Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು
Team Udayavani, Sep 23, 2024, 4:04 PM IST
ಬೆಂಗಳೂರು: ವೈಯಾಲಿಕಾವಲ್ ನ ವಿನಾಯಕನಗರದಲ್ಲಿ ಮಹಾಲಕ್ಷ್ಮೀ (Mahalakshmi Case) ಎಂಬಾಕೆಯನ್ನು ಕೊಂದು ಸುಮಾರು 50 ತುಂಡುಗಳನ್ನಾಗಿ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ (West Bengal) ಪೊಲೀಸರು ಗುರುತಿಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಸೆ. 21 ರಂದು 29 ವರ್ಷದ ಮಹಾಲಕ್ಷ್ಮಿ ಅವರ ಮೃತದೇಹವು 50 ತುಂಡುಗಳಾಗಿ ಕತ್ತರಿಸಿ ಫ್ಲಾಟ್ನಲ್ಲಿ ಫ್ರಿಡ್ಜ್ ನಲ್ಲಿ ಇರಿಸಿದ್ದು ಪತ್ತೆಯಾಗಿತ್ತು.
“ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬ ಶಂಕಿತನಾಗಿರುವ ಬಗ್ಗೆ ಮಾಹಿತಿ ಇದೆ. ಅವರನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ” ಎಂದು ಪರಮೇಶ್ವರ ಹೇಳಿದರು.
ಯಾವುದೇ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ಇಲ್ಲ, ಶಂಕಿತರನ್ನು ವಿಚಾರಣೆ ಮಾಡಲಾಗುತ್ತಿದೆ” ಎಂದರು.
ದೇಹದ ಪೀಸ್ ಜೋಡಿಸೋದೇ ಸವಾಲು
50ಕ್ಕೂ ಹೆಚ್ಚು ತುಂಡಾಗಿರುವ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸುವುದು ವೈದ್ಯರಿಗೆ ದೊಡ್ಡ ಸವಾಲಾಗಿತ್ತು. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ 2 ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೊದಲು ತುಂಡು ತುಂಡಾದ ದೇಹವನ್ನು ರಿಅಸ್ಸೆಂಬಲ್ ಮಾಡಿಕೊಂಡು, ನಂಬರ್ಗಳನ್ನು ಕೊಡಲಾಗಿತ್ತು. ಮೃತದೇಹವನ್ನು ಯಾವ ಆಯುಧದಿಂದ ಕತ್ತರಿಸಲಾಯಿತು ಎಂದು ಪರೀಕ್ಷಿಸಲಾಯಿತು. ಇದು ಮಹತ್ತರವಾದ ಸಾಕ್ಷಿ ಆಗುತ್ತದೆ. ಮಹಿಳೆ ಸತ್ತ ನಂತರ ಆಕೆಯ ದೇಹವನ್ನು ಪೀಸ್ ಪೀಸ್ ಮಾಡಲಾಗಿತ್ತೆ, ಇಲ್ಲವೇ, ವಿಷಕಾರಿಯಾದ ವಸ್ತು ಕೆಟ್ಟು ಸಾಯುವುದಕ್ಕೂ ಮುಂಚೆಯೇ ಪೀಸ್ ಪೀಸ್ ಮಾಡಲಾಯಿತ್ತೆ ಎಂಬುದರ ಬಗ್ಗೆ ಪರೀಕ್ಷೆ ನಡೆಲಾಗಿದೆ. ತಲೆಗೆ ಹೊಡೆದು ಕೊಲೆ ಮಾಡಲಾಯಿತೆ, ಅಥವಾ ಡ್ರಗ್ಸ್, ಪಾಯಿಸನ್ ಕೊಟ್ಟು ಹತ್ಯೆ ಮಾಡಲಾಗಿತ್ತೇ ಎಂಬುದನ್ನು ಪತ್ತೆ ಹಚ್ಚಬೇಕು. ದೇಹದ ಪ್ರತಿ ತುಂಡನ್ನು ರೆಡಿಯಾಲಿಜಿಕಲ್, ಸಿಟಿ ಸ್ಕ್ಯಾನ್, ಎಕ್ಸರೇ, ಟಾಕ್ಸಿಕಲ್ ಎಕ್ಸಾಮಿನೇಷನ್, ಪ್ಯಾಥಾಲಿಜಿಕಲ್ ಎಕ್ಸಾಮಿನೇಷನ್ ಹಾಗೂ ಡಿಎನ್ಎ ಪರೀಕ್ಷೆ ಮಾಡಿ ಅಂತಿಮವಾಗಿ ಕಂಡು ಬಂದ ಅಂಶಗಳ ವರದಿಯನ್ನು ಸಿದ್ಧಪಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ
Mahalakshmi 50 ಪೀಸ್ ಕೇಸ್; ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ: ನಗರ ಪೊಲೀಸ್ ಆಯುಕ್ತ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್ ಕಥೆಯೇನು?
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ
Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!
Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್ ಅಲರ್ಟ್
Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ
Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.