Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು
Team Udayavani, Sep 24, 2024, 1:50 PM IST
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಬಾಗಿಲಿನ ಚಿಲಕ ಮುರಿದು ಮನೆಯಲ್ಲಿದ್ದ ನಗನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ದೋಚಿದ ಘಟನೆ ಬಂಟ್ವಾಳದ ಸಜೀಪಮುನ್ನುರು ಎಂಬಲ್ಲಿ ಸೋಮವಾರ(ಸೆ.23) ರಂದು ಸಂಜೆ ಬೆಳಕಿಗೆ ಬಂದಿದೆ.
ಏನಿದು ಘಟನೆ:
ಸಜೀಪಮುನ್ನುರು ಗ್ರಾಮದ ನಿವಾಸಿಯಾಗಿರುವ ಜಯಲಕ್ಷ್ಮಿ ಅವರು ಸೆ.7 ರಂದು ಮನೆಗೆ ಬೀಗ ಹಾಕಿ ಪುತ್ತೂರು ಸಂಟ್ಯಾರ್ ಕೈಕಾರ್ ನಲ್ಲಿರುವ ತನ್ನ ತಾಯಿ ಮನೆಗೆ ತೆರಳಿದ್ದು ಸೆಪ್ಟೆಂಬರ್ 23ರ ಸಂಜೆ ಮನೆಗೆ ಹಿಂತಿರುಗಿ ಬಂದಾಗ, ಮನೆಯ ಬಾಗಿಲಿನ ಡೋರ್ ಲಾಕ್ ಮುರಿದಿತ್ತು, ಕಿಟಕಿಯ ಸರಳನ್ನು ಬಗ್ಗಿಸಿ ಯಾರೋ ಕಳ್ಳರು ಒಳಗೆ ನುಗ್ಗಿರುವುದು ಬೆಳಕಿಗೆ ಬಂದಿದೆ, ಬಳಿಕ ಮನೆಯೊಳಗೆ ಹೋಗಿ ನೋಡಿದಾಗ ಗೋಡ್ರೇಜ್ ಮತ್ತು ಬೆಡ್ ರೂಂ ನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಬಿದ್ದಿರುವುದು ಕಂಡುಬಂದಿದೆ, ಅಲ್ಲದೆ ಗೋಡ್ರೇಜ್ ನಲ್ಲಿ ಇಟ್ಟಿದ್ದ ಸುಮಾರು 2 ½ ಪವನ್ ತೂಕದ 2 ಚಿನ್ನದ ಬಳೆಗಳು ಮತ್ತು 25000/- ನಗದನ್ನು ಕಳ್ಳರು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಕಳುವಾದ ಸೊತ್ತುಗಳ ಒಟ್ಟು ಮೌಲ್ಯ 1,25,000 ಅಂದಾಜಿಸಲಾಗಿದೆ.
ಘಟನೆಗೆ ಸಂಬಂಧಿಸಿ ಮಹಿಳೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಲಾರಿ- ಬೈಕ್ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು
ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ
Puttur :ಸಾಲು ಮರದ ತಿಮ್ಮಕ್ಕ ಪಾರ್ಕ್ ಸಾಲು ಸಾಲು ಸಮಸ್ಯೆ!
Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ
Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.