Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

ಹಾಳು ಕೊಂಪೆಯಂತಾದ ಸಮುದಾಯ ಭವನ

Team Udayavani, Sep 24, 2024, 8:17 AM IST

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

ಮುಧೋಳ: ಸೂಕ್ತ ನಿರ್ವಹಣೆ ಕೊರತೆಯಿಂದಾಗಿ‌ ನಗರದ ಮಧ್ಯಭಾಗದಲ್ಲಿರುವ ಸಮುದಾಯ ಭವನವೊಂದು ಪಾಳು ಕೊಂಪೆಯಂತಾಗುತ್ತಿದ್ದು, ಸಾರ್ವಜನಿಕರ ಅನೈತಿಕ ಚಟುವಟಿಕೆ‌ ತಾಣವಾಗಿ ಬದಲಾಗಿದೆ.

ಬಸ್ ನಿಲ್ದಾದಿಂದ ಕೂಗಳತೆ ದೂರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ‌ ಭವನ‌ದ ನಿರ್ವಹಣೆಗೆ ನಗರಸಭೆ ಮುಂದಾಗದಿರುವ ಕಾರಣ ಭವನದ ಆವರಣ ಮತ್ತು ಭವನದೊಳಗೆ ಕಸಕಡ್ಡಿ‌ಯಥೇಚ್ಛವಾಗಿ ಬೆಳೆದುಕೊಂಡಿದೆ.

ಸುಂದರ ಸಮಾರಂಭ ಹಾಗೂ ವಿವಿಧ ಶುಭ ಕಾರ್ಯಗಳಿಗೆ ಬಳಕೆಯಾಗಬೇಕಿದ್ದ ಭವನಕ್ಕೆ ಗ್ರಹಣ ಹಿಡಿದಿದ್ದು ಅಧಿಕಾರಿಗಳು ಕನಿಷ್ಠ ಸ್ವಚ್ಛತೆಗೂ‌ ಮುಂದಾಗದಿರುವುದು‌ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಮಲಮೂತ್ರ ವಿಸರ್ಜನೆ ಕೆಂದ್ರವಾದ ಭವನ : ಕೋಟಿ‌ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಾಲ್ಮೀಕಿ‌ ಭವನ ಇಂದು‌ ಸಾರ್ವಜನಿಕರ‌‌ ಮಲಮೂತ್ರ ವಿಸರ್ಜನೆ ಕೇಂದ್ರವಾಗಿ‌ ಬದಲಾಗಿದೆ. ಭವನದೆದುರಿನ ಗೇಟ್ ಕಿತ್ತು ಹೋಗಿದ್ದು ಅಕ್ಕಪಕ್ಕದ ಸಾರ್ವಜನಿಕರು ಭವನದ ಅಂಗಳದಲ್ಲಿಯೇ‌ ಮಲಮೂತ್ರ ವಿಸರ್ಜನೆ‌ ಮಾಡುತ್ತಿದ್ದಾರೆ. ಭವನದ ಸಮೀಪ‌ ಸುತ್ತ ದುರ್ವಾಸನೆ‌ ಬೀರುತ್ತಿದ್ದು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಉಂಟಾಗಿದೆ.

ಒಡೆದ ಕಿಟಕಿ ಗಾಜುಗಳು : ಭವನ ನಿರ್ಮಾಣವಾಗಿ ಕೆಲ ವರ್ಷಗಳು ಕಳೆದಿವೆ. ಆದರೂ‌ ಇದುವರೆಗೂ ಯಾವ ಶುಭ ಕಾರ್ಯಗಳಾಗಲಿ‌ ಸಮುದಾಯದ ಕಾರ್ಯಕ್ರಮಗಳಾಗಲಿ‌ ನಡೆದಿಲ್ಲ. ಅದಾಗಲೇ ಭವನದ ಕಿಟಕಿಗಳಿಗೆ ಅಳವಡಿಸಿರುವ ಗಾಜುಗಳು ಒಡೆದುಹೋಗಿದ್ದು, ಬಾಗಿಲುಗಳು ಹುಳು‌ ತಿನ್ನುವ ಹಂತಕ್ಕೆ‌ ತಲುಪಿವೆ. ಭವನದೊಳಗೆ ಕಸ ಗುಡಿಸದ ಕಾರಣ ನೆಲದಲ್ಲೆಲ್ಲ ಅಪಾರ‌ ಪ್ರಮಾಣದ ಧೂಳು ಸಂಗ್ರಹಗೊಂಡಿದೆ. ಭವನಕ್ಕೆ ಅಳವಡಿಸಿರುವ ಕಬ್ಬಿಣದ ವಸ್ತುಗಳು ಮಳೆಗಾಳಿಗೆ ತುಕ್ಕು‌ಹಿಡಿಯುತ್ತಿವೆ.

