Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು


Team Udayavani, Sep 24, 2024, 9:47 AM IST

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ(ಸೆ.23) ರಾತ್ರಿ ಸತತವಾಗಿ 5 ಗಂಟೆಗೂ ಅಧಿಕ ಕಾಲ ಭಾರೀ ಮಳೆ ಸುರಿದಿದೆ. ಜನಜೀವನ ಅಸ್ತವ್ಯಸ್ತಗೊಂಡು, ಮನೆ-ಅಂಗಡಿಗಳಿಗೆ ಮಳೆ ನೀರು ನುಗ್ಗಿ ಪರದಾಡುವಂತಾಗಿದೆ. ಹಳ್ಳ-ಕೊಳ್ಳಗಳು ತುಂಬಿದ್ದು, ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ದೇವಸ್ಥಾನ ಜಲಾವೃತಗೊಂಡಿದೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಆರಂಭವಾದ ಮಳೆ ಇಡೀ ರಾತ್ರಿ ಸತತವಾಗಿ ಅಬ್ಬರಿಸಿತು. ನಗರದಲ್ಲಿ ಜೋರು ಮಳೆ ಸುರಿದರೆ, ಜಿಲ್ಲೆಯ ವಿವಿಧೆಡೆ ಗುಡುಗು ಸಹಿತವಾಗಿ ಸುರಿಯಿತು. ಅದರಲ್ಲೂ ನಗರದಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಶಾಲಿ ನಗರ, ಭಾಗವಾನ್ ಕಾಲೋನಿ, ರಹೀಂ ನಗರ, ಮುಜಾವರ್ ಪ್ಲಾಟ್, ಪ್ರೈಂ ನಗರ, ಕನ್ನಾನ್ ನಗರ, ನೆಹರೂ ನಗರದಲ್ಲಿ ಮನೆಗಳು, ಅಂಗಡಿಗಳು ಜಲಾವೃತಗೊಂಡಿವೆ. ಕುಟುಂಬಸ್ಥರು ರಾತ್ರಿ ಜಾಗರಣೆ ಮಾಡುವಂತೆ ಆಗಿತ್ತು.

ಮನೆಗಳಲ್ಲಿರುವ ಪಡಿತರ, ಇನ್ನಿತರ ವಸ್ತುಗಳು ಮಳೆ ನೀರಿಗೆ ಹಾಳಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಅಲ್ಲದೆ, ಬೈಕ್ ಗಳು ನೀರಲ್ಲಿ‌ ಮುಳುಗಿವೆ. ಮನೆಗಳಿಂದ ನೀರು ಹೊರ ಹಾಕಲು ಹರಸಾಹಸ ಪಡುವಂತಾಗಿದೆ. ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಸ್ಥಳಗಳಿಗೆ ಭೇಟಿ ಕೊಟ್ಟು ನೀರು ಹೊರ ಹಾಕುವಲ್ಲಿ ನೆರವಾಗಿದ್ದಾರೆ.

ದೇವಸ್ಥಾನ ಜಲಾವೃತ: ವಿಜಯಪುರ ನಗರ ಮಾತ್ರವಲ್ಲದೇ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ನಾಲತವಾಡ, ತಿಕೋಟಾ, ನಿಡಗುಂದಿ ಸೇರಿ ಜಿಲ್ಲೆಯ ವಿವಿಧ ಭಾಗಗಳಲ್ಲೂ ಧಾರಾಕಾರ ಮಳೆ ಸುರಿದಿದೆ. ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ ಭರ್ತಿಯಾಗಿದೆ.

ಈ ಹಳ್ಳದ ನೀರಿನಿಂದ ಸಂಗಮನಾಥ ದೇವಸ್ಥಾನ ಜಲಾವೃತವಾಗಿದೆ. ಸಂಗಮನಾಥನ ಗರ್ಭಗುಡಿಗೆ ಹಳ್ಳದ ನೀರು ಹೊಕ್ಕಿದ್ದು, ಐದಾರು ಅಡಿ ಎತ್ತರ ನೀರು ನಿಂತಿದೆ. ಇದರಿಂದ ಪೂಜಾ, ಕೈಂಕರ್ಯ ಸ್ಥಗಿತಗೊಂಡಿವೆ. ಅಲ್ಲದೇ, ಸಂಗಮನಾಥ ದೇವಸ್ಥಾನದ ಬಳಿಯ ರಸ್ತೆ ಜಲಾವೃತಗೊಂಡಿದೆ.

ರೈತಾಪಿ ಜನರಿಗೆ ಸಂತಸ: ಈ ತಿಂಗಳ ಆರಂಭದಿಂದಲೂ ಮಳೆ ಕೈ ಕೊಟ್ಟಿತ್ತು. ಇದರಿಂದ ತೊಗರಿ, ಇತರ ಬೆಳೆಗಳ ರೈತರು ಮಳೆಗಾಗಿ ಮೋಡ ನೋಡುವಂತೆ ಆಗಿತ್ತು. ಕೆಲ ಕಡೆ ಮಳೆಗಾಗಿ ಪೂಜೆ ಮಾಡಿ ಪ್ರಾರ್ಥಿಸಲಾಗಿತ್ತು. ಸೋಮವಾರ ಒಂದೇ ರಾತ್ರಿ ಉತ್ತಮ ಮಳೆಯಾದ ಕಾರಣ ರೈತಾಪಿ ಜನರಿಗೆ ಸಂತಸ ತಂದಿದೆ. ಜತೆಗೆ ಹಿಂಗಾರು ಬಿತ್ತನೆಗೆ ಈ ಮಳೆಯಿಂದ ಅನುಕೂಲವಾಗಲಿದೆ.

ಎಲ್ಲೆಲ್ಲಿ ಎಷ್ಟು ಮಳೆ: ಜಿಲ್ಲೆಯ ಹಲವೆಡೆ ಮಳೆ ಆರ್ಭಟಿಸಿದೆ. ರಾತ್ರಿ 8ರಿಂದ 11, 12 ಗಂಟೆಯವರೆಗೂ ನಿಡಗುಂದಿ ತಾಲೂಕಿನ ಇಟಗಿ ಹೋಬಳಿಯಲ್ಲಿ 77 ಎಂಎಂ, ಆಲಮಟ್ಟಿಯಲ್ಲಿ 67 ಎಂಎಂ, ತಿಕೋಟಾ ತಾಲೂಕಿನ ಸಿದ್ದಾಪುರದಲ್ಲಿ 75 ಎಂಎಂ, ಘೋನಸಗಿಯಲ್ಲಿ 68 ಎಂಎಂ, ಬಸವನಬಾಗೇವಾಡಿ ತಾಲೂಕಿನ ದಿಂಡವಾರದಲ್ಲಿ 78 ಎಂಎಂ, ನರಸಲಗಿಯಲ್ಲಿ 69.5 ಎಂಎಂ, ಮುದ್ದೇಬಿಹಾಳ ತಾಲೂಕಿನ ಬಸರಕೋಡದಲ್ಲಿ 64.5 ಎಂಎಂ, ಮುದ್ದೇಬಿಹಾಳ ಹೋಬಳಿಯಲ್ಲಿ 77 ಎಂಎಂ ಮಳೆ ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರ ಮಾಹಿತಿ ನೀಡಿದೆ.

ಇದನ್ನೂ ಓದಿ: Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

ಟಾಪ್ ನ್ಯೂಸ್

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು

1(5)

Puttur :ಸಾಲು ಮರದ ತಿಮ್ಮಕ್ಕ ಪಾರ್ಕ್‌ ಸಾಲು ಸಾಲು ಸಮಸ್ಯೆ!

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.