Thekkatte: ಇಂದಿನಿಂದ ಹೆದ್ದಾರಿ ಬದಿಯ ಅನಧಿಕೃತ ಒತ್ತುವರಿ ತೆರವು

ಕೋಟೇಶ್ವರ, ಕುಂಭಾಶಿ, ತೆಕ್ಕಟ್ಟೆ, ಸಾಲಿಗ್ರಾಮ ಗ್ರಾಮಗಳಲ್ಲಿ ಚುರುಕುಗೊಳ್ಳಲಿದೆ ತೆರವು ಕಾರ್ಯಾಚರಣೆ

Team Udayavani, Sep 23, 2024, 1:30 PM IST

Thekkatte: ಇಂದಿನಿಂದ ಹೆದ್ದಾರಿ ಬದಿಯ ಅನಧಿಕೃತ ಒತ್ತುವರಿ ತೆರವು

ತೆಕ್ಕಟ್ಟೆ: ಕುಂದಾಪುರ – ಸುರತ್ಕಲ್‌ ರಾ.ಹೆ.66 ಚತುಷ್ಪಥ ರಸ್ತೆ ಕಾಮಗಾರಿಯ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸರ್ವಿಸ್‌ ರಸ್ತೆ ನಿರ್ಮಿಸುವ ನಿಟ್ಟಿನಿಂದ ಈಗಾಗಲೇ ಸಹಾಯಕ ಆಯುಕ್ತರ ಸರ್ವೆಯರ್‌ ಸಹಾಯದಿಂದ ಸರ್ವೇ ನಡೆಸಿ, ಉಡುಪಿ ಜಿಲ್ಲೆಯ ಕೋಟೇಶ್ವರ ಕುಂಭಾಶಿ, ತೆಕ್ಕಟ್ಟೆ, ಸಾಲಿಗ್ರಾಮ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಗುರುತಿಸಲಾಗಿದೆ. ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡ ಸ್ಥಳಗಳನ್ನು ತೆರವುಗೊಳಿಸಲು ಈಗಾಗಲೇ ಸುಪ್ರೀಂ ಕೋರ್ಟ್‌ ಆದೇಶದಂತೆ ಸಂಬಂಧಪಟ್ಟ ಜಾಗದ ಮಾಲಕರಿಗೆ ನೋಟಿಸ್‌ ನೀಡಲಾಗಿದ್ದು, ಸೆ.23ರಿಂದ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿದೆ.
ಉಡುಪಿ ಜಿಲ್ಲೆಯಲ್ಲಿ ಸರ್ವಿಸ್‌ ರಸ್ತೆ, ವಿಒಪಿ ಮತ್ತು ಫುಟ್‌ ಓವರ್‌ ಬ್ರಿಡ್ಜ್ ನಿರ್ಮಿಸುವ ಮೂಲಕ ಎನ್‌ಎಚ್‌ ಎಐ ಬ್ಲಾಕ್‌ ಸ್ಪಾಟ್‌ ಕಾಮಗಾರಿಯನ್ನು ಸರಿಪಡಿಸುವ ನಿಟ್ಟಿನಿಂದ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮತ್ತು ಕುಂದಾಪುರ ಸಹಾಯಕ ಆಯುಕ್ತರಿಗೆ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ರಕ್ಷಣೆಯನ್ನು ಒದಗಿಸುವಂತೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್‌ ಅಬ್ದುಲ್ಲಾ ಜಾವೇದ್‌ ಅವರು ಸೆ.18ರಂದು ಮನವಿ ಸಲ್ಲಿಸಿದ್ದಾರೆ.

ಸಂಸದ ಕೋಟ ಅವರಿಗೆ ಮನವಿ ಸುಪ್ರೀಂ ಕೋರ್ಟ್‌ ಆದೇಶದಂತೆ ರಾ.ಹೆ.66 ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡ ಸ್ಥಳಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಜಾಗದ ಮಾಲಕರಿಗೆ ನೋಟಿಸ್‌ ಜಾರಿಗೊಳಿಸಿ ಸೆ.23ರಿಂದ ತೆರವು ಕಾರ್ಯಾಚರಣೆಗೆ ಪ್ರಾಧಿಕಾರ ಸನ್ನದ್ಧವಾದ ಹಿನ್ನೆಲೆಯಲ್ಲಿ ತೆಕ್ಕಟ್ಟೆ ಪ್ರಮುಖ ಭಾಗದಲ್ಲಿರುವ ಜಾಗ ಮಾಲಕರು ಹಾಗೂ ಅಂಗಡಿ ಮಾಲಕರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸೆ.22ರಂದು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ವ್ಯಾಪಾರ ವ್ಯವಹಾರಗಳನ್ನು ಮಾಡಿ ಬದುಕು ಕಟ್ಟಿಕೊಂಡಿದ್ದ ನಮ್ಮಂತಹ ಅಂಗಡಿ ಮಾಲಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ, ಸರ್ವಿಸ್‌ ರಸ್ತೆ ನಿರ್ಮಿಸುವ ಬಗ್ಗೆ ನಮ್ಮ ಸಹಮತವಿದೆ ಎಂದು ಅಂಗಡಿ ಮಾಲಕರು ಆಗ್ರಹಿಸಿದ್ದಾರೆ.

