Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು


Team Udayavani, Sep 23, 2024, 3:35 PM IST

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

ಮೈಸೂರು: ಈ ಬಾರಿ ನಾಡಹಬ್ಬ ದಸರೆಯ ಚಲನಚಿತ್ರೋತ್ಸವ ವನ್ನು ಸ್ಯಾಂಡಲ್‌ವುಡ್‌ನ‌ಲ್ಲಿ ಪ್ರಚಂಡ ಕುಳ್ಳ ನೆಂದೆ ಖ್ಯಾತಿಗಳಿಸಿದ್ದ ಹಾಸ್ಯನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ ಅವರ ನೆನಪಿನಲ್ಲಿ ಏರ್ಪಡಿಸಲಾಗುತ್ತಿದೆ.

ಅ.4 ರಿಂದ 10ರವರೆಗೆ ನಗರದ ಮಾಲ್‌ ಆಫ್‌ ಮೈಸೂರು ಆವರಣದಲ್ಲಿ ಇರುವ ಐನಾಕ್ಸ್ ಮಲ್ಟಿಫ್ಲೆಕ್ಸ್‌ ಹಾಗೂ ಬಿಎಂಎಚ್‌ ಆಸ್ಪತ್ರೆ ಸಮೀಪವಿರುವ ಹ್ಯಾಬಿಟೆಟ್‌ ಮಾಲ್‌ನ ಡಿಆರ್‌ಸಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದ್ದೂ ದ್ವಾರಕೀಶ್‌ ಅವರು ನಿರ್ಮಿಸಿ, ಡಾ.ರಾಜಕುಮಾರ್‌ ಅಭಿನಯದ “ಮೇಯರ್‌ ಮುತ್ತಣ್ಣ’ ವಿಷ್ಣುವರ್ಧನ್‌ ನಾಯಕ ನಟನಾಗಿ ಅಭಿನಯಿಸಿರುವ ಹಾಸ್ಯ ಪ್ರಧಾನ ಚಿತ್ರ “ಗುರು ಶಿಷ್ಯರು’ ದ್ವಾರಕೀಶ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ “ಕಳ್ಳಕುಳ್ಳ’, “ಪ್ರಚಂಡ ಕುಳ್ಳ’ ಸೇರಿದಂತೆ ಇನ್ನೂ ಹಲವು ಉತ್ತಮ ಚಿತ್ರಗಳು ಬೆಳ್ಳಿತೆರೆಯ ಮೇಲೆ ಮತ್ತೂಮ್ಮೆ ಸಿನಿ ರಸಿಕರಿಗೆ ರಸದೌತಣ ನೀಡಲಿವೆ. ‌

ಈ ವರ್ಷ ದ್ವಾರಕೀಶ್‌ಗೆ ಗೌರವ: 2022ರಲ್ಲಿ ನಟ ದಿ.ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಸಿನಿಮಾ ಗಳನ್ನು ಹೆಚ್ಚಾಗಿ ಪ್ರದರ್ಶಿಸಲಾಯಿತು. 2023ರಲ್ಲಿ ಹಾಸ್ಯನಟ ನರಸಿಂಹರಾಜು ಅವರ ಜನ್ಮಶತಮಾನೋತ್ಸವ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಅವರ ಸಿನಿಮಾಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ವರ್ಷ ದ್ವಾರಕೀಶ್‌ಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಅಲ್ಲದೇ ಕನ್ನಡ ಚಲನಚಿತ್ರ ರಂಗದ ಬೆಳವಣಿಗೆಗೆ ದ್ವಾರಕೀಶ್‌ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಜೊತೆಗೆ ಮೈಸೂರು ಜಿಲ್ಲೆಯ ಹುಣಸೂರಿನವರು. ಈ ಹಿನ್ನೆಲೆಯಲ್ಲಿ ಚಿತ್ರೋತ್ಸವದಲ್ಲಿ ಅವರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