ಕಿತ್ತುಹೋಗಿರುವ ಮುಖ್ಯ ಗೇಟ್ : ಮಂಟೂರು ರಸ್ತೆಪಕ್ಕದಲ್ಲಿರುವ ಭವನದ‌‌ ಮುಖ್ಯ ಗೇಟ್ ಕಿತ್ತು ಹೋಗಿದ್ದು, ಭವನಕ್ಕೆ ಸೂಕ್ತ ರಕ್ಷಣೆಯೇ ಇದಲ್ಲದಂತಾಗಿದೆ. ಅದೂ ಅಲ್ಲದೆ ಭವನದ ಸುತ್ತ ನಿರ್ಮಿಸಿರುವ ಕಾಂಪೌಂಡ್ ಕೆಳಮಟ್ಟದಲ್ಲಿದ್ದು, ಸುತ್ತಮುತ್ತಲಿನ‌ ಜನರು ಕಾಂಪೌಂಡ್ ಜಿಗಿದು ಭವನದ ಆವರಣದಲ್ಲಿ‌ ಗಲೀಜು‌‌ ಮಾಡುತ್ತಿದ್ದಾರೆ. ಭವನಕ್ಕೆ ನೂತನ‌ ಕಾಂಪೌಂಡ್ ನಿರ್ಮಿಸಿ‌ಭವನದ ರಕ್ಷಣೆಗೆ ಅಧಿಕಾರಿಗಳು‌‌ ಮುಂದಾಗಬೇಕಿದೆ.

ಅನೈತಿಕ‌ ಚಟುವಟಿಕೆ‌‌ ಕೇಂದ್ರವಾಗಿರುವ ಕಟ್ಟಡ : ನಗರದ ಹೃದಯಭಾಗದಲ್ಲಿ‌ರುವ ಕಟ್ಟಡ ಕತ್ತಲಾದರೆ ಸಾಕು‌ ಕುಡುಕರ ಹಾಗೂ ಅನೈತಿಕ‌ ಚಟುವಟಿಕೆ ಕೇಂದ್ರವಾಗಿ ಮಾರ್ಪಾಡಾಗುತ್ತದೆ. ಕತ್ತಲೆ ಹೊತ್ತಲ್ಲಿ‌ ಗಂಟೆಗಟ್ಟಲೆ ಕುಳಿತುಕೊಳ್ಳುವ ಕುಡುಕರು ತಾವು ಕುಡಿದ ಬಾಟಲಿಗಳನ್ನು ಅಲ್ಲಿಯೇ ಬಿಸಾಕಿ‌ ಭವನವನ್ನು ಅನೈತಿಕ ಚಟುವಟಿಕೆ‌ ಕೇಂದ್ರವನ್ನಾಗಿಸಿಕೊಂಡಿದ್ದಾರೆ.

ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು, ಹತ್ತಾರು ಶುಭ ಸಮಾರಂಭಗಳಿಗೆ ಸಾಕ್ಷಿಯಾಗಬೇಕಿದ್ದ ಸುಂದರ ಭವನವೊಂದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೊಳಗಾಗಿ‌ ನಗರದಲ್ಲಿ ತನ್ನ ಅಸ್ತಿತ್ವವನ್ನೆ‌ ಕಳೆದುಕೊಳ್ಳುತ್ತಿದೆ. ಇಮ್ನಾದರೂ ಅಧಿಕಾರಿಗಳು‌ ಭವನಕ್ಕೆ ಸೂಕ್ತ ಕಾಯಕಲ್ಪ‌ಒದಗಿಸಿ ಸಾರ್ವಜನಿಕ‌ಕಾರ್ಯಗಳಿಗೆ ಉಪಯೋಗವಾವಾಗುವಂತೆ ನೋಡಿಕೊಳ್ಳಬೇಕು ಎಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.
**
ಶ್ರೀ ಮಹರ್ಷಿ ವಾಲ್ಮೀಕಿ ಭವನದ ಸ್ವಚ್ಛತೆಗೆ ನಮ್ಮ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಶೀಘ್ರವೇ ಭವನವನ್ನು ಸ್ವಚ್ಛಗೊಳಿಸಿ ಭವನ ಉಪಯೋಗಕ್ಕೆ ರೂಪುರೇಷೆ ಸಿದ್ದಗೊಳಿಸಲಾಗುವುದು.
– ಗೋಪಾಲ‌‌ ಕಾಸೆ ನಗರಸಭೆ ಪೌರಾಯುಕ್ತ ಮುಧೋಳ

– ಗೋವಿಂದಪ್ಪ ತಳವಾರ ಮುಧೋಳ

ಟಾಪ್ ನ್ಯೂಸ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

2

Gangolli: ಅರಾಟೆ ಸೇತುವೆ ಬಳಿ ನಿಲ್ಲಿಸಿದ್ದ ಕಾರಿಗೆ ಬಸ್‌ ಡಿಕ್ಕಿ; ಕಾರು ಚಾಲಕ ಮೃತ್ಯು

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

5

City Lights Kannada Movie: ವಿಜಯ್‌ ‘ಸಿಟಿ ಲೈಟ್ಸ್‌’ಗೆ ವಿನಯ್‌ ಹೀರೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.