Modi USA tour; ಭಾರತದ ಸೆಮಿಕಂಡಕ್ಟರ್‌ ಕನಸಿಗೆ ಈಗ ಹೊಸ ‘ಶಕ್ತಿ’

ನಮ್ಮ ನಿಗ್ರಹಕ್ಕಾಗಿ ಕ್ವಾಡ್‌ ಅಸ್ತ್ರ: ಚೀನ ಕಿಡಿ

Team Udayavani, Sep 24, 2024, 6:45 AM IST

1-reess

ವಾಷಿಂಗ್ಟನ್‌: ರಾಷ್ಟ್ರೀಯ ಭದ್ರತೆಗೆ ಬಲ ನೀಡುವಂಥ ದೇಶದ ಮೊದಲ ಅತ್ಯಾ ಧುನಿಕ ಸೆಮಿಕಂಡಕ್ಟರ್‌ ಫ್ಯಾಬ್ರಿಕೇಶನ್‌ ಘಟಕ “ಶಕ್ತಿ’ ಶೀಘ್ರವೇ ಭಾರತದಲ್ಲಿ ಸ್ಥಾಪನೆ ಗೊಳ್ಳಲಿದ್ದು, ಇದಕ್ಕೆ ಅಮೆರಿಕ ಪಾಲುದಾರಿಕೆ ವಹಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ನಡುವಿನ ದ್ವಿಪಕ್ಷೀಯ ಸಭೆಯಲ್ಲಿ ಈ ವಿಚಾರವನ್ನು ಉಭಯ ರಾಷ್ಟ್ರಗಳು ಘೋಷಿಸಿವೆ. ವಿಶ್ವದ ಮೊದಲ ಮಲ್ಟಿ ಮೆಟಿರಿಯಲ್‌  ಫ್ಯಾಬ್ರಿ ಕೇಶನ್‌ ಘಟಕ ಇದಾಗಿರಲಿದ್ದು, ಉತ್ತರ ಪ್ರದೇಶದಲ್ಲೇ ಘಟಕ ಸ್ಥಾಪನೆಯ ನಿರೀಕ್ಷೆ ಇದೆ. ಭದ್ರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆಧುನಿಕ ಯುದ್ಧಕ್ಕೂ ಸಹಾಯಕವಾಗುವ ಸುಧಾರಿತ ಸಂವೇದನ ತಂತ್ರಜ್ಞಾನ, ಸಂವಹನ ಮತ್ತು ಪವರ್‌ ಎಲೆಕ್ಟ್ರಾನಿಕ್ಸ್‌ ಕ್ಷೇತ್ರ ಕೇಂದ್ರೀಕರಿಸಿ ಈ ಘಟಕ ಸ್ಥಾಪಿಸಲಾಗುತ್ತಿದೆ. ಇನ್‌ಫ್ರಾರೆಡ್‌, ಗ್ಯಾಲಿಯಂ ನೈಟ್ರೇಡ್‌, ಸಿಲಿಕಾನ್‌ ಕಾರ್ಬೈಡ್‌ ಸೆಮಿಕಂಡಕ್ಟರ್‌ಗಳ ನ್ನು ಘಟಕ ಉತ್ಪಾದಿಸಲಿದೆ. ಇಂಡಿಯನ್‌ ಸೆಮಿಕಂಡಕ್ಟರ್‌ ಮಿಷನ್‌, ಭಾರತ್‌ ಸೆಮಿ, 3ಆರ್‌ಡಿಐ, ಅಮೆರಿಕ ಸ್ಪೇಸ್‌ ಫೋರ್ಸ್‌ ಸಹಭಾಗಿತ್ವವೂ ಇರಲಿದೆ. ತಯಾರಾಗುವ ಚಿಪ್‌ಗ್ಳನ್ನು ಎರಡೂ ರಕ್ಷಣ ಮಿಲಿಟರಿ ಹಾರ್ಡ್‌ವೇರ್‌ ನಲ್ಲಿ ಬಳಸಲಿವೆ.

ಟೆಕ್‌ ಸಿಇಒಗಳ ಜತೆ ಸಭೆ: ಕೃತಕ ಬುದ್ಧಿಮತ್ತೆ, ಕ್ವಾಂಟಮ್‌ ಕಂಪ್ಯೂಟಿಂಗ್‌, ಸೆಮಿಕಂಡಕ್ಟರ್‌ ಸೇರಿದಂತೆ ಪ್ರಮುಖ ತಂತ್ರಜ್ಞಾನ ಕ್ಷೇತ್ರಗಳ  ಅಮೆರಿಕ 15 ಸಿಇಒಗಳು ಜತೆಗೆ ಮೋದಿ ನ್ಯೂಯಾರ್ಕ್‌ನಲ್ಲಿ ಸೋಮವಾರ ದುಂಡು ಮೇಜಿನ ಸಭೆ ನಡೆಸಿದ್ದಾರೆ. ಭಾರತದ ಅಭಿವೃದ್ಧಿಗೆ ಅನುವಾಗುವಂತೆ ತಂತ್ರಜ್ಞಾನ, ನಾವೀನ್ಯತೆ ಸೇರಿದಂತೆ ವಿವಿಧ ಕ್ಷೇತ್ರಗಳ ದ್ವಿಪಕ್ಷೀಯ ಸಹಯೋಗ ಉತ್ತೇಜಿಸುವ ಹಲವು ಕ್ರಮಗಳ ಬಗ್ಗೆಯೂ ಈ ವೇಳೆ ಚರ್ಚಿಸಿದ್ದಾರೆ.