80ಕ್ಕೂ ಹೆಚ್ಚು ಸಿನಿಮಾ ಪ್ರದರ್ಶನ: ಚಲನಚಿತ್ರೋತ್ಸವ ಉದ್ಘಾಟನಾ ದಿನವಾದ 4 ರಂದು ದ್ವಾರಕೀಶ್‌ ಅವರ ಪುತ್ರ, ಚಲನಚಿತ್ರ ನಿರ್ಮಾಪಕ ಯೋಗೇಶ್‌ ಅವರನ್ನು ವೇದಿಕೆಯಲ್ಲಿ ಗೌರವಿಸಲಾಗುತ್ತದೆ. ಚಿತ್ರೋತ್ಸವದಲ್ಲಿ ದ್ವಾರಕೀಶ್‌ ಸಿನಿಮಾಗಳಲ್ಲದೇ ರಾಜ್ಯ, ರಾಷ್ಟ್ರ ಹಾಗೂ ಅಂತಾ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಸಿನಿಮಾಗಳು, ಕಲಾತ್ಮಕ ಹಾಗೂ ಕಮರ್ಷಿಯಲ್‌ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಇದರೊಂದಿಗೆ ಅತ್ಯುತ್ತಮ ಕಿರುಚಿತ್ರಗಳು ಕೂಡ ಪ್ರದರ್ಶನ ಕಾಣಲಿವೆ. ಚಿತ್ರೋತ್ಸವಕ್ಕೆ ಐನಾಕ್ಸ್‌ನ ಮೂರು ಸ್ಕ್ರೀನ್‌ ಹಾಗೂ ಡಿಆರ್‌ಸಿಯ ಒಂದು ಸ್ಕ್ರೀನ್‌ ನಿಗದಿಯಾಗಿವೆ. ಸುಮಾರು 80ಕ್ಕೂ ಹೆಚ್ಚು ಸಿನಿಮಾವನ್ನು ಒಂದು ವಾರಕಾಲ ವೀಕ್ಷಣೆ ಮಾಡಬಹುದಾಗಿದೆ. ಚಿತ್ರೋತ್ಸವಕ್ಕೆ ಸಿನಿಮಾಗಳನ್ನು ನೀಡುವಂತೆ ದೇಶದ ಪ್ರತಿಷ್ಠಿತ ಫಿಲ್ಮ್ ಇನ್‌ಸ್ಟಿಟ್ಯೂಟ್‌ ಹಾಗೂ ನಿರ್ಮಾಣ ಸಂಸ್ಥೆಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಲಾಗಿದ್ದು. ಒಂದೆರಡು ದಿನದಲ್ಲಿ ಅಂತಿಮ ಪಟ್ಟಿ ಸಿದ್ಧಗೊಳ್ಳಲಿದೆ. ‌

ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಗೊಂಡಿರುವ ಕಿರುಚಿತ್ರಗಳಲ್ಲಿ ಅತ್ಯುತ್ತಮ ಚಿತ್ರಗಳಿಗೆ ಅ.8 ರಂದು ಬಹುಮಾನ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅ.4 ರಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಿನಿಮಾ ರಂಗದಿಂದ ಆಹ್ವಾನಿತರನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ.

ಚಲನಚಿತ್ರೋತ್ಸವಕ್ಕೆ ಜನ ರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗು ತ್ತಿದೆ. ಹಿಂದಿನ ವರ್ಷಗಳಲ್ಲಿ ಹಲವಾರು ಫಿಲ್ಮ್ ಗಳು ಹೌಸ್‌ ಫ‌ುಲ್‌ ಪ್ರದರ್ಶನ ಕಂಡಿವೆ. ಈ ವರ್ಷವೂ ಪ್ರೇಕ್ಷಕ ರಿಗೆ ಅತ್ಯುತ್ತಮ ಸಿನಿಮಾಗಳನ್ನು ತೋರಿಸಬೇಕು ಎನ್ನುವ ಉದ್ದೇಶವನ್ನು ಸಮಿತಿ ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. -ಟಿ.ಕೆ.ಹರೀಶ್‌, ಕಾರ್ಯದರ್ಶಿ, ದಸರಾ ಚಲನಚಿತ್ರೋತ್ಸವ ಉಪ ಸಮಿತಿ

– ಆರ್‌.ವೀರೇಂದ್ರ ಪ್ರಸಾದ್‌

ಟಾಪ್ ನ್ಯೂಸ್

Yadagiri

Yadagiri: ಸಿಡಿಲು ಬಡಿದು‌ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

1-dssadas

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

siddanna-2

MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

RabkaviRabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prakarana tanikha hantadallide movie trailer out

Prakarana Tanikha Hantadallide Movie; ಟ್ರೇಲರ್‌ ನಲ್ಲಿ ಪ್ರಕರಣದ ವಿವರ

Aditya Shashikumar movie rashi

Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

chaitra j achar joins Marnami movie team

Chaithra J Achar: ಮಾರ್ನಮಿ ತಂಡ ಸೇರಿದ ಚೈತ್ರಾ

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Yadagiri

Yadagiri: ಸಿಡಿಲು ಬಡಿದು‌ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

1-dssadas

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

Kundapura: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

Kundapura: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.