Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ
Team Udayavani, Sep 24, 2024, 6:45 AM IST
ಕುಂದಾಪುರ: ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯ ನಿವಾಸಿ ಕರುಣಾಕರ ಶೆಟ್ಟಿ (72) ಅವರ ಮೃತದೇಹವು ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಶನಿವಾರ ಗುಜ್ಜಾಡಿ ಗ್ರಾಮದ ಕಳಿಹಿತ್ಲುವಿನ ಪಂಚಗಂಗಾವಳಿ ಹೊಳೆಯಲ್ಲಿ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಇನ್ನೂ ತಲೆ ಮಾತ್ರ ಪತ್ತೆಯಾಗಿಲ್ಲ. ಸೋಮವಾರವೂ ರುಂಡಕ್ಕಾಗಿ ಗಂಗೊಳ್ಳಿ ಠಾಣಾ ಪೊಲೀಸರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯಿತು.
ಗಂಗೊಳ್ಳಿ ಎಸ್ಐ ಹರೀಶ್ ಆರ್. ಮಾರ್ಗದರ್ಶನದಲ್ಲಿ ಸಿಬಂದಿಯ ಸಹಕಾರದೊಂದಿಗೆ ಸ್ಥಳೀಯ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದಲ್ಲಿ ರುಂಡಕ್ಕಾಗಿ ಹುಡುಕಾಟ ನಡೆಯಿತು. ಸೋಮವಾರ ಸ್ಥಳೀಯ ಮೀನುಗಾರರು ಸಹ ಪತ್ತೆ ಕಾರ್ಯದಲ್ಲಿ ಭಾಗಿಯಾದರು. ದೋಣಿಯ ಮೂಲಕ ಶೋಧ ಕಾರ್ಯಾಚರಣೆ ನಡೆದರೂ, ಯಾವುದೇ ಪ್ರಯೋಜನವಾಗಿಲ್ಲ.
ಸಾವಿಗೆ ಕಾರಣ ನಿಗೂಢ: ಕರುಣಾಕರ ಶೆಟ್ಟಿಯವರ ಸಾವಿಗೆ ಕಾರಣ ನಿಗೂಢವಾಗಿದೆ. ಸೆ. 19ರ ರಾತ್ರಿ ನಾಪತ್ತೆಯಾಗಿದ್ದು, ಸೆ. 21ರ ಬೆಳಗ್ಗೆ ಮೃತದೇಹ ಕಳಿಹಿತ್ಲುವಿನ ಹೊಳೆಯಲ್ಲಿ ಪತ್ತೆಯಾಗಿತ್ತು. ಬಂಟ್ವಾಡಿಯ ಸೇತುವೆಯಿಂದ ಕುತ್ತಿಗೆಗೆ ಹಗ್ಗ ಕಟ್ಟಿಕೊಂಡು ಹಾರಿರಬಹುದೇ? ಹಾಗೆ ಹಾರಿದಾಗ ದೇಹ ಹಾಗೂ ತಲೆ ಬೇರ್ಪಟ್ಟಿರಬಹುದೇ? ಅಥವಾ ಯಾರಾದರೂ ಕೊಲೆ ಮಾಡಿ ಹೀಗೆ ನದಿಗೆ ಎಸೆದಿರಬಹುದೇ ಎನ್ನುವ ಸಂಶಯವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!
Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್ ರಸ್ತೆಗಳೆಂಬ ನಿತ್ಯ ತಮಾಷೆ !
Fish: ಬಂಗುಡೆಗೆ ಬರ; ಮತ್ಸ್ಯೋದ್ಯಮಕ್ಕೆ ಹೊಡೆತ; 2 ತಿಂಗಳಾದರೂ ಸುಧಾರಣೆ ಇಲ್ಲ
Karkala ಕೋರ್ಟ್ಗೆ ನಕ್ಸಲ್ ಕನ್ಯಾಕುಮಾರಿ, ರಮೇಶ್
Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!
Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ
Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು
Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.