ಉದಯವಾಣಿಯಲ್ಲಿ ವರದಿ
ಕುಂದಾಪುರ – ಸುರತ್ಕಲ್‌ ರಾ.ಹೆ.66 ಚತುಷ್ಪಥ ರಸ್ತೆ ಕಾಮಗಾರಿಯ ಸಂದರ್ಭದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣವಾಗದೇ ವಾಹನಗಳು ವಿರುದ್ಧ ದಿಕ್ಕಿನಿಂದ ಸಂಚರಿಸುತ್ತಿದೆ. ಇದರ ಪರಿಣಾಮ ಸ್ಥಳೀಯ ಶಾಲಾ- ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಪಾಯದ ನಡುವೆ ಸಂಚರಿಸಬೇಕಾದ ಅನಿವಾರ್ಯದ ಕುರಿತು ಉದಯವಾಣಿ ಜನಪರ ಕಾಳಜಿವಹಿಸಿ ಹಲವು ಬಾರಿ ವಿಸ್ತೃತವಾದ ವರದಿ ಪ್ರಕಟಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿತ್ತು.

ತೀವ್ರ ತೊಂದರೆ
ರಾ.ಹೆ.66 ಚತುಷ್ಪಥ ಕಾಮಗಾರಿ ನಡೆದು ದಶಕಗಳೇ ಕಳೆದರೂ ಗ್ರಾಮಸ್ಥರ ಸುರಕ್ಷತೆ ದೃಷ್ಟಿಯಿಂದ ರಸ್ತೆಯ ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಲು ಫುಟ್‌ ಓವರ್‌ ಬ್ರಿಡ್ಜ್ ನಿರ್ಮಿಸದೇ ಇರುವ ಪರಿಣಾಮ ಗ್ರಾಮೀಣ ಭಾಗದ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆದರೆ ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸರ್ವೀಸ್‌ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಸಂತಸದ ವಿಷಯ. ಸರ್ವೀಸ್‌ ರಸ್ತೆ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿಯೇ ಆಯಾ ಗ್ರಾಮಗಳಲ್ಲಿ ಸುವ್ಯವಸ್ಥಿತವಾದ ಬಸ್‌ ತಂಗುದಾಣ, ಆಟೋ ತಂಗುದಾಣ ಕೂಡ ನಿರ್ಮಾಣವಾಗಲಿ.
– ಮಹೇಶ್‌ ಶೆಣೈ ಕುಂಭಾಶಿ, ಸ್ಥಳೀಯರು

ಮಾಲಕರಿಗೆ ನೋಟಿಸ್‌
ಕೋಟೇಶ್ವರ ಕುಂಭಾಶಿ, ತೆಕ್ಕಟ್ಟೆ, ಸಾಲಿಗ್ರಾಮ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿ ಗುರುತಿಸಲಾಗಿದೆ. ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡ ಸ್ಥಳಗಳನ್ನು ತೆರವುಗೊಳಿಸಲು ಈಗಾಗಲೇ ಸುಪ್ರೀಂ ಕೋರ್ಟ್‌ ಆದೇಶದಂತೆ ಜಾಗದ ಮಾಲಕರಿಗೆ ನೋಟಿಸ್‌ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್‌ ಅವರ ಮಾರ್ಗದರ್ಶನ ದಂತೆ ಸೆ.22ರಂದು ತೆಕ್ಕಟ್ಟೆಯಲ್ಲಿ ಬೆಳಗ್ಗೆಯಿಂದಲೇ ಸ್ಥಳ ಪರಿಶೀಲಿಸಿ ಕಾರ್ಯಾಚರಣೆ ನಡೆಸಲಾಗುವುದು.
– ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಟಾಪ್ ನ್ಯೂಸ್

16

BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್‌ To ಫೇಸ್‌ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್‌ಬಾಸ್?

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

16

BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್‌ To ಫೇಸ್‌ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್‌ಬಾಸ್?

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.