Wenlock Hospital: ಸಮಸ್ಯೆ ನಿವಾರಣೆಗೆ ಗುಳಿಗ ಪುನರ್‌ ಪ್ರತಿಷ್ಠೆ

ಉದ್ಘಾಟನೆಗೂ ಮೊದಲು ಸಿಬಂದಿಯಿಂದ ಧಾರ್ಮಿಕ ಕಾರ್ಯಕ್ರಮ

Team Udayavani, Sep 24, 2024, 6:45 AM IST

Wenlock Hospital: ಸಮಸ್ಯೆ ನಿವಾರಣೆಗೆ ಗುಳಿಗ ಪುನರ್‌ ಪ್ರತಿಷ್ಠೆ

ಮಂಗಳೂರು: ಹಂಪನಕಟ್ಟೆ ಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್‌ ಸೂಪರ್‌ ಸ್ಪೆಷಾಲಿಟಿ ಕಟ್ಟಡ ಇತ್ತೀಚೆಗೆ ಉದ್ಘಾಟನೆಗೊಂಡಿದ್ದು, ಈ ಸ್ಥಳದಲ್ಲಿ ಗುಳಿಗ ದೈವದ ಸಾನ್ನಿಧ್ಯವಿತ್ತು ಎಂಬ ಹಿನ್ನೆಲೆಯಲ್ಲಿ ಉದ್ಘಾಟನೆಗೂ ಮೊದಲು ದೈವದ ಪುನರ್‌ ಪ್ರತಿಷ್ಠೆ ನಡೆಸಲಾಗಿದೆ!

ದೈವಾರಾಧನೆ ತುಳುನಾಡಿನಲ್ಲಿರುವುದರಿಂದ ಆ ನಂಬಿಕೆಗೆ ಅನುಸಾರವಾಗಿ, ಆಸ್ಪತ್ರೆಯಲ್ಲಿರುವ ಸಿಬಂದಿ ಹಾಗೂ ರೋಗಿಗಳಿಗೆ ಯಾವುದೇ ಸಮಸ್ಯೆ ಆಗಬಾರದು, ನೆಗೆಟಿವ್‌ ಎನರ್ಜಿಯ ವಾತಾವರಣ ಇರಬಾರದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರ ಗಮನಕ್ಕೂ ತರಲಾಗಿತ್ತು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ಕಟ್ಟಡದ ಕಾಮಗಾರಿ ಆರಂಭವಾದ ಬಳಿಕ ಕೆಲವು ಕಾರ್ಮಿಕರಿಗೆ ಹಾಗೂ ಆಸ್ಪತ್ರೆ ಸಿಬಂದಿಗೆ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಅವರು ಅಧಿಕಾರಿಗಳಲ್ಲಿ ನೋವು ತೋಡಿಕೊಂಡು, ಪ್ರಶ್ನಾಚಿಂತನೆಯ ಸಲಹೆಯನ್ನೂ ನೀಡಿದ್ದರು. ಆ ಹಿನ್ನೆಲೆಯಲ್ಲಿ ನಡೆಸಿದ ಪ್ರಶ್ನೆ ಚಿಂತನೆಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಈ ಹಿಂದೆ ಗುಳಿಗ ದೈವದ ಸಾನ್ನಿಧ್ಯವಿತ್ತು ಎಂಬುದು ಗೊತ್ತಾಗಿದೆ ಎನ್ನಲಾಗಿದೆ.

ಪಂಚ ದೈವಗಳ ಆರಾಧನ ಸ್ಥಳ
ಅನಾದಿ ಕಾಲದಲ್ಲಿ ಈ ಪರಿಸರದಲ್ಲಿ ಕುಟುಂಬವೊಂದು ಗುಳಿಗ ಸಹಿತ 5 ದೈವಗಳನ್ನು ಆರಾಧಿಸಿಕೊಂಡು ಬಂದಿದ್ದು, ಕಾಲಾನಂತರ ಆ ಕುಟುಂಬ ವಾಮಂಜೂರು ಕಡೆಗೆ ತೆರಳಿತ್ತು. ಇತರ ದೈವಗಳನ್ನು ಆ ಕುಟುಂಬ ತನ್ನೊಂದಿಗೆ ಕರೆದೊಯ್ದಿತ್ತು. ಆದರೆ ಗುಳಿಗ ದೈವ ಶರವು ಕ್ಷೇತ್ರಕ್ಕೆ ಸಂಬಂಧಿಸಿದ್ದರಿಂದ ಅದು ತಾನಿದ್ದ ಪರಿಸರದ ಮರವೊಂದರ ಬುಡದಲ್ಲಿ ನೆಲೆಯಾಗಿತ್ತು. (ಸ್ಥಳಕ್ಕೆ ಸಂಬಂಧಿಸಿದ ಗುಳಿಗ ಬೇರೆ ಕಡೆಗೆ ಹೋಗುವುದಿಲ್ಲ ಎಂಬ ನಂಬಿಕೆ ಇದೆ). ಹೊಸ ಕಟ್ಟಡದ ಸ್ಥಳದಲ್ಲಿದ್ದ ಆ ಮರವನ್ನು ನೆಲಸಮ ಮಾಡಲಾಯಿತು. ಆಗ ದೈವ ರೈಲು ನಿಲ್ದಾಣ ಬಳಿಯಲ್ಲಿರುವ ಮುತ್ತಪ್ಪನ್‌ ಗುಡಿ ಪರಿಸರದಲ್ಲಿ ನೆಲೆಯಾಯಿತು.

