ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
Team Udayavani, Sep 23, 2024, 3:04 PM IST
ಕಲಬುರಗಿ: ವಿನಾಃಕಾರಣ ತಪ್ಪು ತಿಳಿವಳಿಕೆಯಿಂದ ಆಪಾದನೆಗಳನ್ನು ಮಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ಸಂಘ ಪರವಾರದಲ್ಲಿ (RSS) ತರಬೇತಿ ಪಡೆದುಕೊಳ್ಳಲಿ. ಆಗ ಆರ್ಎಸ್ಎಸ್ ಏನು ಹೇಳುತ್ತದೆ ಗೊತ್ತಾಗುತ್ತದೆ ಎಂದು ಪ್ರಚಾರಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಹೇಳಿದರು.
ನಗರದಲ್ಲಿ ಸೋಮವಾರ (ಸೆ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಲಾದರೂ ಕಾಂಗ್ರೆಸ್ ನಾಯಕರಿಗೆ ಒಳ್ಳೆಯ ಸಂಸ್ಕೃತಿ ಬರುತ್ತದೆ. ನಾಲ್ಕು ದಿನ ಶಾಖೆಗೂ ಬರಲಿ, ಅಲ್ಲೂ ಒಳ್ಳೆಯ ಭಾಷೆ, ತಿಳಿವು ಬರುತ್ತದೆ. ದೂರ ನಿಂತು ಏನೇನೋ ತಿಳಿದುಕೊಂಡು ಮಾತನಾಡುವುದರಲ್ಲಿ ಯಾವ ಅರ್ಥವೂ ಇಲ್ಲ. ಒಂದು ವಾರ ಬರಲಿ ಎಂದು ಆಹ್ವಾನ ನೀಡಿದರು.
ಸತ್ವ: ಬಾಬಾ ಸಾಹೇಬ್ ಅಂಬೇಡ್ಕರ್, ಸರದಾರ ವಲ್ಲಭಭಾಯಿ ಪಟೇಲ್, ಮಹಾತ್ಮಾ ಗಾಂಧಿ ಅವರೆಲ್ಲ ಸಂಘ ಪರಿವಾರದ ಕೆಲಸವನ್ನು ಶ್ಲಾಘಿಸಿದ್ದಾರೆ. ಆದರೆ, ಇಂದಿನ ಕಾಂಗ್ರೆಸ್ನವರಿಗೆ ಸಂಘ ಪರಿವಾರ ಎಂದರೆ ಆಗಿ ಬರುತ್ತಿಲ್ಲ ಎಂದು ಟಾಂಗ್ ನೀಡಿದರು.
ರಾಜ್ಯದಲ್ಲಿ ಮುಸ್ಲಿಂ ಸರಕಾರವಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಸರಕಾರ. ಅದನ್ನು ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವರೇ ಹೇಳಿಕೊಂಡು ಓಡಾಡಿದ್ದಾರಲ್ಲ ಎಂದು ಕಿಚಾಯಿಸಿದ ಅವರು, ಶಾಖೆಗಳಿಗೆ ಬೆಳಗ್ಗೆ ಬರುವುದರಿಂದ ನಿಮ್ಮ ಆಲೋಚನೆಗಳು ಬದಲಾಗುತ್ತವೆ. ಆಗೊಂದು ಹಿಂದೂ ರಾಷ್ಟ್ರದ ಕಲ್ಪನೆ ನಿಮ್ಮಲ್ಲೂ ಮೊಳಕೆ ಒಡೆಯಲಿ ಎಂದರು.
ನಿಮ್ಮಆರೋಪದಂತೆ ರಾಜಭವನ ಪೊಲೀಸ್ ಠಾಣೆಯಾದಂತೆ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನೀವು ಮಾತ್ರ ರಾಜ್ಯವನ್ನು ಮುಸ್ಲಿಂ ರಾಜ್ಯವನ್ನಾಗಿ ಮಾಡಿದ್ದೀರಿ ಎಂದು ಆರೋಪ ಮಾಡಿದರು.
ನೀವು ಮುಸ್ಲಿಂರ ಸೆರಗಿನಲ್ಲಿ ಕುಳಿತುಕೊಂಡು ಮಾತನಾಡಿದರೆ ಹೇಗೆ? ಅವರ ಬೆಂಬಲದಿಂದ ಅಲ್ಲವೇ ರಾಜ್ಯದಲ್ಲಿ ಹಲವು ಘಟನೆಗಳು ನಡೆಯುತ್ತಿರುವುದು. ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಲ್ವಾ? ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ನೆಲಮಂಗಲ, ಗಣೇಶನಿಗೆ ಕಲ್ಲು ಕೊನೆಗೆ ಸರಕಾರ ಗಣೇಶನನ್ನು ವ್ಯಾನಿನಲ್ಲಿ ಕೊಂಡೊಯ್ಯಲಿಲ್ಲವೇ ಎಂದು ಪ್ರಶ್ನಿಸಿದರು.
ಬಾಗಲಕೋಟೆಯಲ್ಲಿ ತ್ರಿ ಒನ್ ತ್ರಿ (313) ಎನ್ನುವ ಬ್ಯಾನರ್ ದೊಡ್ಡದಾಗಿ ಕಾಣುತ್ತೆ. ಇದು ಅಲ್ ಬದರ್ ಯುದ್ಧದ ಘಟನೆ. ಆ ಯುದ್ದಲ್ಲಿ ಪೈಗಂಬರ್ ಜತೆ 313 ಜನ ಇದ್ದರು. ಆ ಯುದ್ದ ಹೇಗೆ ಗೆದ್ದರೋ ಹಾಗೆ ನಾವು ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಹೇಳಿಕೊಳ್ಳುವಂತಹದ್ದು, ಅದನ್ನು ತೆಗೆಯಿಸಲು ಸರಕಾರಕ್ಕೆ ಆಗಿಲ್ಲ. ಇದು ನಿರ್ವೀರ್ಯ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalakshmi 50 ಪೀಸ್ ಕೇಸ್; ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ: ನಗರ ಪೊಲೀಸ್ ಆಯುಕ್ತ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್ ಕಥೆಯೇನು?
Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!
Prakarana Tanikha Hantadallide Movie; ಟ್ರೇಲರ್ ನಲ್ಲಿ ಪ್ರಕರಣದ ವಿವರ
Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ
Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ
ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್-ಜಲಸಾಹಸ ಕ್ರೀಡೆಗೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.