ಡಿಜಿಟಲ್‌ ಇಂಡಿಯಾ ದೃಷ್ಟಿಕೋನದೊಂದಿಗೆ ಭಾರತ ಪರಿವರ್ತನೆಗೆ ಮೋದಿ ಎದುರು ನೋಡುತ್ತಿದ್ದಾರೆ. ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲು ಎಐ ಆ್ಯಪ್‌ಗ್ಳನ್ನು ಅಭಿವೃದ್ಧಿ ಪಡಿಸುವಂತೆ ಹುರಿದುಂಬಿಸಿದ್ದಾರೆ. ಪಿಕ್ಸೆಲ್‌ ಫೋನ್‌ಗಳನ್ನು ಭಾರತದಲ್ಲಿ ಉತ್ಪಾದಿಸಲು ಹೆಮ್ಮೆಯಾಗುತ್ತಿದೆ.

ಸುಂದರ್‌ ಪಿಚೈ, ಗೂಗಲ್‌

ಹನುಮಾನ್‌ಕೈಂಡ್‌ ಪ್ರದರ್ಶನಕ್ಕೆ “ಜೈ ಹನುಮಾನ್‌’ ಎಂದ ಪ್ರಧಾನಿ

ಅಮೆರಿಕದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಮೋದಿಯವರ ಸಂವಾದ ಕಾರ್ಯಕ್ರಮ “ಮೋದಿ ಆ್ಯಂಡ್‌ಯುಎಸ್‌’ನಲ್ಲಿ ಭಾರತೀಯ ರ್ಯಾಪರ್‌ ಹನುಮಾನ್‌ಕೈಂಡ್‌ ತಮ್ಮ ವಿಶಿಷ್ಟ ರ್ಯಾಪ್‌ ಮೂಲಕ ಪ್ರಧಾನಿ ಮೋದಿಯ ಮೆಚ್ಚುಗೆ ಗಳಿಸಿದರು. ಅವರ ಪ್ರದರ್ಶನದ ಬಳಿಕ ಹನುಮಾನ್‌ಕೈಂಡ್‌ ಅವರ ಕೈ ಕುಲುಕಿ, ಅಪ್ಪುಗೆ ನೀಡಿದ ಮೋದಿ, “ಜೈ ಹನುಮಾನ್‌’ ಎಂದು ಹೇಳಿ ಅವರಿಗೆ ಶುಭ ಕೋರಿದ್ದಾರೆ.

ನಮ್ಮ ನಿಗ್ರಹಕ್ಕಾಗಿ ಕ್ವಾಡ್‌ ಅಸ್ತ್ರ: ಚೀನ ಕಿಡಿ

ಅಮೆರಿಕದಲ್ಲಿ ಯಶಸ್ವಿಯಾಗಿ ನಡೆದ ಕ್ವಾಡ್‌ ಶೃಂಗಸಭೆಯನ್ನು ಚೀನಕ್ಕೆ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೆರಳಿ ಕೆಂಡವಾಗಿರುವ ಚೀನ, “ಬೀಜಿಂಗ್‌ ಅನ್ನು ನಿಗ್ರಹಿಸಲೆಂದೇ ಈ ಶೃಂಗಸಭೆಯನ್ನು ಅಮೆರಿಕ ಅಸ್ತ್ರವನ್ನಾಗಿ ಬಳಸುತ್ತಿದೆ’ ಎಂದು ಆರೋಪಿಸಿದೆ. ದಕ್ಷಿಣ ಹಾಗೂ ಪೂರ್ವ ಚೀನ ಸಮುದ್ರಗಳ ಮೇಲೆ ತನ್ನ ಸಾರ್ವಭೌಮತೆ ಹಾಗೂ ಕಡಲ ಹಕ್ಕುಗಳನ್ನು ಯಾವುದೇ ಬಾಹ್ಯ ಶಕ್ತಿಯಿಂದಲೂ ಅಲುಗಾಡಿಸಲಾಗುವುದಿಲ್ಲ ಎಂದು ಚೀನ ಉದ್ಗರಿಸಿದೆ. ಕಡಲಿಗೆ ಸಂಬಂಧಿಸಿದ ವಿಷಯಗಳ ನೆಪದಲ್ಲಿ ಭದ್ರತಾ ಸಹಕಾರಗಳನ್ನು ಪಡೆದು ಅಮೆರಿಕವು ದೇಶಗಳನ್ನು ಒಗ್ಗೂಡಿಸುತ್ತಿದೆ. ಇದಲ್ಲದೇ ಚೀನ ಅಪಾಯಕಾರಿ ಎಂದು ಬಿಂಬಿಸುತ್ತಾ ನಮ್ಮನ್ನು  ನಿಗ್ರಹಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ನಾವು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ಲಿನ್‌ ಜಿಯಾನ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aakd

Sri Lanka; 9ನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸಾ ನಾಯಕೆ ಪದಗ್ರಹಣ

Pak 2

Pak ಐಎಸ್‌ಐಗೆ ಲೆ|ಜ| ಅಸೀಮ್‌ ಮಲಿಕ್‌ ಮುಖ್ಯಸ್ಥ

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.