ನೊಂದು ಕಡೆ ನರಕ ಲೋಕದ ಮನೆಯ ಫೋಟೋಗಳು ವೈರಲ್ ಆಗಿದ್ದು, ಇದು ಈ ಬಾರಿ ಬಿಗ್ ಬಾಸ್ ಮನೆಯ ಫೋಟೋವೆಂದು ಹೇಳಲಾಗುತ್ತಿದೆ. ಅನೇಕರು ಈ ಫೋಟೋ ಹಂಚಿಕೊಂಡಿದ್ದಾರೆ. ಕೆಲ ಬಿಗ್ ಬಾಸ್ ಅಪ್ಡೇಟ್ ಪೇಜ್ ಗಳು ಇದನ್ನು ಹಂಚಿಕೊಂಡಿದೆ.
ಆದರೆ ಕೆಲವರು ಇದು ನಕಲಿ ಫೋಟೋವೆಂದು ಹೇಳುತ್ತಿದ್ದಾರೆ. ಯಾವುದಕ್ಕೂ ಇನ್ನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಶೋ ಆರಂಭದ ಬಳಿಕವಷ್ಟೇ ಮನೆಯ ಫೋಟೋ ಬಹಿರಂಗವಾಗಲಿದೆ.
ಕಳೆದ ಸೀಸನ್ನಲ್ಲಿ ಸಮರ್ಥರು ಮತ್ತು ಅಸಮರ್ಥರು ಎನ್ನುವ ಎರಡು ಗುಂಪುಗಳನ್ನು ಆರಂಭದಲ್ಲಿ ಮಾಡಲಾಗಿತ್ತು. ಆಟದಲ್ಲಿ ಸ್ಪರ್ಧಿಸಿ ಅಸಮರ್ಥರು ಸಮರ್ಥರಾಗಬೇಕಿತ್ತು. ಈ ಬಾರಿಯ ಸ್ವರ್ಗ – ನರಕದ ಕಾನ್ಸೆಪ್ಟ್ ಕೂಡ ಇದೇ ರೀತಿ ಇರಲಿದೆ ಎನ್ನಲಾಗುತ್ತಿದೆ.
ಇದೇ ಸೆ.29ರಂದು ಶೋ ಗ್ರ್ಯಾಂಡ್ ಪ್ರಿಮಿಯರ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
BBK11: ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್
BBK11: ಚೈತ್ರಾ ಕುಂದಾಪುರ To ಕೆಜಿಎಫ್ ಬಾಬು.. ಬಿಗ್ ಬಾಸ್ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್ಬಾಸ್ʼ; ಕುತೂಹಲ ಹುಟ್ಟಿಸಿದ ಪ್ರೋಮೊ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್ ಗಾಂಧಿ
Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ
Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?
America: 1951ರಲ್ಲಿ ಕಿಡ್ನಾಪ್ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.