Devara: ಅಡ್ವಾನ್ಸ್ ಬುಕಿಂಗ್ನಲ್ಲೇ ಕೋಟಿ- ಕೋಟಿ ಗಳಿಸಿದ ʼದೇವರʼ; ಎಲ್ಲಿ ಎಷ್ಟು ಗಳಿಕೆ?
Team Udayavani, Sep 24, 2024, 2:45 PM IST
ಹೈದರಾಬಾದ್: ಟಾಲಿವುಡ್(Tollywood) ನಲ್ಲಿ ʼದೇವರʼ(Devara Part -1) ಹವಾ ಜೋರಾಗಿ ಬೀಸುತ್ತಿದೆ. ʼಆರ್ ಆರ್ ಆರ್ʼ ಬಳಿಕ ಮೊದಲ ಬಾರಿ ಜೂ.ಎನ್ ಟಿಆರ್ (Jr. NTR) ಬಿಗ್ ಸ್ಕ್ರೀನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪ್ಯಾನ್ ಇಂಡಿಯಾದಲ್ಲಿ (Pan india) ʼದೇವರʼ ರಿಲೀಸ್ ಆಗಲಿದೆ. ಬಿಡುಗಡೆಗೆ ಕೇವಲ 4 ದಿನಗಳ ಮಾತ್ರ ಬಾಕಿ ಉಳಿದಿದೆ. ದೇಶದೆಲ್ಲೆಡೆ 1,300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಅದ್ಧೂರಿಯಾಗಿ ತೆರೆ ಕಾಣಲಿದೆ.
ಇತ್ತೀಚೆಗೆ ಸಿನಿಮಾ ತಂಡ ದೊಡ್ಡಮಟ್ಟದಲ್ಲಿ ಪ್ರೀ- ರಿಲೀಸ್ ಇವೆಂಟ್ ನಡೆಸುವ ಯೋಜನೆಯನ್ನು ಹಾಕಿಕೊಂಡು ಕೊನೆಕ್ಷಣದಲ್ಲಿ ರದ್ದು ಮಾಡಿದ್ದರಿಂದ ಸಾವಿರಾರು ಜೂ.ಎನ್ ಟಿಆರ್ ಅಭಿಮಾನಿಗಳು ನಿರಾಶರಾಗಿದ್ದಾರೆ.
ಈ ನಡುವೆ ಚಿತ್ರತಂಡ ಸೆ.23ರಂದು ʼದೇವರʼ ಅಡ್ವಾನ್ಸ್ ಬುಕಿಂಗ್ (Advance Booking) ಆರಂಭಿಸಿದೆ. ಮೊದಲ ದಿನವೇ ಲಕ್ಷ ಲಕ್ಷ ಟಿಕೆಟ್ ಸೇಲ್ ಆಗಿದ್ದು, ಕೋಟಿ – ಕೋಟಿ ಹಣವನ್ನು ಚಿತ್ರ ಗಳಿಸಿದೆ.
ಮುಂಗಡ ಬುಕಿಂಗ್ನಲ್ಲಿ ಭಾರತದಾದ್ಯಂತ 8 ಕೋಟಿ ರೂಪಾಯಿಯನ್ನು ʼದೇವರʼ ಗಳಿಸಿದೆ ಎಂದು ವರದಿಯಾಗಿದೆ.
ಇತ್ತ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಮಲ್ಟಿಪ್ಲೆಕ್ಸ್ಗಳಿಗೆ ರಾಜ್ಯದಲ್ಲಿ ಟಿಕೆಟ್ ದರವನ್ನು ಹೆಚ್ಚಿಸಲು ಅನುಮತಿ ನೀಡಿದ್ದರಿಂದ ʼದೇವರʼ ಟಿಕೆಟ್ ಬೆಲೆಯಲ್ಲಿ ಏರಿಕೆ ಆಗಿದ್ದರೂ ಜನ ಅದನ್ನು ಲೆಕ್ಕಿಸದೆ ಸಿನಿಮಾದ ಟಿಕೆಟ್ ಖರೀದಿಸಿದ್ದಾರೆ.
8 ಕೋಟಿಯಲ್ಲಿ ಆಂಧ್ರಪ್ರದೇಶವೊಂದರಲ್ಲೇ 1,187 ಶೋಗಳ 5.10 ಕೋಟಿ ಮೌಲ್ಯದ ಟಿಕೆಟ್ಗಳು ಮಾರಾಟವಾಗಿವೆ ಎಂದು ಸ್ಯಾಕ್ನಿಲ್ಕ್ ವರದಿ ಮಾಡಿದೆ. ತೆಲಂಗಾಣದಲ್ಲಿ 11.58 ಲಕ್ಷ ಮೌಲ್ಯದ ಟಿಕೆಟ್ಗಳು ಮಾರಾಟವಾಗಿದ್ದು, ಇಲ್ಲಿ 25 ಶೋಗಳಿವೆ. ಮಧ್ಯರಾತ್ರಿಯಿಂದಲೇ ಇಲ್ಲಿ ಶೋಗಳು ಇರಲಿವೆ.
ಕರ್ನಾಟಕದಲ್ಲಿ 451 ಶೋಗಳಿದ್ದು, ಇಲ್ಲಿಯವರೆಗೆ ಸುಮಾರು 2.36 ಕೋಟಿ ರೂ. ಮೌಲ್ಯ ಟಿಕೆಟ್ ಸೇಲ್ ಆಗಿದೆ ಎಂದು ವರದಿಯಾಗಿದೆ.
ನ್ಯೂಯಾರ್ಕ್ ಸೇರಿದಂತೆ ಅಮೆರಿಕಾದಲ್ಲಿ ಈಗಾಗಲೇ ʼದೇವರʼ ಅಡ್ವಾನ್ಸ್ ಬುಕಿಂಗ್ ವಿಚಾರದಲ್ಲಿ ದಾಖಲೆ ಬರೆದಿದೆ.
ಕೊರಟಾಲ ಶಿವ ನಿರ್ದೇಶನದ ʼದೇವರʼ ಚಿತ್ರವು ಇದೇ ಶುಕ್ರವಾರ (ಸೆಪ್ಟೆಂಬರ್ 27 ರಂದು) ಬಿಡುಗಡೆಯಾಗಲಿದೆ. ಜೂನಿಯರ್ ಎನ್ಟಿಆರ್ ಜತೆ ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ತೆರೆ ಹಂಚಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್ ಬಂಧಿಸಿದ ಪೊಲೀಸರು
Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್ ಇವೆಂಟ್ ರದ್ದು
Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್ ಚಿರಂಜೀವಿ ಹೆಸರು
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್?- ಫೋಟೋ ವೈರಲ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ
Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ
Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.