Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್
ಬಿಜೆಪಿ ಯೂಸ್ ಅಂಡ್ ಥ್ರೋ ತಂತ್ರವನ್ನು ಅನುಸರಿಸುತ್ತಿದೆ...ಮುಂದಿನ ಗುರಿಯೇ ಶಿಂಧೆ
Team Udayavani, Sep 23, 2024, 9:32 PM IST
ಮುಂಬಯಿ: ”ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯನ್ನು ಮಹಾಯುತಿ ಮೈತ್ರಿಯಿಂದ ಹೊರಹಾಕಲು ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ” ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಸೋಮವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ ”ಬಿಜೆಪಿ ಯೂಸ್ ಅಂಡ್ ಥ್ರೋ ತಂತ್ರವನ್ನು ಅನುಸರಿಸುತ್ತಿದೆ. ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯನ್ನು ಹೊರಹಾಕಲು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ವ್ಯವಸ್ಥಿತವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಬಿಜೆಪಿಯ ಮುಂದಿನ ಗುರಿ ನಿಮ್ಮ ನೇತೃತ್ವದ ಶಿವಸೇನೆಯಾಗಿರಬಹುದು ಎಂಬುದನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು.
ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಎನ್ಸಿಪಿ(ಅಜಿತ್ ಪವಾರ್) ಪಕ್ಷಗಳು ರಾವುತ್ ಅವರ ಆರೋಪಗಳನ್ನು ತಳ್ಳಿಹಾಕಿದ್ದು, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ನಾಯಕರು ಸೋಲಿನ ಭೀತಿಯಿಂದ ಅಭದ್ರತೆಯಿಂದ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಹೇಳಿವೆ.
ಎನ್ಸಿಪಿ(ಅಜಿತ್ ಪವಾರ್) ರಾಜ್ಯ ಘಟಕದ ಅಧ್ಯಕ್ಷ ಸುನೀಲ್ ತಟ್ಕರೆ ರಾವುತ್ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದು, ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿ ಏಕೀಕೃತ ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲಿವೆ. ಈ ವದಂತಿಗಳನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.