Kaveri Aarathi: ಗಂಗಾ ಆರತಿ ಅಧ್ಯಯನಕ್ಕೆ ಮತ್ತೊಮ್ಮೆ ನಿಯೋಗ ಕಳಿಸುವುದೇಕೆ?: ಆರ್‌.ಅಶೋಕ್‌

ಸಚಿವರು ತಮ್ಮ ತಂಡದೊಂದಿಗೆ ಹರಿದ್ವಾರ, ಕಾಶಿಗೆ ಹೋಗಿ ಮಾಡಿದ್ದಾದರು ಏನು?: ವಿಪಕ್ಷ ನಾಯಕ

Team Udayavani, Sep 23, 2024, 11:03 PM IST

R.Ashok

ಬೆಂಗಳೂರು:  ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್‌.ಚಲುವರಾಯ ಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ ಬಳಿಕ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಏತಕ್ಕೆ? ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.

ಸರಕಾರಕ್ಕೆ ಹಿಂದೂಗಳ ಆಚಾರ-ವಿಚಾರ ಬಗ್ಗೆ ದಿಢೀರ್‌ ಆಸಕ್ತಿ:
ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು ಮಸ್ತಿ ಮಾಡಲು ಹೋಗಿದ್ದಾ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ. ಅಯೋಧ್ಯೆ ಶ್ರೀ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷ ಹಳೆ  ಪ್ರಕರಣಗಳ ಮತ್ತೆ ಓಪನ್ ಮಾಡಿಸಿ ಕರಸೇವಕರ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯ ಪೊಲೀಸ್ ವ್ಯಾನ್ ಗೂ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ ವಿಚಾರದ ಬಗ್ಗೆ, ಸಂಪ್ರದಾಯ ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ.

ತಾಯಿ ಕಾವೇರಿ ಮೆಚ್ಚುತ್ತಾಳಾ?
ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ ಗಳನ್ನ ಒದ್ದು ಒಳಗೆ ಹಾಕಿ, ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್ ಗಳ ಒದ್ದು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್ ಗಳನ್ನು ಜೈಲಿಗೆ ಕಳಿಸಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ? ಎಂದು ವಿಪಕ್ಷ ನಾಯಕ ಅಶೋಕ್‌ ಪ್ರಶ್ನಿಸಿದರು.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.