ತನ್ನ ಸಾನ್ನಿಧ್ಯವನ್ನು ತೆರವು ಮಾಡಿರುವುದರಿಂದ ಅದಕ್ಕೆ ನೆಲೆ ಇಲ್ಲದೆ ಸಮಸ್ಯೆ ಉಂಟಾಗಿದೆ ಎಂಬುದು ಪ್ರಶ್ನೆಯಲ್ಲಿ ಕಂಡುಬಂದಿತ್ತು. ಅಲ್ಲದೆ ಕಾಮಗಾರಿ ವೇಳೆ ನಾಗನ ಹತ್ಯೆಯೂ ನಡೆದಿರುವುದು ಗೊತ್ತಾಗಿತ್ತು. ಹಾಗಾಗಿ ಆಶ್ಲೇಷಾ ಬಲಿಯನ್ನೂ ನಡೆಸಲಾಗಿದೆ. ಬಳಿಕ ಆಸ್ಪತ್ರೆ ಕಟ್ಟಡ ಸಮೀಪದ ಅಶ್ವತ್ಥ ಮರದ ಬುಡದಲ್ಲಿ ಗುಳಿಗನನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧನಾತ್ಮಕ ಶಕ್ತಿಗೆ ಪೂರಕ
ಕೆಲವು ಕಾರ್ಮಿಕರು, ಸಿಬಂದಿ ಕೋರಿಕೆಯಂತೆ ಪ್ರಶ್ನೆ ಇಡಲಾಗಿತ್ತು. ಸಿಬಂದಿ, ಅಧಿಕಾರಿಗಳೇ ಹಣ ಸಂಗ್ರಹಿಸಿ ಪ್ರಾಯಶ್ಚಿತ ಸಹಿತ ವಿವಿಧ ಧಾರ್ಮಿಕ ವಿಧಿಗಳನ್ನು ಮಾಡಿಸಿದ್ದೇವೆ. ನಂಬಿಕೆಯ ವಿಚಾರ ಒಂದೆಡೆಯಾದರೆ, ಪರಿಸರದಲ್ಲಿ ಋಣಾತ್ಮಕ ಶಕ್ತಿ ಕೂಡ ಒಳ್ಳೆಯದಲ್ಲ. ಎಲ್ಲರಲ್ಲೂ ನೆಮ್ಮದಿ ಇದ್ದರೆ ಧನಾತ್ಮಕ ವಾತಾವರಣ ಸೃಷ್ಟಿಯಾಗುತ್ತದೆ. ಹಾಗಾಗಿ ವಿಧಿವಿಧಾನಗಳನ್ನು ನಡೆಸಲಾಗಿದೆ ಎಂದು ಆಸ್ಪತ್ರೆಯ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿ ಹೇಳಿದ್ದಾರೆ.

ಎಲ್ಲರ ಒಳಿತಿಗಾಗಿ ಕ್ರಮ ದೈವದ ಮೇಲಿನ ನಂಬಿಕೆ ಯಿಂದ ಹಾಗೂ ಎಲ್ಲರ ಒಳಿತಿಗಾಗಿ ಆಸ್ಪತ್ರೆಯ ಸಿಬಂದಿ, ಅಧಿಕಾರಿಗಳು ತಾವೇ ಹಣ ಹೊಂದಿಸಿ ಧಾರ್ಮಿಕ ವಿಧಿವಿಧಾನಗಳನ್ನು ಮಾಡಿಸಿದ್ದಾರೆ.
-ಡಾ| ಶಿವಪ್ರಕಾಶ್‌,
ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು,
ವೆನ್ಲಾಕ್‌ ಜಿಲ್ಲಾಸ್ಪತ್ರೆ, ಮಂಗಳೂರು

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಮಂಗಳೂರು-ಸುಬ್ರಹ್ಮಣ್ಯ “ಮೆಮು’ ರೈಲು ಪುನರಾರಂಭ?

Train: ಮಂಗಳೂರು-ಸುಬ್ರಹ್ಮಣ್ಯ “ಮೆಮು’ ರೈಲು ಪುನರಾರಂಭ?

“ಕಾರಿನಲ್ಲಿ ಬೆಂಕಿ ಬರುತ್ತಿದೆ’ ಎಂದು ನಂಬಿಸಿ ದೋಚುವ ತಂಡ

Mangalore-Bangalore Highway:”ಕಾರಿನಲ್ಲಿ ಬೆಂಕಿ ಬರುತ್ತಿದೆ’ ಎಂದು ನಂಬಿಸಿ ದೋಚುವ ತಂಡ

ಸೆ.25: ಮಂಗಳೂರು ವಿಶ್ವವಿದ್ಯಾನಿಲಯ ಸಂಸ್ಥಾಪನ ದಿನ

ಸೆ.25: ಮಂಗಳೂರು ವಿಶ್ವವಿದ್ಯಾನಿಲಯ ಸಂಸ್ಥಾಪನ ದಿನ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.